ತೂಬಗೆರೆಯಲ್ಲಿ ಬಾಬಯ್ಯನ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಸೌಹಾರ್ದಕ್ಕೆ ಹೆಸರಾದ ಬಾಬಯ್ಯನ ಹಬ್ಬವನ್ನು ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು. ಮುಸ್ಲಿಮರ ಈ ಪವಿತ್ರ ಹಬ್ಬದಲ್ಲಿ ಹಿಂದೂ ಸಹೋದರರು ಭಾಗವಹಿಸಿ ಧಾರ್ಮಿಕ ಸೌಹಾರ್ದತೆಗೆ ಉತ್ತೇಜನ ನೀಡಿದರು.

ಹಿಂದೂ-ಮುಸ್ಲಿಂ ಬಾಂಧವ್ಯದ ಸಂಕೇತವಾಗಿ, ಹಿಂದೂಗಳು ಮುಸ್ಲಿಮರಿಗೆ ಅಗತ್ಯ ಸಾಮಗ್ರಿಗಳನ್ನು ನೀಡಿದ ಬಳಿಕ, ಒಂದು ವಾರದ ಹಿಂದೆ ನಿರ್ಮಿತವಾದ ಗುಂಡಿಯಲ್ಲಿ ಕೊಂಡ ಹಾಕಲಾಯಿತು. ಹಲವು ವರ್ಷಗಳಿಂದ ಈ ಹಬ್ಬ ಆಚರಿಸುತ್ತಿರುವ ಬಾಬಯ್ಯ ವಂಶಸ್ಥ ಭಾಷಾ ನೇತೃತ್ವದಲ್ಲಿ ಹಸೇನ್-ಹುಸೇನ್ ದೇವರ ಹಸ್ತಗಳನ್ನು ಹೊತ್ತು, ಗ್ರಾಮದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು. ನಂತರ ಗ್ರಾಮದ ಮಧ್ಯದಲ್ಲಿರುವ ಚಾವಡಿ ಬಳಿ ಕರೆತರಲಾಯಿತು. ಅನೇಕರು ಹರಕೆ ಹೊತ್ತು ಅಗ್ನಿಕುಂಡ ಹಾಯಿವುದರಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಜಾತಿ-ಭೇದವಿಲ್ಲದೆ ಎಲ್ಲರೂ ಒಂದಾಗಿ ಹಬ್ಬವನ್ನು ಯಶಸ್ವಿಯಾಗಿ ಆಚರಿಸಿದರು.

ಈ ಸಂದರ್ಭದಲ್ಲಿ, ಗ್ರಾಮದ ಹಿರಿಯರಾದ ಕೃಷ್ಣಪ್ಪ ಮಾತನಾಡುತ್ತಾ, “ನಮ್ಮ ತಾತಮುತ್ತಾತನ ಕಾಲದಿಂದಲೂ ಈ ಹಬ್ಬವನ್ನು ಹಿಂದೂಗಳು-ಮುಸ್ಲಿಂ ಸಹೋದರತ್ವದ ಸಂಕೇತವಾಗಿ ಆಚರಿಸುತ್ತಿದ್ದಾರೆ. ಯಾವುದೇ ರೋಗ-ರುಜಿನಗಳು ಗ್ರಾಮದಲ್ಲಿ ಹರಡದಿರಲಿ, ಗ್ರಾಮಕ್ಕೆ ಒಳ್ಳೆಯದುಂಟಾಗಲಿ ಎಂಬ ಉದ್ದೇಶದಿಂದ ಈ ಹಬ್ಬವನ್ನು ಪ್ರತಿವರ್ಷ ಆಚರಿಸುತ್ತೇವೆ,” ಎಂದು ತಿಳಿಸಿದರು.

ಯುವ ಮುಖಂಡ ಉದಯ ಆರಾಧ್ಯ ಮಾತನಾಡಿ, “ನಮ್ಮ ಹಿರಿಯರು ಬಾಬಯ್ಯನ ಹಬ್ಬವನ್ನು ಸೌಹಾರ್ದದ ಸಂಕೇತವಾಗಿ ಆಚರಿಸುತ್ತಾ ಬಂದಿದ್ದಾರೆ. ಗ್ರಾಮದಲ್ಲಿ ಮತಭೇದವಿಲ್ಲದೆ ಎಲ್ಲ ಧರ್ಮ ಹಾಗೂ ಜಾತಿಯವರು ಶಾಂತಿ ಮತ್ತು ಸೌಹಾರ್ದದಿಂದ ಭಾಗವಹಿಸಿದ್ದು, ಇದು ನಮ್ಮ ಬಹುಸಂಸ್ಕೃತಿಯ ಮಹತ್ವವನ್ನು ಪ್ರತಿಬಿಂಬಿಸುತ್ತದೆ,” ಎಂದು ಅಭಿಪ್ರಾಯಪಟ್ಟರು.

ಈ ಹಬ್ಬದ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಶಿವಣ್ಣ, ಮಾಜಿ ಸದಸ್ಯ ದೇವೇಂದ್ರಪ್ಪ, ಮುಖಂಡರಾದ ಹುಸೇನ್, ರವಿ, ಅಸ್ಲಾಂ, ಯುವ ಮುಖಂಡರಾದ ಉದಯ ಆರಾಧ್ಯ, ಮಧು ಮತ್ತು ಇತರರು ಹಾಜರಿದ್ದರು.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

3 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

10 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

11 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

24 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

24 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

1 day ago