ತೂಬಗೆರೆ: ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಯುವಕರಲ್ಲಿ ಕ್ರೀಡಾ ಮನೋಭಾವ ಹೆಚ್ಚಿಸುವ ನಿಟ್ಟಿನಲ್ಲಿ “ಕಿಟ್ಟಿ ಕಪ್ ” ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ತಾಲೂಕಿನ ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯ ಟಿ ಎನ್ ಕೃಷ್ಣಪ್ಪ ( ಕಿಟ್ಟಿ ) ಆಚರಿಸಿಕೊಂಡಿದ್ದಾರೆ.
ಹುಟ್ಟುಹಬ್ಬದ ಶುಭಾಶಯ ಕೋರಿದ ನಂತರ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪಿಳ್ಳ ಮುನಿಶಾಮಪ್ಪ ಮಾಧ್ಯಮಗಳೊಂದಿಗೆ ಮಾತನಾಡಿ ಸ್ಥಳೀಯವಾಗಿ ಬಿಜೆಪಿ ಪಕ್ಷವನ್ನು ಸಂಘಟಿಸಲು ನಿರಂತರ ಶ್ರಮಿಸುತ್ತಿರುವ ಕೃಷ್ಣಪ್ಪ (ಕಿಟ್ಟಿ ) ಸಮಾಜದ ಎಲ್ಲ ವರ್ಗದ ಜನರ ವಿಶ್ವಾಸ ಗಳಿಸುವದಷ್ಟೇ ಅಲ್ಲದೇ ಅವರ ಸಮಸ್ಯೆಗಳ ಪರಿಹಾರಕ್ಕೆ ಸದಾ ಮುಂದಿದ್ದು, ಮುಂದಾಳತ್ವ ವಹಿಸಿ ಪರಿಹಾರ ಕಲ್ಪಿಸುವುದು ಶ್ಲಾಘನೀಯ ವಿಷಯವಾಗಿದೆ, ಅವರ ಸೇವಾ ಕರೆಗಳು ಹೀಗೆ ಮುಂದುವರೆಯಲಿ ಎಂದರು.
ಗ್ರಾಮ ಪಂಚಾಯತಿ ಸದಸ್ಯ ಕೃಷ್ಣಪ್ಪ (ಕಿಟ್ಟಿ) ಮಾತನಾಡಿ ಈ ಹಿಂದೆ ಬಿಜೆಪಿ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಿಜೆಪಿ ನಾಯಕರು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಆದ ಪಿಳ್ಳ ಮುನಿಶಾಮಪ್ಪ ರವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದೆವು. ಅಂದಿನಿಂದ ಇಂದಿನವರೆಗೂ ಪಕ್ಷ ಸಿದ್ದಂತವನ್ನು ಬಿಟ್ಟುಕೊಡದೆ ಸರ್ಕಾರದ ಯೋಜನೆಗಳನ್ನು ಗ್ರಾಮಸ್ಥರಿಗೆ ತಲುಪಿಸುವುದು ಅವರಿಗೆ ಅನ್ಯಾಯವಾದಾಗ ನ್ಯಾಯಪರ ಹೋರಾಟಗಳನ್ನು ಮಾಡುವ ಮೂಲಕ ಸದಾ ಅವರ ಬೆಂಬಲವಾಗಿ ನಿಂತಿದ್ದೇನೆ , ಜೊತೆಗೆ ನಿರಂತರ ನಮ್ಮ ಕೈಲಾದಷ್ಟು ಸೇವೆ ಮಾಡಿಕೊಳ್ಳುತ್ತಾ ಬರುತ್ತಿದ್ದೇವೆ, ಮುಂದೆಯೂ ಸಹ ನಮ್ಮ ಜನರ ಧ್ವನಿಯಾಗಿ ಅನ್ಯಾಯದ ವಿರುದ್ಧವಾಗಿ ಹೋರಾಟಗಳನ್ನು ನಡೆಸುತ್ತಾ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ನನ್ನ ಕೈಲಾದ ಸೇವೆಯನ್ನು ಸದಾ ಮಾಡುತ್ತೇನೆ ಎಂದರು.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…