ತೂಬಗೆರೆಯಲ್ಲಿ ಪುನೀತ್ ರಾಜಕುಮಾರ್ 50ನೇ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆಯಲ್ಲಿ ನಟ ದಿವಂಗತ ಪುನೀತ್ ರಾಜಕುಮಾರ್ ರವರ 50ನೇ ಹುಟ್ಟುಹಬ್ಬವನ್ನು, ಇಲ್ಲಿನ ರಾ.ಶಿ.ರಾ.ಪು ಅಭಿಮಾನಿ ಬಳಗದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಪುನೀತ್ ಅಭಿಮಾನಿಗಳು ತೂಬಗೆರೆ ಬಸ್ ನಿಲ್ದಾಣದಲ್ಲಿ ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪುಷ್ಪಾಲಂಕಾರ ಮಾಡಿ, ಪೂಜೆ ಸಲ್ಲಿಸಿ, ಕೇಕ್ ಕತ್ತರಿಸಿ ಅಗಲಿದ ನಟನ ಹುಟ್ಟುಹಬ್ಬವನ್ನು ಭಕ್ತಿಪೂರ್ವಕವಾಗಿ ಆಚರಿಸಿದರು. ನೆಚ್ಚಿನ ನಟನ ಹೆಸರಿನಲ್ಲಿ ಅನ್ನದಾನ ಮಾಡಿದರು.

ಈ ಸಂದರ್ಭದಲ್ಲಿ ಅಭಿಮಾನಿ ಬಳಗದ ಮುಖಂಡ ರಾದ ಗಂಗಾಧರ್ ಮಾತನಾಡಿ, ಪುನೀತ್ ರಾಜಕುಮಾರ್ ನಮ್ಮಿಂದ ಕಣ್ಮರೆಯಾಗಿದ್ದರೂ, ಅವರ ಸರಳ, ಸಜ್ಜನಿಕೆ, ಪ್ರೀತಿ, ಆತ್ಮವಿಶ್ವಾಸದಿಂದ ಕೂಡಿದ ವ್ಯಕ್ತಿತ್ವ ಪ್ರೇರಕ ಶಕ್ತಿಯಾಗಿದೆ. ನಮ್ಮಂತಹ ಕೋಟ್ಯಾಂತರ ಅಭಿಮಾನಿಗಳ ಹೃದಯದಲ್ಲಿ ಅಜರಾಮರರಾಗಿದ್ದಾರೆ ಎಂದರು.

ರಾ.ಶಿ.ರಾ.ಪು ಅಭಿಮಾನಿ ಬಳಗದ ಪದಾಧಿಕಾರಿಗಳಾದ ರಾಮಾಂಜನಿ, ಸಾಲಿ ಮುನಿರಾಜ, ಕೇಬಲ್ ಮಂಜು, ರವಿಕಿರಣ್, ಸಿಎಂ ಕೃಷ್ಣಪ್ಪ , ಶ್ರೀನಿವಾಸ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟೇಶ್, ಸದಸ್ಯ ಮುನಿಕೃಷ್ಣಪ್ಪ ಗ್ರಾಮಸ್ಥರು ಮುಖಂಡರುಗಳು ಅಭಿಮಾನಿಗಳು ಹಾಜರಿದ್ದರು.

Ramesh Babu

Journalist

Recent Posts

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

2 hours ago

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

13 hours ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

22 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

1 day ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

1 day ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

2 days ago