ತೂಬಗೆರೆಯಲ್ಲಿ “ಕಿಟ್ಟಿ ಕಪ್” ಕ್ರಿಕೆಟ್ ಪಂದ್ಯಾವಳಿ

ತೂಬಗೆರೆ: ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಯುವಕರಲ್ಲಿ ಕ್ರೀಡಾ ಮನೋಭಾವ ಹೆಚ್ಚಿಸುವ ನಿಟ್ಟಿನಲ್ಲಿ “ಕಿಟ್ಟಿ ಕಪ್ ” ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ತಾಲೂಕಿನ ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯ ಟಿ ಎನ್ ಕೃಷ್ಣಪ್ಪ ( ಕಿಟ್ಟಿ ) ಆಚರಿಸಿಕೊಂಡಿದ್ದಾರೆ.

ಹುಟ್ಟುಹಬ್ಬದ ಶುಭಾಶಯ ಕೋರಿದ ನಂತರ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪಿಳ್ಳ ಮುನಿಶಾಮಪ್ಪ ಮಾಧ್ಯಮಗಳೊಂದಿಗೆ ಮಾತನಾಡಿ ಸ್ಥಳೀಯವಾಗಿ ಬಿಜೆಪಿ ಪಕ್ಷವನ್ನು ಸಂಘಟಿಸಲು ನಿರಂತರ ಶ್ರಮಿಸುತ್ತಿರುವ ಕೃಷ್ಣಪ್ಪ (ಕಿಟ್ಟಿ ) ಸಮಾಜದ ಎಲ್ಲ ವರ್ಗದ ಜನರ ವಿಶ್ವಾಸ ಗಳಿಸುವದಷ್ಟೇ ಅಲ್ಲದೇ ಅವರ ಸಮಸ್ಯೆಗಳ ಪರಿಹಾರಕ್ಕೆ ಸದಾ ಮುಂದಿದ್ದು, ಮುಂದಾಳತ್ವ ವಹಿಸಿ ಪರಿಹಾರ ಕಲ್ಪಿಸುವುದು ಶ್ಲಾಘನೀಯ ವಿಷಯವಾಗಿದೆ, ಅವರ ಸೇವಾ ಕರೆಗಳು ಹೀಗೆ ಮುಂದುವರೆಯಲಿ ಎಂದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಧ್ಯವಾದಷ್ಟು ಅಭಿವೃದ್ಧಿ ಕಾರ್ಯಗಳ ಕಡೆಗೆ ಗಮನ ಕೊಡುವ ಕೃಷ್ಣಪ್ಪ(ಕಿಟ್ಟಿ)ರವರು ಗ್ರಾಮದ ಸಮಸ್ಯೆಗಳನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಿಗೆ ತಲುಪಿಸುವ ಪರಿ ಮೆಚ್ಚುವಂಥದ್ದು , ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂಲಭೂತ ಸೌಕರ್ಯಕ್ಕೆ ಸಂಬಂಧಿಸಿದಂತೆ ಸಂಸದರ ಗಮನಕ್ಕೆ ತರುವ ಮೂಲಕ ಹಲವು ಅಭಿವೃದ್ಧಿ ಕಾರ್ಯಗಳಿಗೆ ಸಾಕ್ಷಿಯಾಗಿದ್ದಾರೆ ಎಂದರು .

ಗ್ರಾಮ ಪಂಚಾಯತಿ ಸದಸ್ಯ ಕೃಷ್ಣಪ್ಪ (ಕಿಟ್ಟಿ) ಮಾತನಾಡಿ ಈ ಹಿಂದೆ ಬಿಜೆಪಿ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಿಜೆಪಿ ನಾಯಕರು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಆದ ಪಿಳ್ಳ ಮುನಿಶಾಮಪ್ಪ ರವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದೆವು. ಅಂದಿನಿಂದ ಇಂದಿನವರೆಗೂ ಪಕ್ಷ ಸಿದ್ದಂತವನ್ನು ಬಿಟ್ಟುಕೊಡದೆ ಸರ್ಕಾರದ ಯೋಜನೆಗಳನ್ನು ಗ್ರಾಮಸ್ಥರಿಗೆ ತಲುಪಿಸುವುದು ಅವರಿಗೆ ಅನ್ಯಾಯವಾದಾಗ ನ್ಯಾಯಪರ ಹೋರಾಟಗಳನ್ನು ಮಾಡುವ ಮೂಲಕ ಸದಾ ಅವರ ಬೆಂಬಲವಾಗಿ ನಿಂತಿದ್ದೇನೆ , ಜೊತೆಗೆ ನಿರಂತರ ನಮ್ಮ ಕೈಲಾದಷ್ಟು ಸೇವೆ ಮಾಡಿಕೊಳ್ಳುತ್ತಾ ಬರುತ್ತಿದ್ದೇವೆ, ಮುಂದೆಯೂ ಸಹ ನಮ್ಮ ಜನರ ಧ್ವನಿಯಾಗಿ ಅನ್ಯಾಯದ ವಿರುದ್ಧವಾಗಿ ಹೋರಾಟಗಳನ್ನು ನಡೆಸುತ್ತಾ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ನನ್ನ ಕೈಲಾದ ಸೇವೆಯನ್ನು ಸದಾ ಮಾಡುತ್ತೇನೆ ಎಂದರು.

ಈ ಸಲದಲ್ಲಿ ಸ್ಥಳೀಯ ಬಿಜೆಪಿ ಮುಖಂಡರಾದ ನಾರಾಯಣಪ್ಪ,ಆರ್ ಪ್ರತಾಪ್, ತೂಬಗೆರೆ ಬಿಜೆಪಿ ಅಧ್ಯಕ್ಷ ವಾಸು, ಗ್ರಾಮ ಪಂಚಾಯತ್ ಸದಸ್ಯರಾದ ಪುಟ್ಟರಾಜು, ಗ್ರಾಮ ಪಂಚಾಯಿತಿ ಸದಸ್ಯರಾದ ಗಂಗಾಧರ್, ರಂಗರಾಜು, ಸುರೇಶ್, ಮುನೇಗೌಡ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

11 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

12 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

13 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

13 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

20 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago