ತೂಬಗೆರೆಯಲ್ಲಿ ಬಾಬಯ್ಯನ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಸೌಹಾರ್ದಕ್ಕೆ ಹೆಸರಾದ ಬಾಬಯ್ಯನ ಹಬ್ಬವನ್ನು ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು. ಮುಸ್ಲಿಮರ ಈ ಪವಿತ್ರ ಹಬ್ಬದಲ್ಲಿ ಹಿಂದೂ ಸಹೋದರರು ಭಾಗವಹಿಸಿ ಧಾರ್ಮಿಕ ಸೌಹಾರ್ದತೆಗೆ ಉತ್ತೇಜನ ನೀಡಿದರು.

ಹಿಂದೂ-ಮುಸ್ಲಿಂ ಬಾಂಧವ್ಯದ ಸಂಕೇತವಾಗಿ, ಹಿಂದೂಗಳು ಮುಸ್ಲಿಮರಿಗೆ ಅಗತ್ಯ ಸಾಮಗ್ರಿಗಳನ್ನು ನೀಡಿದ ಬಳಿಕ, ಒಂದು ವಾರದ ಹಿಂದೆ ನಿರ್ಮಿತವಾದ ಗುಂಡಿಯಲ್ಲಿ ಕೊಂಡ ಹಾಕಲಾಯಿತು. ಹಲವು ವರ್ಷಗಳಿಂದ ಈ ಹಬ್ಬ ಆಚರಿಸುತ್ತಿರುವ ಬಾಬಯ್ಯ ವಂಶಸ್ಥ ಭಾಷಾ ನೇತೃತ್ವದಲ್ಲಿ ಹಸೇನ್-ಹುಸೇನ್ ದೇವರ ಹಸ್ತಗಳನ್ನು ಹೊತ್ತು, ಗ್ರಾಮದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು. ನಂತರ ಗ್ರಾಮದ ಮಧ್ಯದಲ್ಲಿರುವ ಚಾವಡಿ ಬಳಿ ಕರೆತರಲಾಯಿತು. ಅನೇಕರು ಹರಕೆ ಹೊತ್ತು ಅಗ್ನಿಕುಂಡ ಹಾಯಿವುದರಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಜಾತಿ-ಭೇದವಿಲ್ಲದೆ ಎಲ್ಲರೂ ಒಂದಾಗಿ ಹಬ್ಬವನ್ನು ಯಶಸ್ವಿಯಾಗಿ ಆಚರಿಸಿದರು.

ಈ ಸಂದರ್ಭದಲ್ಲಿ, ಗ್ರಾಮದ ಹಿರಿಯರಾದ ಕೃಷ್ಣಪ್ಪ ಮಾತನಾಡುತ್ತಾ, “ನಮ್ಮ ತಾತಮುತ್ತಾತನ ಕಾಲದಿಂದಲೂ ಈ ಹಬ್ಬವನ್ನು ಹಿಂದೂಗಳು-ಮುಸ್ಲಿಂ ಸಹೋದರತ್ವದ ಸಂಕೇತವಾಗಿ ಆಚರಿಸುತ್ತಿದ್ದಾರೆ. ಯಾವುದೇ ರೋಗ-ರುಜಿನಗಳು ಗ್ರಾಮದಲ್ಲಿ ಹರಡದಿರಲಿ, ಗ್ರಾಮಕ್ಕೆ ಒಳ್ಳೆಯದುಂಟಾಗಲಿ ಎಂಬ ಉದ್ದೇಶದಿಂದ ಈ ಹಬ್ಬವನ್ನು ಪ್ರತಿವರ್ಷ ಆಚರಿಸುತ್ತೇವೆ,” ಎಂದು ತಿಳಿಸಿದರು.

ಯುವ ಮುಖಂಡ ಉದಯ ಆರಾಧ್ಯ ಮಾತನಾಡಿ, “ನಮ್ಮ ಹಿರಿಯರು ಬಾಬಯ್ಯನ ಹಬ್ಬವನ್ನು ಸೌಹಾರ್ದದ ಸಂಕೇತವಾಗಿ ಆಚರಿಸುತ್ತಾ ಬಂದಿದ್ದಾರೆ. ಗ್ರಾಮದಲ್ಲಿ ಮತಭೇದವಿಲ್ಲದೆ ಎಲ್ಲ ಧರ್ಮ ಹಾಗೂ ಜಾತಿಯವರು ಶಾಂತಿ ಮತ್ತು ಸೌಹಾರ್ದದಿಂದ ಭಾಗವಹಿಸಿದ್ದು, ಇದು ನಮ್ಮ ಬಹುಸಂಸ್ಕೃತಿಯ ಮಹತ್ವವನ್ನು ಪ್ರತಿಬಿಂಬಿಸುತ್ತದೆ,” ಎಂದು ಅಭಿಪ್ರಾಯಪಟ್ಟರು.

ಈ ಹಬ್ಬದ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಶಿವಣ್ಣ, ಮಾಜಿ ಸದಸ್ಯ ದೇವೇಂದ್ರಪ್ಪ, ಮುಖಂಡರಾದ ಹುಸೇನ್, ರವಿ, ಅಸ್ಲಾಂ, ಯುವ ಮುಖಂಡರಾದ ಉದಯ ಆರಾಧ್ಯ, ಮಧು ಮತ್ತು ಇತರರು ಹಾಜರಿದ್ದರು.

Ramesh Babu

Journalist

Recent Posts

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

3 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

8 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

10 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

11 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 day ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

1 day ago