ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆಯಲ್ಲಿ ಈ ಬಾರಿ ಗಣೇಶೋತ್ಸವವು ವಿಶಿಷ್ಟವಾಗಿ ನಡೆಯಿತು. ತೂಬಗೆರೆ ಚಾವಡಿ ಗಣೇಶೋತ್ಸವ ಸಮಿತಿಯವರು ಮೊದಲ ಬಾರಿಗೆ ತೂಬಗೆರೆಯ ಇತಿಹಾಸದಲ್ಲೇ ದಸರಾ ಮಾದರಿ ಆನೆ ಅಂಬಾರಿ ಗಣೇಶ ಮೆರವಣಿಗೆಯನ್ನು ಆಯೋಜಿಸಿದ್ದು, ಇದು ಊರಿನ ಸಾಂಸ್ಕೃತಿಕ ಇತಿಹಾಸದಲ್ಲಿ ಸ್ಮರಣೀಯ ಕ್ಷಣವಾಯಿತು.
ಅಂತಿಮ ದಿನವಾದ ಇಂದು ಸೆಪ್ಟೆಂಬರ್ 1, ಸೋಮವಾರ 2025ರಂದು ಮಧ್ಯಾಹ್ನದಿಂದ ಸಂಜೆವರೆಗೆ ಆನೆ ಅಂಬಾರಿ ಮೆರವಣಿಗೆ ಹಾಗೂ ಭವ್ಯ ವಿಸರ್ಜನೆ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಸಾಂಸ್ಕೃತಿಕ, ನಾದಸ್ವರ, ಕಲಾ ತಂಡಗಳು ಭಕ್ತರನ್ನು ಮನರಂಜಿಸಿದವು.
ತೂಬಗೆರೆ ಪ್ರಮುಖ ಬೀದಿಗಳಲ್ಲಿ ಗಜ ಗಾಂಭೀರ್ಯದಿಂದ ನಡೆದ ಲಕ್ಷ್ಮಿ ಹೆಸರಿನ ಆನೆ. ಗಣೇಶಹೊತ್ತ ಆನೆ ನಡಿಗೆಗೆ ಫುಲ್ ಫಿದಾ ಆದ ಜನ. ಮೈಸೂರು ದಸಾರ ಆನೆ ಅಂಬಾರಿಯಂತೆ ಹೋಲುವ ಗಣೇಶನ ಮೆರವಣೆಗೆ ಅದ್ದೂರಿಯಾಗಿ ನಡೆಯಿತು.
ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ(ಕಿಟ್ಟಿ), ಚಾವಡಿ ಅಧ್ಯಕ್ಷ ಮಧು, ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್, ದೇವನಹಳ್ಳಿ ಬಿಜೆಪಿ ಅಧ್ಯಕ್ಷ ಅಂಬೀಶ್ ಗೌಡ, ಬಿಜೆಪಿ ಮುಖಂಡ ಪ್ರತಾಪ್ ಸೇರಿದಂತೆ ಇತರರು ಉಪಸ್ಥಿತರಿದ್ದರು….
ಸ್ಥಳದಲ್ಲಿ ಡಿವೈಎಸ್ ಪಿ ರವಿ.ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು… ಮುನ್ನೆಚ್ಚರಿಕಾ ಕ್ರಮವಾಗಿ ಅರಣ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು…
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…