ತೂಬಗೆರೆಯಲ್ಲಿ ನಾಳೆ ಸುಪ್ರಸಿದ್ಧ ಭೂತ ನೆರಿಗೆ ಆಚರಣೆ

ತಾಲೂಕಿನ ತೂಬಗೆರೆ ಗ್ರಾಮದಲ್ಲಿ 600 ವರ್ಷಗಳಿಂದ ಆಚರಿಸಿಕೊಂಡು ಬಂದಿರುವ ಪಾರಂಪರಿಕ ಜನಪದ ಹಬ್ಬವಾದ ಭೂತ ನೆರಿಗೆ ಆಚರಣೆ ಜೂನ್ 30 (ನಾಳೆ) ಸಂಜೆ 4 ಗಂಟೆಗೆ ನಡೆಯಲಿದೆ.

ಕರಿಯಣ್ಣ – ಕೆಂಚಣ್ಣರ ವೇಷಧಾರಿಯಾದವರ ಮೇಲೆ ಭೂತ ಆಹ್ವಾನಿಸಿ, ಆರ್ಭಟಿಸುತ್ತವೆ. ಈ ವೇಳೆ, ಇವರ ಹಸಿವು ತಣಿಸುವ ಕೆಲಸ ಆಗುತ್ತದೆ. ವೇಷಧಾರಿಗಳು ಮನೆಗೆ ಬಂದರೆ ಮನೆಯಲ್ಲಿನ ದೆವ್ವ ಪೀಡೆ ಪಿಶಾಚಿಗಳು ಓಡಿ ಹೋಗುತ್ತವೆ ಎಂಬ ನಂಬಿಕೆಯೂ ಇದೆ.

ಪ್ರತಿವರ್ಷದಂತೆ ಈ ವರ್ಷವೂ ಸಹ ಆಷಾಡ ಮಾಸದ ಏಕಾದಶಿಯಾದ ಮಾರನೇ ದಿನವಾದ ದ್ವಾದಶಿಯಂದು ಭೂತ ನೆರಿಗೆ ಹಬ್ಬವನ್ನು ಆಚರಿಸಲು ಸಜ್ಜಾಗಿದೆ.

ವಿಷ್ಣುವಿನ ದ್ವಾರಪಾಲಕರಾದ ಜಯ-ವಿಜಯರು ಶಾಪಕ್ಕೆ ಗುರಿಯಾಗಿ ಕಲಿಯುಗದಲ್ಲಿ ಕರಿಯಣ್ಣ ಕೆಂಚಣ್ಣರಾಗಿ ಭೂಲೋಕಕ್ಕೆ ಬರುತ್ತಾರೆ ಎಂಬ ಐತಿಹಾಸಿಕ ಹಿನ್ನೆಲೆ ಇದೆ.
ಸುಮಾರು 600 ವರ್ಷಗಳ ಇತಿಹಾಸವಿರುವ ಈ ಭೂತನೆರಿಗೆ ಹಬ್ಬ ಇಂದಿಗೂ ಸಹ ತೂಬಗೆರೆ ಹಾಗೂ ಕಲ್ಲುಕೋಟೆ ಗ್ರಾಮದಲ್ಲಿ ನಡೆದುಕೊಂಡು ಬರುತ್ತಿದೆ.

ಭೂತನೆರಿಗೆ ಹಬ್ಬದಲ್ಲಿ ಕರಿಯಣ್ಣ ಮತ್ತು ಕೆಂಚಣ್ಣ ವೇಷಧಾರಿಗಳು ಒಂದು ಕೈಯಲ್ಲಿ ಭೂತದ ಮುಖ ಹೋಲುವ ವರ್ತುಲಾಕಾರದ ನೆರಿಗೆ ಹಿಡಿದಿರುತ್ತಾರೆ. ಮತ್ತೊಂದು ಕೈಯಲ್ಲಿ ಕತ್ತಿ ಹಿಡಿದಿರುತ್ತಾರೆ. ಲಕ್ಷ್ಮಿನರಸಿಂಹಸ್ವಾಮಿ ಭಕ್ತರು ಕೆಂಚಣ್ಣ-ಕರಿಯಣ್ಣರ ಮುಂದೆ ವಿಷ್ಣುವಿನ ನಾಮಸ್ಮರಣೆ ಮತ್ತು ಗುಣಗಾನ ಮಾಡುತ್ತಾ ಇವರನ್ನು ಕೆಣಕುತ್ತಾರೆ. ವಿಷ್ಣುವಿನ ನಾಮಸ್ಮರಣೆ ಸಹಿಸದ ಈ ಕರಿಯಣ್ಣ ಮತ್ತು ಕೆಂಚಣ್ಣ ಭಕ್ತರ ಮೇಲೆ ಕೋಪಗೊಂಡು ಅವರೆಡೆಗೆ ನುಗ್ಗುತ್ತಾರೆ.

ಕೋಪಗೊಂಡ ಕರಿಯಣ್ಣ ಕೆಂಚಣ್ಣರನ್ನು ಸಮಾಧಾನ ಮಾಡಲು ಇತರರು ಅವರ ಬಾಯಿಗೆ ಬಾಳೆ ಹಣ್ಣಿನ, ಹಲಸಿನ ಹಣ್ಣಿನಿಂದ ತಯಾರಿಸಿದ ರಸಾಯನವನ್ನು ತಿನ್ನಿಸುತ್ತಾರೆ. ಆವೇಶಕ್ಕೆ ಒಳಗಾದ ಈ ಭೂತಗಳು ಆ ಸಂದರ್ಭದಲ್ಲಿ ಏನು ಕೊಟ್ಟರೂ ತಿನ್ನುತ್ತಾರೆ ಎಂಬುದು ಜಾನಪದರ ನಂಬಿಕೆ. ಕೆಲವು ಗ್ರಾಮಗಳಲ್ಲಿ ನಡೆಯುವ ಈ ಹಬ್ಬದಲ್ಲಿ ಕರಿಯಣ್ಣ ಮತ್ತು ಕೆಂಚಣ್ಣರ ಬಾಯಿಗೆ ಕುರಿ-ಕೋಳಿಗಳನ್ನು ನೀಡುತ್ತಾರೆ. ಇವುಗಳ ರಕ್ತ ಹೀರುವುದರೊಂದಿಗೆ ಕರಿಯಣ್ಣ-ಕೆಂಚಣ್ಣ ಶಾಂತರಾಗುತಾರೆ ಎನ್ನುವುದು ಈ ಭಾಗದ ಭಕ್ತರ ನಂಬಿಕೆ.

Ramesh Babu

Journalist

Recent Posts

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

1 hour ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

4 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

8 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

23 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

23 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

24 hours ago