ತೂಬಗೆರೆಯಲ್ಲಿ “ಕಿಟ್ಟಿ ಕಪ್” ಕ್ರಿಕೆಟ್ ಪಂದ್ಯಾವಳಿ

ತೂಬಗೆರೆ: ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಯುವಕರಲ್ಲಿ ಕ್ರೀಡಾ ಮನೋಭಾವ ಹೆಚ್ಚಿಸುವ ನಿಟ್ಟಿನಲ್ಲಿ “ಕಿಟ್ಟಿ ಕಪ್ ” ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ತಾಲೂಕಿನ ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯ ಟಿ ಎನ್ ಕೃಷ್ಣಪ್ಪ ( ಕಿಟ್ಟಿ ) ಆಚರಿಸಿಕೊಂಡಿದ್ದಾರೆ.

ಹುಟ್ಟುಹಬ್ಬದ ಶುಭಾಶಯ ಕೋರಿದ ನಂತರ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪಿಳ್ಳ ಮುನಿಶಾಮಪ್ಪ ಮಾಧ್ಯಮಗಳೊಂದಿಗೆ ಮಾತನಾಡಿ ಸ್ಥಳೀಯವಾಗಿ ಬಿಜೆಪಿ ಪಕ್ಷವನ್ನು ಸಂಘಟಿಸಲು ನಿರಂತರ ಶ್ರಮಿಸುತ್ತಿರುವ ಕೃಷ್ಣಪ್ಪ (ಕಿಟ್ಟಿ ) ಸಮಾಜದ ಎಲ್ಲ ವರ್ಗದ ಜನರ ವಿಶ್ವಾಸ ಗಳಿಸುವದಷ್ಟೇ ಅಲ್ಲದೇ ಅವರ ಸಮಸ್ಯೆಗಳ ಪರಿಹಾರಕ್ಕೆ ಸದಾ ಮುಂದಿದ್ದು, ಮುಂದಾಳತ್ವ ವಹಿಸಿ ಪರಿಹಾರ ಕಲ್ಪಿಸುವುದು ಶ್ಲಾಘನೀಯ ವಿಷಯವಾಗಿದೆ, ಅವರ ಸೇವಾ ಕರೆಗಳು ಹೀಗೆ ಮುಂದುವರೆಯಲಿ ಎಂದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಧ್ಯವಾದಷ್ಟು ಅಭಿವೃದ್ಧಿ ಕಾರ್ಯಗಳ ಕಡೆಗೆ ಗಮನ ಕೊಡುವ ಕೃಷ್ಣಪ್ಪ(ಕಿಟ್ಟಿ)ರವರು ಗ್ರಾಮದ ಸಮಸ್ಯೆಗಳನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಿಗೆ ತಲುಪಿಸುವ ಪರಿ ಮೆಚ್ಚುವಂಥದ್ದು , ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂಲಭೂತ ಸೌಕರ್ಯಕ್ಕೆ ಸಂಬಂಧಿಸಿದಂತೆ ಸಂಸದರ ಗಮನಕ್ಕೆ ತರುವ ಮೂಲಕ ಹಲವು ಅಭಿವೃದ್ಧಿ ಕಾರ್ಯಗಳಿಗೆ ಸಾಕ್ಷಿಯಾಗಿದ್ದಾರೆ ಎಂದರು .

ಗ್ರಾಮ ಪಂಚಾಯತಿ ಸದಸ್ಯ ಕೃಷ್ಣಪ್ಪ (ಕಿಟ್ಟಿ) ಮಾತನಾಡಿ ಈ ಹಿಂದೆ ಬಿಜೆಪಿ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಿಜೆಪಿ ನಾಯಕರು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಆದ ಪಿಳ್ಳ ಮುನಿಶಾಮಪ್ಪ ರವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದೆವು. ಅಂದಿನಿಂದ ಇಂದಿನವರೆಗೂ ಪಕ್ಷ ಸಿದ್ದಂತವನ್ನು ಬಿಟ್ಟುಕೊಡದೆ ಸರ್ಕಾರದ ಯೋಜನೆಗಳನ್ನು ಗ್ರಾಮಸ್ಥರಿಗೆ ತಲುಪಿಸುವುದು ಅವರಿಗೆ ಅನ್ಯಾಯವಾದಾಗ ನ್ಯಾಯಪರ ಹೋರಾಟಗಳನ್ನು ಮಾಡುವ ಮೂಲಕ ಸದಾ ಅವರ ಬೆಂಬಲವಾಗಿ ನಿಂತಿದ್ದೇನೆ , ಜೊತೆಗೆ ನಿರಂತರ ನಮ್ಮ ಕೈಲಾದಷ್ಟು ಸೇವೆ ಮಾಡಿಕೊಳ್ಳುತ್ತಾ ಬರುತ್ತಿದ್ದೇವೆ, ಮುಂದೆಯೂ ಸಹ ನಮ್ಮ ಜನರ ಧ್ವನಿಯಾಗಿ ಅನ್ಯಾಯದ ವಿರುದ್ಧವಾಗಿ ಹೋರಾಟಗಳನ್ನು ನಡೆಸುತ್ತಾ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ನನ್ನ ಕೈಲಾದ ಸೇವೆಯನ್ನು ಸದಾ ಮಾಡುತ್ತೇನೆ ಎಂದರು.

