ತೂಬಗೆರೆಯಲ್ಲಿ ಬಾಬಯ್ಯನ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಸೌಹಾರ್ದಕ್ಕೆ ಹೆಸರಾದ ಬಾಬಯ್ಯನ ಹಬ್ಬವನ್ನು ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು. ಮುಸ್ಲಿಮರ ಈ ಪವಿತ್ರ ಹಬ್ಬದಲ್ಲಿ ಹಿಂದೂ ಸಹೋದರರು ಭಾಗವಹಿಸಿ ಧಾರ್ಮಿಕ ಸೌಹಾರ್ದತೆಗೆ ಉತ್ತೇಜನ ನೀಡಿದರು.

ಹಿಂದೂ-ಮುಸ್ಲಿಂ ಬಾಂಧವ್ಯದ ಸಂಕೇತವಾಗಿ, ಹಿಂದೂಗಳು ಮುಸ್ಲಿಮರಿಗೆ ಅಗತ್ಯ ಸಾಮಗ್ರಿಗಳನ್ನು ನೀಡಿದ ಬಳಿಕ, ಒಂದು ವಾರದ ಹಿಂದೆ ನಿರ್ಮಿತವಾದ ಗುಂಡಿಯಲ್ಲಿ ಕೊಂಡ ಹಾಕಲಾಯಿತು. ಹಲವು ವರ್ಷಗಳಿಂದ ಈ ಹಬ್ಬ ಆಚರಿಸುತ್ತಿರುವ ಬಾಬಯ್ಯ ವಂಶಸ್ಥ ಭಾಷಾ ನೇತೃತ್ವದಲ್ಲಿ ಹಸೇನ್-ಹುಸೇನ್ ದೇವರ ಹಸ್ತಗಳನ್ನು ಹೊತ್ತು, ಗ್ರಾಮದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು. ನಂತರ ಗ್ರಾಮದ ಮಧ್ಯದಲ್ಲಿರುವ ಚಾವಡಿ ಬಳಿ ಕರೆತರಲಾಯಿತು. ಅನೇಕರು ಹರಕೆ ಹೊತ್ತು ಅಗ್ನಿಕುಂಡ ಹಾಯಿವುದರಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಜಾತಿ-ಭೇದವಿಲ್ಲದೆ ಎಲ್ಲರೂ ಒಂದಾಗಿ ಹಬ್ಬವನ್ನು ಯಶಸ್ವಿಯಾಗಿ ಆಚರಿಸಿದರು.

ಈ ಸಂದರ್ಭದಲ್ಲಿ, ಗ್ರಾಮದ ಹಿರಿಯರಾದ ಕೃಷ್ಣಪ್ಪ ಮಾತನಾಡುತ್ತಾ, “ನಮ್ಮ ತಾತಮುತ್ತಾತನ ಕಾಲದಿಂದಲೂ ಈ ಹಬ್ಬವನ್ನು ಹಿಂದೂಗಳು-ಮುಸ್ಲಿಂ ಸಹೋದರತ್ವದ ಸಂಕೇತವಾಗಿ ಆಚರಿಸುತ್ತಿದ್ದಾರೆ. ಯಾವುದೇ ರೋಗ-ರುಜಿನಗಳು ಗ್ರಾಮದಲ್ಲಿ ಹರಡದಿರಲಿ, ಗ್ರಾಮಕ್ಕೆ ಒಳ್ಳೆಯದುಂಟಾಗಲಿ ಎಂಬ ಉದ್ದೇಶದಿಂದ ಈ ಹಬ್ಬವನ್ನು ಪ್ರತಿವರ್ಷ ಆಚರಿಸುತ್ತೇವೆ,” ಎಂದು ತಿಳಿಸಿದರು.

ಯುವ ಮುಖಂಡ ಉದಯ ಆರಾಧ್ಯ ಮಾತನಾಡಿ, “ನಮ್ಮ ಹಿರಿಯರು ಬಾಬಯ್ಯನ ಹಬ್ಬವನ್ನು ಸೌಹಾರ್ದದ ಸಂಕೇತವಾಗಿ ಆಚರಿಸುತ್ತಾ ಬಂದಿದ್ದಾರೆ. ಗ್ರಾಮದಲ್ಲಿ ಮತಭೇದವಿಲ್ಲದೆ ಎಲ್ಲ ಧರ್ಮ ಹಾಗೂ ಜಾತಿಯವರು ಶಾಂತಿ ಮತ್ತು ಸೌಹಾರ್ದದಿಂದ ಭಾಗವಹಿಸಿದ್ದು, ಇದು ನಮ್ಮ ಬಹುಸಂಸ್ಕೃತಿಯ ಮಹತ್ವವನ್ನು ಪ್ರತಿಬಿಂಬಿಸುತ್ತದೆ,” ಎಂದು ಅಭಿಪ್ರಾಯಪಟ್ಟರು.

ಈ ಹಬ್ಬದ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಶಿವಣ್ಣ, ಮಾಜಿ ಸದಸ್ಯ ದೇವೇಂದ್ರಪ್ಪ, ಮುಖಂಡರಾದ ಹುಸೇನ್, ರವಿ, ಅಸ್ಲಾಂ, ಯುವ ಮುಖಂಡರಾದ ಉದಯ ಆರಾಧ್ಯ, ಮಧು ಮತ್ತು ಇತರರು ಹಾಜರಿದ್ದರು.

Ramesh Babu

Journalist

Recent Posts

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

10 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

14 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

15 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

18 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

1 day ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

2 days ago