ತೂಬಗೆರೆಯಲ್ಲಿ ಅದ್ಧೂರಿಯಾಗಿ ನಡೆದ ಸುಪ್ರಸಿದ್ಧ ಭೂತ ನೆರಿಗೆ ಆಚರಣೆ

ತಾಲೂಕಿನ ತೂಬಗೆರೆ ಗ್ರಾಮದಲ್ಲಿಂದು 600 ವರ್ಷಗಳಿಂದ ಆಚರಿಸಿಕೊಂಡು ಬಂದಿರುವ ಪಾರಂಪರಿಕ ಜನಪದ ಹಬ್ಬವಾದ ಭೂತ ನೆರಿಗೆ ಆಚರಣೆ ವಿಜೃಂಭಣೆಯಿಂದ ನಡೆಯಿತು.

ಪ್ರತಿವರ್ಷದಂತೆ ಈ ವರ್ಷವೂ ಸಹ ಆಷಾಡ ಮಾಸದ ಏಕಾದಶಿಯಾದ ಮಾರನೇ ದಿನವಾದ ದ್ವಾದಶಿಯಂದು ಭೂತ ನೆರಿಗೆ ಹಬ್ಬವನ್ನು ಆಚರಿಸಲಾಯಿತು.

ಕರಿಯಣ್ಣ – ಕೆಂಚಣ್ಣರ ವೇಷಧಾರಿಯಾದವರ ಮೇಲೆ ಭೂತ ಆಹ್ವಾನಿಸಿ, ಆರ್ಭಟಿಸಿದಾಗ ಇವರ ಹಸಿವು ತಣಿಸುವ ಕೆಲಸ ಮಾಡಲಾಯಿತು. ವೇಷಧಾರಿಗಳು ಮನೆಗೆ ಬಂದರೆ ಮನೆಯಲ್ಲಿನ ದೆವ್ವ ಪೀಡೆ ಪಿಶಾಚಿಗಳು ಓಡಿ ಹೋಗುತ್ತವೆ ಎಂಬ ನಂಬಿಕೆಯೂ ಸಹ ಇದೆ.

ಭೂತ ನೆರಿಗೆ ಹಿನ್ನೆಲೆ

ವಿಷ್ಣುವಿನ ದ್ವಾರಪಾಲಕರಾದ ಜಯ-ವಿಜಯರು ಶಾಪಕ್ಕೆ ಗುರಿಯಾಗಿ ಕಲಿಯುಗದಲ್ಲಿ ಕರಿಯಣ್ಣ ಕೆಂಚಣ್ಣರಾಗಿ ಭೂಲೋಕಕ್ಕೆ ಬರುತ್ತಾರೆ ಎಂಬ ಐತಿಹಾಸಿಕ ಹಿನ್ನೆಲೆ ಇದೆ.
ಸುಮಾರು 600 ವರ್ಷಗಳ ಇತಿಹಾಸವಿರುವ ಈ ಭೂತನೆರಿಗೆ ಹಬ್ಬ ಇಂದಿಗೂ ಸಹ ತೂಬಗೆರೆ ಹಾಗೂ ಕಲ್ಲುಕೋಟೆ ಗ್ರಾಮದಲ್ಲಿ ನಡೆದುಕೊಂಡು ಬರುತ್ತಿದೆ.

ಭೂತನೆರಿಗೆ ಹಬ್ಬದಲ್ಲಿ ಕರಿಯಣ್ಣ ಮತ್ತು ಕೆಂಚಣ್ಣ ವೇಷಧಾರಿಗಳು ಒಂದು ಕೈಯಲ್ಲಿ ಭೂತದ ಮುಖ ಹೋಲುವ ವರ್ತುಲಾಕಾರದ ನೆರಿಗೆ ಹಿಡಿದಿರುತ್ತಾರೆ. ಮತ್ತೊಂದು ಕೈಯಲ್ಲಿ ಕತ್ತಿ ಹಿಡಿದಿರುತ್ತಾರೆ.

ಲಕ್ಷ್ಮಿನರಸಿಂಹಸ್ವಾಮಿ ಭಕ್ತರು ಕೆಂಚಣ್ಣ-ಕರಿಯಣ್ಣರ ಮುಂದೆ ವಿಷ್ಣುವಿನ ನಾಮಸ್ಮರಣೆ ಮತ್ತು ಗುಣಗಾನ ಮಾಡುತ್ತಾ ಇವರನ್ನು ಕೆಣಕುತ್ತಾರೆ. ವಿಷ್ಣುವಿನ ನಾಮಸ್ಮರಣೆ ಸಹಿಸದ ಈ ಕರಿಯಣ್ಣ ಮತ್ತು ಕೆಂಚಣ್ಣ ಭಕ್ತರ ಮೇಲೆ ಕೋಪಗೊಂಡು ಅವರೆಡೆಗೆ ನುಗ್ಗುತ್ತಾರೆ.

ಕೋಪಗೊಂಡ ಕರಿಯಣ್ಣ ಕೆಂಚಣ್ಣರನ್ನು ಸಮಾಧಾನ ಮಾಡಲು ಇತರರು ಅವರ ಬಾಯಿಗೆ ಬಾಳೆ ಹಣ್ಣಿನ, ಹಲಸಿನ ಹಣ್ಣಿನಿಂದ ತಯಾರಿಸಿದ ರಸಾಯನವನ್ನು ತಿನ್ನಿಸುತ್ತಾರೆ. ಆವೇಶಕ್ಕೆ ಒಳಗಾದ ಈ ಭೂತಗಳು ಆ ಸಂದರ್ಭದಲ್ಲಿ ಏನು ಕೊಟ್ಟರೂ ತಿನ್ನುತ್ತಾರೆ ಎಂಬುದು ಜಾನಪದರ ನಂಬಿಕೆ. ಕೆಲವು ಗ್ರಾಮಗಳಲ್ಲಿ ನಡೆಯುವ ಈ ಹಬ್ಬದಲ್ಲಿ ಕರಿಯಣ್ಣ ಮತ್ತು ಕೆಂಚಣ್ಣರ ಬಾಯಿಗೆ ಕುರಿ-ಕೋಳಿಗಳನ್ನು ನೀಡುತ್ತಾರೆ. ಇವುಗಳ ರಕ್ತ ಹೀರುವುದರೊಂದಿಗೆ ಕರಿಯಣ್ಣ-ಕೆಂಚಣ್ಣ ಶಾಂತರಾಗುತಾರೆ ಎನ್ನುವುದು ಈ ಭಾಗದ ಭಕ್ತರ ನಂಬಿಕೆ.

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

15 minutes ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

2 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

5 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

6 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

17 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

18 hours ago