ತೂಬಗೆರೆಯಲ್ಲಿ ಬಾಬಯ್ಯನ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಸೌಹಾರ್ದಕ್ಕೆ ಹೆಸರಾದ ಬಾಬಯ್ಯನ ಹಬ್ಬವನ್ನು ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು. ಮುಸ್ಲಿಮರ ಈ ಪವಿತ್ರ ಹಬ್ಬದಲ್ಲಿ ಹಿಂದೂ ಸಹೋದರರು ಭಾಗವಹಿಸಿ ಧಾರ್ಮಿಕ ಸೌಹಾರ್ದತೆಗೆ ಉತ್ತೇಜನ ನೀಡಿದರು.

ಹಿಂದೂ-ಮುಸ್ಲಿಂ ಬಾಂಧವ್ಯದ ಸಂಕೇತವಾಗಿ, ಹಿಂದೂಗಳು ಮುಸ್ಲಿಮರಿಗೆ ಅಗತ್ಯ ಸಾಮಗ್ರಿಗಳನ್ನು ನೀಡಿದ ಬಳಿಕ, ಒಂದು ವಾರದ ಹಿಂದೆ ನಿರ್ಮಿತವಾದ ಗುಂಡಿಯಲ್ಲಿ ಕೊಂಡ ಹಾಕಲಾಯಿತು. ಹಲವು ವರ್ಷಗಳಿಂದ ಈ ಹಬ್ಬ ಆಚರಿಸುತ್ತಿರುವ ಬಾಬಯ್ಯ ವಂಶಸ್ಥ ಭಾಷಾ ನೇತೃತ್ವದಲ್ಲಿ ಹಸೇನ್-ಹುಸೇನ್ ದೇವರ ಹಸ್ತಗಳನ್ನು ಹೊತ್ತು, ಗ್ರಾಮದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು. ನಂತರ ಗ್ರಾಮದ ಮಧ್ಯದಲ್ಲಿರುವ ಚಾವಡಿ ಬಳಿ ಕರೆತರಲಾಯಿತು. ಅನೇಕರು ಹರಕೆ ಹೊತ್ತು ಅಗ್ನಿಕುಂಡ ಹಾಯಿವುದರಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಜಾತಿ-ಭೇದವಿಲ್ಲದೆ ಎಲ್ಲರೂ ಒಂದಾಗಿ ಹಬ್ಬವನ್ನು ಯಶಸ್ವಿಯಾಗಿ ಆಚರಿಸಿದರು.

ಈ ಸಂದರ್ಭದಲ್ಲಿ, ಗ್ರಾಮದ ಹಿರಿಯರಾದ ಕೃಷ್ಣಪ್ಪ ಮಾತನಾಡುತ್ತಾ, “ನಮ್ಮ ತಾತಮುತ್ತಾತನ ಕಾಲದಿಂದಲೂ ಈ ಹಬ್ಬವನ್ನು ಹಿಂದೂಗಳು-ಮುಸ್ಲಿಂ ಸಹೋದರತ್ವದ ಸಂಕೇತವಾಗಿ ಆಚರಿಸುತ್ತಿದ್ದಾರೆ. ಯಾವುದೇ ರೋಗ-ರುಜಿನಗಳು ಗ್ರಾಮದಲ್ಲಿ ಹರಡದಿರಲಿ, ಗ್ರಾಮಕ್ಕೆ ಒಳ್ಳೆಯದುಂಟಾಗಲಿ ಎಂಬ ಉದ್ದೇಶದಿಂದ ಈ ಹಬ್ಬವನ್ನು ಪ್ರತಿವರ್ಷ ಆಚರಿಸುತ್ತೇವೆ,” ಎಂದು ತಿಳಿಸಿದರು.

ಯುವ ಮುಖಂಡ ಉದಯ ಆರಾಧ್ಯ ಮಾತನಾಡಿ, “ನಮ್ಮ ಹಿರಿಯರು ಬಾಬಯ್ಯನ ಹಬ್ಬವನ್ನು ಸೌಹಾರ್ದದ ಸಂಕೇತವಾಗಿ ಆಚರಿಸುತ್ತಾ ಬಂದಿದ್ದಾರೆ. ಗ್ರಾಮದಲ್ಲಿ ಮತಭೇದವಿಲ್ಲದೆ ಎಲ್ಲ ಧರ್ಮ ಹಾಗೂ ಜಾತಿಯವರು ಶಾಂತಿ ಮತ್ತು ಸೌಹಾರ್ದದಿಂದ ಭಾಗವಹಿಸಿದ್ದು, ಇದು ನಮ್ಮ ಬಹುಸಂಸ್ಕೃತಿಯ ಮಹತ್ವವನ್ನು ಪ್ರತಿಬಿಂಬಿಸುತ್ತದೆ,” ಎಂದು ಅಭಿಪ್ರಾಯಪಟ್ಟರು.

ಈ ಹಬ್ಬದ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಶಿವಣ್ಣ, ಮಾಜಿ ಸದಸ್ಯ ದೇವೇಂದ್ರಪ್ಪ, ಮುಖಂಡರಾದ ಹುಸೇನ್, ರವಿ, ಅಸ್ಲಾಂ, ಯುವ ಮುಖಂಡರಾದ ಉದಯ ಆರಾಧ್ಯ, ಮಧು ಮತ್ತು ಇತರರು ಹಾಜರಿದ್ದರು.

Ramesh Babu

Journalist

Recent Posts

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

53 minutes ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

10 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

20 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

21 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago