ತೂಬಗೆರೆಯಲ್ಲಿ ನಾಳೆ ಸುಪ್ರಸಿದ್ಧ ಭೂತ ನೆರಿಗೆ ಆಚರಣೆ

ತಾಲೂಕಿನ ತೂಬಗೆರೆ ಗ್ರಾಮದಲ್ಲಿ 600 ವರ್ಷಗಳಿಂದ ಆಚರಿಸಿಕೊಂಡು ಬಂದಿರುವ ಪಾರಂಪರಿಕ ಜನಪದ ಹಬ್ಬವಾದ ಭೂತ ನೆರಿಗೆ ಆಚರಣೆ ಜೂನ್ 30 (ನಾಳೆ) ಸಂಜೆ 4 ಗಂಟೆಗೆ ನಡೆಯಲಿದೆ.

ಕರಿಯಣ್ಣ – ಕೆಂಚಣ್ಣರ ವೇಷಧಾರಿಯಾದವರ ಮೇಲೆ ಭೂತ ಆಹ್ವಾನಿಸಿ, ಆರ್ಭಟಿಸುತ್ತವೆ. ಈ ವೇಳೆ, ಇವರ ಹಸಿವು ತಣಿಸುವ ಕೆಲಸ ಆಗುತ್ತದೆ. ವೇಷಧಾರಿಗಳು ಮನೆಗೆ ಬಂದರೆ ಮನೆಯಲ್ಲಿನ ದೆವ್ವ ಪೀಡೆ ಪಿಶಾಚಿಗಳು ಓಡಿ ಹೋಗುತ್ತವೆ ಎಂಬ ನಂಬಿಕೆಯೂ ಇದೆ.

ಪ್ರತಿವರ್ಷದಂತೆ ಈ ವರ್ಷವೂ ಸಹ ಆಷಾಡ ಮಾಸದ ಏಕಾದಶಿಯಾದ ಮಾರನೇ ದಿನವಾದ ದ್ವಾದಶಿಯಂದು ಭೂತ ನೆರಿಗೆ ಹಬ್ಬವನ್ನು ಆಚರಿಸಲು ಸಜ್ಜಾಗಿದೆ.

ವಿಷ್ಣುವಿನ ದ್ವಾರಪಾಲಕರಾದ ಜಯ-ವಿಜಯರು ಶಾಪಕ್ಕೆ ಗುರಿಯಾಗಿ ಕಲಿಯುಗದಲ್ಲಿ ಕರಿಯಣ್ಣ ಕೆಂಚಣ್ಣರಾಗಿ ಭೂಲೋಕಕ್ಕೆ ಬರುತ್ತಾರೆ ಎಂಬ ಐತಿಹಾಸಿಕ ಹಿನ್ನೆಲೆ ಇದೆ.
ಸುಮಾರು 600 ವರ್ಷಗಳ ಇತಿಹಾಸವಿರುವ ಈ ಭೂತನೆರಿಗೆ ಹಬ್ಬ ಇಂದಿಗೂ ಸಹ ತೂಬಗೆರೆ ಹಾಗೂ ಕಲ್ಲುಕೋಟೆ ಗ್ರಾಮದಲ್ಲಿ ನಡೆದುಕೊಂಡು ಬರುತ್ತಿದೆ.

ಭೂತನೆರಿಗೆ ಹಬ್ಬದಲ್ಲಿ ಕರಿಯಣ್ಣ ಮತ್ತು ಕೆಂಚಣ್ಣ ವೇಷಧಾರಿಗಳು ಒಂದು ಕೈಯಲ್ಲಿ ಭೂತದ ಮುಖ ಹೋಲುವ ವರ್ತುಲಾಕಾರದ ನೆರಿಗೆ ಹಿಡಿದಿರುತ್ತಾರೆ. ಮತ್ತೊಂದು ಕೈಯಲ್ಲಿ ಕತ್ತಿ ಹಿಡಿದಿರುತ್ತಾರೆ. ಲಕ್ಷ್ಮಿನರಸಿಂಹಸ್ವಾಮಿ ಭಕ್ತರು ಕೆಂಚಣ್ಣ-ಕರಿಯಣ್ಣರ ಮುಂದೆ ವಿಷ್ಣುವಿನ ನಾಮಸ್ಮರಣೆ ಮತ್ತು ಗುಣಗಾನ ಮಾಡುತ್ತಾ ಇವರನ್ನು ಕೆಣಕುತ್ತಾರೆ. ವಿಷ್ಣುವಿನ ನಾಮಸ್ಮರಣೆ ಸಹಿಸದ ಈ ಕರಿಯಣ್ಣ ಮತ್ತು ಕೆಂಚಣ್ಣ ಭಕ್ತರ ಮೇಲೆ ಕೋಪಗೊಂಡು ಅವರೆಡೆಗೆ ನುಗ್ಗುತ್ತಾರೆ.

ಕೋಪಗೊಂಡ ಕರಿಯಣ್ಣ ಕೆಂಚಣ್ಣರನ್ನು ಸಮಾಧಾನ ಮಾಡಲು ಇತರರು ಅವರ ಬಾಯಿಗೆ ಬಾಳೆ ಹಣ್ಣಿನ, ಹಲಸಿನ ಹಣ್ಣಿನಿಂದ ತಯಾರಿಸಿದ ರಸಾಯನವನ್ನು ತಿನ್ನಿಸುತ್ತಾರೆ. ಆವೇಶಕ್ಕೆ ಒಳಗಾದ ಈ ಭೂತಗಳು ಆ ಸಂದರ್ಭದಲ್ಲಿ ಏನು ಕೊಟ್ಟರೂ ತಿನ್ನುತ್ತಾರೆ ಎಂಬುದು ಜಾನಪದರ ನಂಬಿಕೆ. ಕೆಲವು ಗ್ರಾಮಗಳಲ್ಲಿ ನಡೆಯುವ ಈ ಹಬ್ಬದಲ್ಲಿ ಕರಿಯಣ್ಣ ಮತ್ತು ಕೆಂಚಣ್ಣರ ಬಾಯಿಗೆ ಕುರಿ-ಕೋಳಿಗಳನ್ನು ನೀಡುತ್ತಾರೆ. ಇವುಗಳ ರಕ್ತ ಹೀರುವುದರೊಂದಿಗೆ ಕರಿಯಣ್ಣ-ಕೆಂಚಣ್ಣ ಶಾಂತರಾಗುತಾರೆ ಎನ್ನುವುದು ಈ ಭಾಗದ ಭಕ್ತರ ನಂಬಿಕೆ.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

4 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

19 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago