ದೊಡ್ಡಬಳ್ಳಾಪುರ: ಸೌಹಾರ್ದಕ್ಕೆ ಹೆಸರಾದ ಬಾಬಯ್ಯನ ಹಬ್ಬವನ್ನು ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು. ಮುಸ್ಲಿಮರ ಈ ಪವಿತ್ರ ಹಬ್ಬದಲ್ಲಿ ಹಿಂದೂ ಸಹೋದರರು ಭಾಗವಹಿಸಿ ಧಾರ್ಮಿಕ ಸೌಹಾರ್ದತೆಗೆ ಉತ್ತೇಜನ ನೀಡಿದರು.
ಹಿಂದೂ-ಮುಸ್ಲಿಂ ಬಾಂಧವ್ಯದ ಸಂಕೇತವಾಗಿ, ಹಿಂದೂಗಳು ಮುಸ್ಲಿಮರಿಗೆ ಅಗತ್ಯ ಸಾಮಗ್ರಿಗಳನ್ನು ನೀಡಿದ ಬಳಿಕ, ಒಂದು ವಾರದ ಹಿಂದೆ ನಿರ್ಮಿತವಾದ ಗುಂಡಿಯಲ್ಲಿ ಕೊಂಡ ಹಾಕಲಾಯಿತು. ಹಲವು ವರ್ಷಗಳಿಂದ ಈ ಹಬ್ಬ ಆಚರಿಸುತ್ತಿರುವ ಬಾಬಯ್ಯ ವಂಶಸ್ಥ ಭಾಷಾ ನೇತೃತ್ವದಲ್ಲಿ ಹಸೇನ್-ಹುಸೇನ್ ದೇವರ ಹಸ್ತಗಳನ್ನು ಹೊತ್ತು, ಗ್ರಾಮದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು. ನಂತರ ಗ್ರಾಮದ ಮಧ್ಯದಲ್ಲಿರುವ ಚಾವಡಿ ಬಳಿ ಕರೆತರಲಾಯಿತು. ಅನೇಕರು ಹರಕೆ ಹೊತ್ತು ಅಗ್ನಿಕುಂಡ ಹಾಯಿವುದರಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಜಾತಿ-ಭೇದವಿಲ್ಲದೆ ಎಲ್ಲರೂ ಒಂದಾಗಿ ಹಬ್ಬವನ್ನು ಯಶಸ್ವಿಯಾಗಿ ಆಚರಿಸಿದರು.
ಈ ಸಂದರ್ಭದಲ್ಲಿ, ಗ್ರಾಮದ ಹಿರಿಯರಾದ ಕೃಷ್ಣಪ್ಪ ಮಾತನಾಡುತ್ತಾ, “ನಮ್ಮ ತಾತಮುತ್ತಾತನ ಕಾಲದಿಂದಲೂ ಈ ಹಬ್ಬವನ್ನು ಹಿಂದೂಗಳು-ಮುಸ್ಲಿಂ ಸಹೋದರತ್ವದ ಸಂಕೇತವಾಗಿ ಆಚರಿಸುತ್ತಿದ್ದಾರೆ. ಯಾವುದೇ ರೋಗ-ರುಜಿನಗಳು ಗ್ರಾಮದಲ್ಲಿ ಹರಡದಿರಲಿ, ಗ್ರಾಮಕ್ಕೆ ಒಳ್ಳೆಯದುಂಟಾಗಲಿ ಎಂಬ ಉದ್ದೇಶದಿಂದ ಈ ಹಬ್ಬವನ್ನು ಪ್ರತಿವರ್ಷ ಆಚರಿಸುತ್ತೇವೆ,” ಎಂದು ತಿಳಿಸಿದರು.
ಯುವ ಮುಖಂಡ ಉದಯ ಆರಾಧ್ಯ ಮಾತನಾಡಿ, “ನಮ್ಮ ಹಿರಿಯರು ಬಾಬಯ್ಯನ ಹಬ್ಬವನ್ನು ಸೌಹಾರ್ದದ ಸಂಕೇತವಾಗಿ ಆಚರಿಸುತ್ತಾ ಬಂದಿದ್ದಾರೆ. ಗ್ರಾಮದಲ್ಲಿ ಮತಭೇದವಿಲ್ಲದೆ ಎಲ್ಲ ಧರ್ಮ ಹಾಗೂ ಜಾತಿಯವರು ಶಾಂತಿ ಮತ್ತು ಸೌಹಾರ್ದದಿಂದ ಭಾಗವಹಿಸಿದ್ದು, ಇದು ನಮ್ಮ ಬಹುಸಂಸ್ಕೃತಿಯ ಮಹತ್ವವನ್ನು ಪ್ರತಿಬಿಂಬಿಸುತ್ತದೆ,” ಎಂದು ಅಭಿಪ್ರಾಯಪಟ್ಟರು.
ಈ ಹಬ್ಬದ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಶಿವಣ್ಣ, ಮಾಜಿ ಸದಸ್ಯ ದೇವೇಂದ್ರಪ್ಪ, ಮುಖಂಡರಾದ ಹುಸೇನ್, ರವಿ, ಅಸ್ಲಾಂ, ಯುವ ಮುಖಂಡರಾದ ಉದಯ ಆರಾಧ್ಯ, ಮಧು ಮತ್ತು ಇತರರು ಹಾಜರಿದ್ದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…