ತೂಬಗೆರೆಯಲ್ಲಿ ಗಜನಿಂದ ಗಜಮುಖನ ಮೆರವಣಿಗೆ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆಯಲ್ಲಿ ಈ ಬಾರಿ ಗಣೇಶೋತ್ಸವವು ವಿಶಿಷ್ಟವಾಗಿ ನಡೆಯಿತು. ತೂಬಗೆರೆ ಚಾವಡಿ ಗಣೇಶೋತ್ಸವ ಸಮಿತಿಯವರು ಮೊದಲ ಬಾರಿಗೆ ತೂಬಗೆರೆಯ ಇತಿಹಾಸದಲ್ಲೇ ದಸರಾ ಮಾದರಿ ಆನೆ ಅಂಬಾರಿ ಗಣೇಶ ಮೆರವಣಿಗೆಯನ್ನು ಆಯೋಜಿಸಿದ್ದು, ಇದು ಊರಿನ ಸಾಂಸ್ಕೃತಿಕ ಇತಿಹಾಸದಲ್ಲಿ ಸ್ಮರಣೀಯ ಕ್ಷಣವಾಯಿತು.

ಅಂತಿಮ ದಿನವಾದ ಇಂದು ಸೆಪ್ಟೆಂಬರ್ 1, ಸೋಮವಾರ 2025ರಂದು ಮಧ್ಯಾಹ್ನದಿಂದ ಸಂಜೆವರೆಗೆ ಆನೆ ಅಂಬಾರಿ ಮೆರವಣಿಗೆ ಹಾಗೂ ಭವ್ಯ ವಿಸರ್ಜನೆ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಸಾಂಸ್ಕೃತಿಕ, ನಾದಸ್ವರ, ಕಲಾ ತಂಡಗಳು ಭಕ್ತರನ್ನು ಮನರಂಜಿಸಿದವು.

ತೂಬಗೆರೆ ಪ್ರಮುಖ ಬೀದಿಗಳಲ್ಲಿ ಗಜ ಗಾಂಭೀರ್ಯದಿಂದ ನಡೆದ ಲಕ್ಷ್ಮಿ ಹೆಸರಿನ ಆನೆ. ಗಣೇಶಹೊತ್ತ ಆನೆ ನಡಿಗೆಗೆ ಫುಲ್ ಫಿದಾ ಆದ ಜನ. ಮೈಸೂರು ದಸಾರ ಆನೆ ಅಂಬಾರಿಯಂತೆ ಹೋಲುವ ಗಣೇಶನ ಮೆರವಣೆಗೆ ಅದ್ದೂರಿಯಾಗಿ ನಡೆಯಿತು.

ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ(ಕಿಟ್ಟಿ), ಚಾವಡಿ ಅಧ್ಯಕ್ಷ ಮಧು, ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್, ದೇವನಹಳ್ಳಿ ಬಿಜೆಪಿ ಅಧ್ಯಕ್ಷ ಅಂಬೀಶ್ ಗೌಡ, ಬಿಜೆಪಿ ಮುಖಂಡ ಪ್ರತಾಪ್ ಸೇರಿದಂತೆ ಇತರರು ಉಪಸ್ಥಿತರಿದ್ದರು….

ಸ್ಥಳದಲ್ಲಿ ಡಿವೈಎಸ್ ಪಿ ರವಿ.ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು… ಮುನ್ನೆಚ್ಚರಿಕಾ ಕ್ರಮವಾಗಿ ಅರಣ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು…

Ramesh Babu

Journalist

Recent Posts

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 hour ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

17 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

23 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago