ತೂಬಗೆರೆ: ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಯುವಕರಲ್ಲಿ ಕ್ರೀಡಾ ಮನೋಭಾವ ಹೆಚ್ಚಿಸುವ ನಿಟ್ಟಿನಲ್ಲಿ “ಕಿಟ್ಟಿ ಕಪ್ ” ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ತಾಲೂಕಿನ ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯ ಟಿ ಎನ್ ಕೃಷ್ಣಪ್ಪ ( ಕಿಟ್ಟಿ ) ಆಚರಿಸಿಕೊಂಡಿದ್ದಾರೆ.
ಹುಟ್ಟುಹಬ್ಬದ ಶುಭಾಶಯ ಕೋರಿದ ನಂತರ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪಿಳ್ಳ ಮುನಿಶಾಮಪ್ಪ ಮಾಧ್ಯಮಗಳೊಂದಿಗೆ ಮಾತನಾಡಿ ಸ್ಥಳೀಯವಾಗಿ ಬಿಜೆಪಿ ಪಕ್ಷವನ್ನು ಸಂಘಟಿಸಲು ನಿರಂತರ ಶ್ರಮಿಸುತ್ತಿರುವ ಕೃಷ್ಣಪ್ಪ (ಕಿಟ್ಟಿ ) ಸಮಾಜದ ಎಲ್ಲ ವರ್ಗದ ಜನರ ವಿಶ್ವಾಸ ಗಳಿಸುವದಷ್ಟೇ ಅಲ್ಲದೇ ಅವರ ಸಮಸ್ಯೆಗಳ ಪರಿಹಾರಕ್ಕೆ ಸದಾ ಮುಂದಿದ್ದು, ಮುಂದಾಳತ್ವ ವಹಿಸಿ ಪರಿಹಾರ ಕಲ್ಪಿಸುವುದು ಶ್ಲಾಘನೀಯ ವಿಷಯವಾಗಿದೆ, ಅವರ ಸೇವಾ ಕರೆಗಳು ಹೀಗೆ ಮುಂದುವರೆಯಲಿ ಎಂದರು.
ಗ್ರಾಮ ಪಂಚಾಯತಿ ಸದಸ್ಯ ಕೃಷ್ಣಪ್ಪ (ಕಿಟ್ಟಿ) ಮಾತನಾಡಿ ಈ ಹಿಂದೆ ಬಿಜೆಪಿ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಿಜೆಪಿ ನಾಯಕರು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಆದ ಪಿಳ್ಳ ಮುನಿಶಾಮಪ್ಪ ರವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದೆವು. ಅಂದಿನಿಂದ ಇಂದಿನವರೆಗೂ ಪಕ್ಷ ಸಿದ್ದಂತವನ್ನು ಬಿಟ್ಟುಕೊಡದೆ ಸರ್ಕಾರದ ಯೋಜನೆಗಳನ್ನು ಗ್ರಾಮಸ್ಥರಿಗೆ ತಲುಪಿಸುವುದು ಅವರಿಗೆ ಅನ್ಯಾಯವಾದಾಗ ನ್ಯಾಯಪರ ಹೋರಾಟಗಳನ್ನು ಮಾಡುವ ಮೂಲಕ ಸದಾ ಅವರ ಬೆಂಬಲವಾಗಿ ನಿಂತಿದ್ದೇನೆ , ಜೊತೆಗೆ ನಿರಂತರ ನಮ್ಮ ಕೈಲಾದಷ್ಟು ಸೇವೆ ಮಾಡಿಕೊಳ್ಳುತ್ತಾ ಬರುತ್ತಿದ್ದೇವೆ, ಮುಂದೆಯೂ ಸಹ ನಮ್ಮ ಜನರ ಧ್ವನಿಯಾಗಿ ಅನ್ಯಾಯದ ವಿರುದ್ಧವಾಗಿ ಹೋರಾಟಗಳನ್ನು ನಡೆಸುತ್ತಾ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ನನ್ನ ಕೈಲಾದ ಸೇವೆಯನ್ನು ಸದಾ ಮಾಡುತ್ತೇನೆ ಎಂದರು.
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…