ತೂಬಗೆರೆಯಲ್ಲಿ ಬಾಬಯ್ಯನ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಸೌಹಾರ್ದಕ್ಕೆ ಹೆಸರಾದ ಬಾಬಯ್ಯನ ಹಬ್ಬವನ್ನು ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು. ಮುಸ್ಲಿಮರ ಈ ಪವಿತ್ರ ಹಬ್ಬದಲ್ಲಿ ಹಿಂದೂ ಸಹೋದರರು ಭಾಗವಹಿಸಿ ಧಾರ್ಮಿಕ ಸೌಹಾರ್ದತೆಗೆ ಉತ್ತೇಜನ ನೀಡಿದರು.

ಹಿಂದೂ-ಮುಸ್ಲಿಂ ಬಾಂಧವ್ಯದ ಸಂಕೇತವಾಗಿ, ಹಿಂದೂಗಳು ಮುಸ್ಲಿಮರಿಗೆ ಅಗತ್ಯ ಸಾಮಗ್ರಿಗಳನ್ನು ನೀಡಿದ ಬಳಿಕ, ಒಂದು ವಾರದ ಹಿಂದೆ ನಿರ್ಮಿತವಾದ ಗುಂಡಿಯಲ್ಲಿ ಕೊಂಡ ಹಾಕಲಾಯಿತು. ಹಲವು ವರ್ಷಗಳಿಂದ ಈ ಹಬ್ಬ ಆಚರಿಸುತ್ತಿರುವ ಬಾಬಯ್ಯ ವಂಶಸ್ಥ ಭಾಷಾ ನೇತೃತ್ವದಲ್ಲಿ ಹಸೇನ್-ಹುಸೇನ್ ದೇವರ ಹಸ್ತಗಳನ್ನು ಹೊತ್ತು, ಗ್ರಾಮದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು. ನಂತರ ಗ್ರಾಮದ ಮಧ್ಯದಲ್ಲಿರುವ ಚಾವಡಿ ಬಳಿ ಕರೆತರಲಾಯಿತು. ಅನೇಕರು ಹರಕೆ ಹೊತ್ತು ಅಗ್ನಿಕುಂಡ ಹಾಯಿವುದರಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಜಾತಿ-ಭೇದವಿಲ್ಲದೆ ಎಲ್ಲರೂ ಒಂದಾಗಿ ಹಬ್ಬವನ್ನು ಯಶಸ್ವಿಯಾಗಿ ಆಚರಿಸಿದರು.

ಈ ಸಂದರ್ಭದಲ್ಲಿ, ಗ್ರಾಮದ ಹಿರಿಯರಾದ ಕೃಷ್ಣಪ್ಪ ಮಾತನಾಡುತ್ತಾ, “ನಮ್ಮ ತಾತಮುತ್ತಾತನ ಕಾಲದಿಂದಲೂ ಈ ಹಬ್ಬವನ್ನು ಹಿಂದೂಗಳು-ಮುಸ್ಲಿಂ ಸಹೋದರತ್ವದ ಸಂಕೇತವಾಗಿ ಆಚರಿಸುತ್ತಿದ್ದಾರೆ. ಯಾವುದೇ ರೋಗ-ರುಜಿನಗಳು ಗ್ರಾಮದಲ್ಲಿ ಹರಡದಿರಲಿ, ಗ್ರಾಮಕ್ಕೆ ಒಳ್ಳೆಯದುಂಟಾಗಲಿ ಎಂಬ ಉದ್ದೇಶದಿಂದ ಈ ಹಬ್ಬವನ್ನು ಪ್ರತಿವರ್ಷ ಆಚರಿಸುತ್ತೇವೆ,” ಎಂದು ತಿಳಿಸಿದರು.

ಯುವ ಮುಖಂಡ ಉದಯ ಆರಾಧ್ಯ ಮಾತನಾಡಿ, “ನಮ್ಮ ಹಿರಿಯರು ಬಾಬಯ್ಯನ ಹಬ್ಬವನ್ನು ಸೌಹಾರ್ದದ ಸಂಕೇತವಾಗಿ ಆಚರಿಸುತ್ತಾ ಬಂದಿದ್ದಾರೆ. ಗ್ರಾಮದಲ್ಲಿ ಮತಭೇದವಿಲ್ಲದೆ ಎಲ್ಲ ಧರ್ಮ ಹಾಗೂ ಜಾತಿಯವರು ಶಾಂತಿ ಮತ್ತು ಸೌಹಾರ್ದದಿಂದ ಭಾಗವಹಿಸಿದ್ದು, ಇದು ನಮ್ಮ ಬಹುಸಂಸ್ಕೃತಿಯ ಮಹತ್ವವನ್ನು ಪ್ರತಿಬಿಂಬಿಸುತ್ತದೆ,” ಎಂದು ಅಭಿಪ್ರಾಯಪಟ್ಟರು.

ಈ ಹಬ್ಬದ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಶಿವಣ್ಣ, ಮಾಜಿ ಸದಸ್ಯ ದೇವೇಂದ್ರಪ್ಪ, ಮುಖಂಡರಾದ ಹುಸೇನ್, ರವಿ, ಅಸ್ಲಾಂ, ಯುವ ಮುಖಂಡರಾದ ಉದಯ ಆರಾಧ್ಯ, ಮಧು ಮತ್ತು ಇತರರು ಹಾಜರಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

4 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

5 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

7 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

8 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

13 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

16 hours ago