ದೊಡ್ಡಬಳ್ಳಾಪುರ: ಸೌಹಾರ್ದಕ್ಕೆ ಹೆಸರಾದ ಬಾಬಯ್ಯನ ಹಬ್ಬವನ್ನು ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು. ಮುಸ್ಲಿಮರ ಈ ಪವಿತ್ರ ಹಬ್ಬದಲ್ಲಿ ಹಿಂದೂ ಸಹೋದರರು ಭಾಗವಹಿಸಿ ಧಾರ್ಮಿಕ ಸೌಹಾರ್ದತೆಗೆ ಉತ್ತೇಜನ ನೀಡಿದರು.
ಹಿಂದೂ-ಮುಸ್ಲಿಂ ಬಾಂಧವ್ಯದ ಸಂಕೇತವಾಗಿ, ಹಿಂದೂಗಳು ಮುಸ್ಲಿಮರಿಗೆ ಅಗತ್ಯ ಸಾಮಗ್ರಿಗಳನ್ನು ನೀಡಿದ ಬಳಿಕ, ಒಂದು ವಾರದ ಹಿಂದೆ ನಿರ್ಮಿತವಾದ ಗುಂಡಿಯಲ್ಲಿ ಕೊಂಡ ಹಾಕಲಾಯಿತು. ಹಲವು ವರ್ಷಗಳಿಂದ ಈ ಹಬ್ಬ ಆಚರಿಸುತ್ತಿರುವ ಬಾಬಯ್ಯ ವಂಶಸ್ಥ ಭಾಷಾ ನೇತೃತ್ವದಲ್ಲಿ ಹಸೇನ್-ಹುಸೇನ್ ದೇವರ ಹಸ್ತಗಳನ್ನು ಹೊತ್ತು, ಗ್ರಾಮದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು. ನಂತರ ಗ್ರಾಮದ ಮಧ್ಯದಲ್ಲಿರುವ ಚಾವಡಿ ಬಳಿ ಕರೆತರಲಾಯಿತು. ಅನೇಕರು ಹರಕೆ ಹೊತ್ತು ಅಗ್ನಿಕುಂಡ ಹಾಯಿವುದರಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಜಾತಿ-ಭೇದವಿಲ್ಲದೆ ಎಲ್ಲರೂ ಒಂದಾಗಿ ಹಬ್ಬವನ್ನು ಯಶಸ್ವಿಯಾಗಿ ಆಚರಿಸಿದರು.
ಈ ಸಂದರ್ಭದಲ್ಲಿ, ಗ್ರಾಮದ ಹಿರಿಯರಾದ ಕೃಷ್ಣಪ್ಪ ಮಾತನಾಡುತ್ತಾ, “ನಮ್ಮ ತಾತಮುತ್ತಾತನ ಕಾಲದಿಂದಲೂ ಈ ಹಬ್ಬವನ್ನು ಹಿಂದೂಗಳು-ಮುಸ್ಲಿಂ ಸಹೋದರತ್ವದ ಸಂಕೇತವಾಗಿ ಆಚರಿಸುತ್ತಿದ್ದಾರೆ. ಯಾವುದೇ ರೋಗ-ರುಜಿನಗಳು ಗ್ರಾಮದಲ್ಲಿ ಹರಡದಿರಲಿ, ಗ್ರಾಮಕ್ಕೆ ಒಳ್ಳೆಯದುಂಟಾಗಲಿ ಎಂಬ ಉದ್ದೇಶದಿಂದ ಈ ಹಬ್ಬವನ್ನು ಪ್ರತಿವರ್ಷ ಆಚರಿಸುತ್ತೇವೆ,” ಎಂದು ತಿಳಿಸಿದರು.
ಯುವ ಮುಖಂಡ ಉದಯ ಆರಾಧ್ಯ ಮಾತನಾಡಿ, “ನಮ್ಮ ಹಿರಿಯರು ಬಾಬಯ್ಯನ ಹಬ್ಬವನ್ನು ಸೌಹಾರ್ದದ ಸಂಕೇತವಾಗಿ ಆಚರಿಸುತ್ತಾ ಬಂದಿದ್ದಾರೆ. ಗ್ರಾಮದಲ್ಲಿ ಮತಭೇದವಿಲ್ಲದೆ ಎಲ್ಲ ಧರ್ಮ ಹಾಗೂ ಜಾತಿಯವರು ಶಾಂತಿ ಮತ್ತು ಸೌಹಾರ್ದದಿಂದ ಭಾಗವಹಿಸಿದ್ದು, ಇದು ನಮ್ಮ ಬಹುಸಂಸ್ಕೃತಿಯ ಮಹತ್ವವನ್ನು ಪ್ರತಿಬಿಂಬಿಸುತ್ತದೆ,” ಎಂದು ಅಭಿಪ್ರಾಯಪಟ್ಟರು.
ಈ ಹಬ್ಬದ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಶಿವಣ್ಣ, ಮಾಜಿ ಸದಸ್ಯ ದೇವೇಂದ್ರಪ್ಪ, ಮುಖಂಡರಾದ ಹುಸೇನ್, ರವಿ, ಅಸ್ಲಾಂ, ಯುವ ಮುಖಂಡರಾದ ಉದಯ ಆರಾಧ್ಯ, ಮಧು ಮತ್ತು ಇತರರು ಹಾಜರಿದ್ದರು.
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…
ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…
ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…
ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…