ತೂಬಗೆರೆಯಲ್ಲಿ ರಾಮಭಕ್ತರಿಂದ ಮಂತ್ರಾಕ್ಷತೆಯ ಅದ್ಧೂರಿ ಮೆರವಣಿಗೆ

ಅಯೋಧ್ಯಾ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಅಯೋಧ್ಯೆಯಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆಯ ಭವ್ಯ ಮೆರವಣಿಗೆ ಹೋಬಳಿಯಾದ್ಯಾಂತ  ಭಾನುವಾರ ವಿಜೃಂಭಣೆಯಿಂದ ಜರುಗಿತು. ಮಂತ್ರಾಕ್ಷತೆ ಹೊತ್ತ ರಾಮಭಕ್ತರು ರಾಮನಾಮ ಭಜನೆ ಮಾಡುವ ಮೂಲಕ ಭಕ್ತಿ ಮೆರೆದರು.

ತೂಬಗೆರೆ ಶ್ರೀ ಲಕ್ಷ್ಮಿವೆಂಕಟೇಶ್ವರ ದೇವಾಲಯದಲ್ಲಿ   ಮಂತ್ರಾಕ್ಷತೆಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಂತ್ರಾಕ್ಷತೆ ಹಾಗೂ ಶ್ರೀರಾಮಚಂದ್ರನ ಭಾವಚಿತ್ರವನ್ನು ಸಾರೋಟದಲ್ಲಿ ಇರಿಸಿ ಮೆರವಣಿಗೆ ಆರಂಭಿಸಲಾಯಿತು. ರಾಮನ ಮಂತ್ರಾಕ್ಷತೆಗೆ ಸಾರ್ವಜನಿಕರು ಹೂವು ಚೆಲ್ಲಿದರು. ಕೇಸರಿ ಶಾಲುಗಳು ರ‌್ಯಾಲಿಯಲ್ಲಿ ಗಮನ ಸೆಳೆದವು. ಮೆರವಣಿಗೆ ದೊಡ್ಡಬಳ್ಳಾಪುರ ದಿಂದ ಕಂಟನಕುಂಟೆ, ತಿರಮಗೊಂಡನಹಳ್ಳಿ, ಹಾಡೋನಹಳ್ಳಿ ಮುಖಾಂತರ ಸಾಗಿ ತೂಬಗೆರೆ ಪ್ರಮುಖ ರಸ್ತೆಗಳಲ್ಲಿ ಸಾಗಿ ನಂತರ ಮುಕ್ತಾಯಗೊಂಡಿತು.

ಈ ಮೆರವಣಿಗೆ ಕಾರ್ಯಕ್ರಮದಲ್ಲಿ ವಕೀಲ, ಬಿಜಪಿ ಮುಖಂಡ ಪ್ರತಾಪ್ ಭಾಗವಹಿಸಿ‌ ಮಾತನಾಡಿದ ಅವರು, ಜನವರಿಯಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರದ ಲೋಕಾರ್ಪಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಲ್ಲಿ ಪೂಜಿಸಲ್ಪಟ್ಟ ಮಂತ್ರಾಕ್ಷತೆಯನ್ನು ಮನೆಮನೆಗೆ ವಿತರಿಸುವ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ಇಂದಿನಿಂದ ದೇಶದ ಪ್ರತಿ ಮನೆ ಮನೆಗೂ ಮಂತ್ರಾಕ್ಷತೆಯನ್ನು ತಲುಪಿಸುವಂತ ಕಾರ್ಯ ಮಾಡಲಾಗುವುದು. ದೇಶದ ಜನತೆಗೆ ಭಗವಂತನ ಆಶೀರ್ವಾದ ತಲುಪಬೇಕು. ಈ ನಿಟ್ಟಿನಲ್ಲಿ ನಾವು ನಮ್ಮ ಕಾರ್ಯಕರ್ತರು ಅವಿರತವಾಗಿ ಶ್ರಮಿಸುತ್ತೇವೆ ಎಂದರು.

ಅಯೋಧ್ಯೆಯಲ್ಲಿ ಜನವರಿ 22ರ ಬೆಳಗ್ಗೆ 11ರಿಂದ ಮಧ್ಯಾಹ್ನ 1ರ ಸುಮುಹೂರ್ತದಲ್ಲಿ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆ ನಡೆಯಲಿದೆ. ಇದನ್ನು ಪ್ರತೀ ರಾಮ ಭಕ್ತರು ತಮ್ಮತಮ್ಮ ಊರು, ಮನೆಗಳಲ್ಲಿ ಸಂಭ್ರಮದಿಂದ ಆಚರಿ ಸುವಂತಾಗಲು ಈ ಅಭಿಯಾನ ಆಯೋಜನೆ ಮಾಡಿಲಾಗಿದೆ ಎಂದು ಹೇಳಿದರು.

ನಂತರ ತೂಬಗೆರೆ ಬಿಜೆಪಿ ಮುಖಂಡ ಕೃಷ್ಣಪ್ಪ ಮಾತನಾಡಿ, ಶ್ರೀರಾಮನ ಜನ್ಮಸ್ಥಳದಲ್ಲಿ ಮಂದಿರ ನಿರ್ಮಾಣ ಕೋಟ್ಯಂತರ ಭಾರತೀಯ ರ ಕನಸಾಗಿತ್ತು. ಅದು ಈಗ ನನಸಾಗುತ್ತಿದೆ. ಈ ಮೂಲಕ ಭಾರತ ಮತ್ತೆ ವಿಶ್ವಗುರು ಆಗುವ ಭರವಸೆ ಮೂಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನಾಡಿನ ಸಮಸ್ತ ರಾಮಭಕ್ತರಿಂದ ಮಂದಿರ ನಿರ್ಮಾಣವಾಗುತ್ತಿದೆ.ಧರ್ಮಾತೀತವಾಗಿ, ಪಕ್ಷಾತೀತವಾಗಿ, ಜ್ಯಾತ್ಯಾತೀತವಾಗಿ ಎಲ್ಲರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ದೇಶದ ಏಕತೆ ಸಾರುವ ಒಂದು ಶುಭ ಸಂದರ್ಭ ಇದಾಗಿದೆ. ಅಯೋಧ್ಯೆಯಿಂದ ಬಂದಿರುವ ಮಂತ್ರಾಕ್ಷತೆ ಎಲ್ಲ ಮನೆ, ಮನ ತುಂಬಲಿ ಎಂದು ಹಾರೈಸಿದರು.

Ramesh Babu

Journalist

Recent Posts

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

17 minutes ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

3 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

3 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

12 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

13 hours ago