ಈ ಸಲದಲ್ಲಿ ಸ್ಥಳೀಯ ಬಿಜೆಪಿ ಮುಖಂಡರಾದ ನಾರಾಯಣಪ್ಪ,ಆರ್ ಪ್ರತಾಪ್, ತೂಬಗೆರೆ ಬಿಜೆಪಿ ಅಧ್ಯಕ್ಷ ವಾಸು, ಗ್ರಾಮ ಪಂಚಾಯತ್ ಸದಸ್ಯರಾದ ಪುಟ್ಟರಾಜು, ಗ್ರಾಮ ಪಂಚಾಯಿತಿ ಸದಸ್ಯರಾದ ಗಂಗಾಧರ್, ರಂಗರಾಜು, ಸುರೇಶ್, ಮುನೇಗೌಡ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅನಾಥರು, ಅಶಕ್ತ ಹೆಣ್ಣು ಮಕ್ಕಳಿಗೆ ಯುವಿಕಾ ವರದಾನ

ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಪಾತ್ರ ಅತೀವ ಮಹತ್ವದ್ದಾಗಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಈ ದಾರಿಯಲ್ಲಿ…

8 hours ago

ಮೇ.8ರಂದು ಜೆಡಿಎಸ್ ರಜತ ಮಹೋತ್ಸವ: ನಿಖಿಲ್ ಕುಮಾರಸ್ವಾಮಿ ಭಾಗಿ- ಜೆಡಿಎಸ್ ತಾಲೂಕು ಅಧ್ಯಕ್ಷ ಹರೀಶ್ ಗೌಡ

ದೊಡ್ಡಬಳ್ಳಾಪುರ: ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕವಾಗಿ ಅಭಿವೃದ್ಧಿ ಹೊಂದಲು ಜೆಡಿಎಸ್ ಪಕ್ಷ ಸ್ಥಾಪನೆಯಾಗಿದೆ. ಮೇ.8ಕ್ಕೆ 25 ವರ್ಷಗಳನ್ನು…

8 hours ago

ಹನ್ನೊಂದು ಮಂದಿ ಬಾಲ ಕಾರ್ಮಿಕರ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ…

9 hours ago

ತಾಲ್ಲೂಕಿನಲ್ಲಿ ಜೆಡಿಎಸ್ ತನ್ನ ಶಕ್ತಿ ಕಳೆದುಕೊಳ್ಳಲು ಪಕ್ಷ ವಿರೋಧಿ ಚಟುವಟಿಕೆಗಳೇ ಕಾರಣ- ಜೆಡಿಎಸ್ ಮುಖಂಡ ಹುಸ್ಕೂರ್ ಆನಂದ್

ದೊಡ್ಡಬಳ್ಳಾಪುರದ ಜೆಡಿಎಸ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಬಣ, ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿಯುವ ಕಾರ್ಯಕರ್ತರ ಬಣ ಎಂಬ ಎರಡು…

10 hours ago

ಖಾಸಗಿ ಟೆಂಡರ್ ದಾರರ ಬೇಜವಾಬ್ದಾರಿ: ಕುಡಿಯಲು ನೀರಿಲ್ಲದೇ ಜನ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ…

10 hours ago

ಅಕ್ರಮ ಪಡಿತರ ಅಕ್ಕಿ, ರಾಗಿ ವಶಕ್ಕೆ, ಪ್ರಕರಣ ದಾಖಲು

ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…

19 hours ago