ತೂಬಗೆರೆ: ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಯುವಕರಲ್ಲಿ ಕ್ರೀಡಾ ಮನೋಭಾವ ಹೆಚ್ಚಿಸುವ ನಿಟ್ಟಿನಲ್ಲಿ “ಕಿಟ್ಟಿ ಕಪ್ ” ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ತಾಲೂಕಿನ ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯ ಟಿ ಎನ್ ಕೃಷ್ಣಪ್ಪ ( ಕಿಟ್ಟಿ ) ಆಚರಿಸಿಕೊಂಡಿದ್ದಾರೆ.
ಹುಟ್ಟುಹಬ್ಬದ ಶುಭಾಶಯ ಕೋರಿದ ನಂತರ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪಿಳ್ಳ ಮುನಿಶಾಮಪ್ಪ ಮಾಧ್ಯಮಗಳೊಂದಿಗೆ ಮಾತನಾಡಿ ಸ್ಥಳೀಯವಾಗಿ ಬಿಜೆಪಿ ಪಕ್ಷವನ್ನು ಸಂಘಟಿಸಲು ನಿರಂತರ ಶ್ರಮಿಸುತ್ತಿರುವ ಕೃಷ್ಣಪ್ಪ (ಕಿಟ್ಟಿ ) ಸಮಾಜದ ಎಲ್ಲ ವರ್ಗದ ಜನರ ವಿಶ್ವಾಸ ಗಳಿಸುವದಷ್ಟೇ ಅಲ್ಲದೇ ಅವರ ಸಮಸ್ಯೆಗಳ ಪರಿಹಾರಕ್ಕೆ ಸದಾ ಮುಂದಿದ್ದು, ಮುಂದಾಳತ್ವ ವಹಿಸಿ ಪರಿಹಾರ ಕಲ್ಪಿಸುವುದು ಶ್ಲಾಘನೀಯ ವಿಷಯವಾಗಿದೆ, ಅವರ ಸೇವಾ ಕರೆಗಳು ಹೀಗೆ ಮುಂದುವರೆಯಲಿ ಎಂದರು.
ಗ್ರಾಮ ಪಂಚಾಯತಿ ಸದಸ್ಯ ಕೃಷ್ಣಪ್ಪ (ಕಿಟ್ಟಿ) ಮಾತನಾಡಿ ಈ ಹಿಂದೆ ಬಿಜೆಪಿ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಿಜೆಪಿ ನಾಯಕರು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಆದ ಪಿಳ್ಳ ಮುನಿಶಾಮಪ್ಪ ರವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದೆವು. ಅಂದಿನಿಂದ ಇಂದಿನವರೆಗೂ ಪಕ್ಷ ಸಿದ್ದಂತವನ್ನು ಬಿಟ್ಟುಕೊಡದೆ ಸರ್ಕಾರದ ಯೋಜನೆಗಳನ್ನು ಗ್ರಾಮಸ್ಥರಿಗೆ ತಲುಪಿಸುವುದು ಅವರಿಗೆ ಅನ್ಯಾಯವಾದಾಗ ನ್ಯಾಯಪರ ಹೋರಾಟಗಳನ್ನು ಮಾಡುವ ಮೂಲಕ ಸದಾ ಅವರ ಬೆಂಬಲವಾಗಿ ನಿಂತಿದ್ದೇನೆ , ಜೊತೆಗೆ ನಿರಂತರ ನಮ್ಮ ಕೈಲಾದಷ್ಟು ಸೇವೆ ಮಾಡಿಕೊಳ್ಳುತ್ತಾ ಬರುತ್ತಿದ್ದೇವೆ, ಮುಂದೆಯೂ ಸಹ ನಮ್ಮ ಜನರ ಧ್ವನಿಯಾಗಿ ಅನ್ಯಾಯದ ವಿರುದ್ಧವಾಗಿ ಹೋರಾಟಗಳನ್ನು ನಡೆಸುತ್ತಾ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ನನ್ನ ಕೈಲಾದ ಸೇವೆಯನ್ನು ಸದಾ ಮಾಡುತ್ತೇನೆ ಎಂದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…