ತಾಲೂಕಿನ ತೂಬಗೆರೆ ಗ್ರಾಮದಲ್ಲಿಂದು 600 ವರ್ಷಗಳಿಂದ ಆಚರಿಸಿಕೊಂಡು ಬಂದಿರುವ ಪಾರಂಪರಿಕ ಜನಪದ ಹಬ್ಬವಾದ ಭೂತ ನೆರಿಗೆ ಆಚರಣೆ ವಿಜೃಂಭಣೆಯಿಂದ ನಡೆಯಿತು.
ಪ್ರತಿವರ್ಷದಂತೆ ಈ ವರ್ಷವೂ ಸಹ ಆಷಾಡ ಮಾಸದ ಏಕಾದಶಿಯಾದ ಮಾರನೇ ದಿನವಾದ ದ್ವಾದಶಿಯಂದು ಭೂತ ನೆರಿಗೆ ಹಬ್ಬವನ್ನು ಆಚರಿಸಲಾಯಿತು.
ವಿಷ್ಣುವಿನ ದ್ವಾರಪಾಲಕರಾದ ಜಯ-ವಿಜಯರು ಶಾಪಕ್ಕೆ ಗುರಿಯಾಗಿ ಕಲಿಯುಗದಲ್ಲಿ ಕರಿಯಣ್ಣ ಕೆಂಚಣ್ಣರಾಗಿ ಭೂಲೋಕಕ್ಕೆ ಬರುತ್ತಾರೆ ಎಂಬ ಐತಿಹಾಸಿಕ ಹಿನ್ನೆಲೆ ಇದೆ.
ಸುಮಾರು 600 ವರ್ಷಗಳ ಇತಿಹಾಸವಿರುವ ಈ ಭೂತನೆರಿಗೆ ಹಬ್ಬ ಇಂದಿಗೂ ಸಹ ತೂಬಗೆರೆ ಹಾಗೂ ಕಲ್ಲುಕೋಟೆ ಗ್ರಾಮದಲ್ಲಿ ನಡೆದುಕೊಂಡು ಬರುತ್ತಿದೆ.
ಭೂತನೆರಿಗೆ ಹಬ್ಬದಲ್ಲಿ ಕರಿಯಣ್ಣ ಮತ್ತು ಕೆಂಚಣ್ಣ ವೇಷಧಾರಿಗಳು ಒಂದು ಕೈಯಲ್ಲಿ ಭೂತದ ಮುಖ ಹೋಲುವ ವರ್ತುಲಾಕಾರದ ನೆರಿಗೆ ಹಿಡಿದಿರುತ್ತಾರೆ. ಮತ್ತೊಂದು ಕೈಯಲ್ಲಿ ಕತ್ತಿ ಹಿಡಿದಿರುತ್ತಾರೆ.
ಕೋಪಗೊಂಡ ಕರಿಯಣ್ಣ ಕೆಂಚಣ್ಣರನ್ನು ಸಮಾಧಾನ ಮಾಡಲು ಇತರರು ಅವರ ಬಾಯಿಗೆ ಬಾಳೆ ಹಣ್ಣಿನ, ಹಲಸಿನ ಹಣ್ಣಿನಿಂದ ತಯಾರಿಸಿದ ರಸಾಯನವನ್ನು ತಿನ್ನಿಸುತ್ತಾರೆ. ಆವೇಶಕ್ಕೆ ಒಳಗಾದ ಈ ಭೂತಗಳು ಆ ಸಂದರ್ಭದಲ್ಲಿ ಏನು ಕೊಟ್ಟರೂ ತಿನ್ನುತ್ತಾರೆ ಎಂಬುದು ಜಾನಪದರ ನಂಬಿಕೆ. ಕೆಲವು ಗ್ರಾಮಗಳಲ್ಲಿ ನಡೆಯುವ ಈ ಹಬ್ಬದಲ್ಲಿ ಕರಿಯಣ್ಣ ಮತ್ತು ಕೆಂಚಣ್ಣರ ಬಾಯಿಗೆ ಕುರಿ-ಕೋಳಿಗಳನ್ನು ನೀಡುತ್ತಾರೆ. ಇವುಗಳ ರಕ್ತ ಹೀರುವುದರೊಂದಿಗೆ ಕರಿಯಣ್ಣ-ಕೆಂಚಣ್ಣ ಶಾಂತರಾಗುತಾರೆ ಎನ್ನುವುದು ಈ ಭಾಗದ ಭಕ್ತರ ನಂಬಿಕೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…