ಅಯೋಧ್ಯಾ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಅಯೋಧ್ಯೆಯಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆಯ ಭವ್ಯ ಮೆರವಣಿಗೆ ಹೋಬಳಿಯಾದ್ಯಾಂತ ಭಾನುವಾರ ವಿಜೃಂಭಣೆಯಿಂದ ಜರುಗಿತು. ಮಂತ್ರಾಕ್ಷತೆ ಹೊತ್ತ ರಾಮಭಕ್ತರು ರಾಮನಾಮ ಭಜನೆ ಮಾಡುವ ಮೂಲಕ ಭಕ್ತಿ ಮೆರೆದರು.
ತೂಬಗೆರೆ ಶ್ರೀ ಲಕ್ಷ್ಮಿವೆಂಕಟೇಶ್ವರ ದೇವಾಲಯದಲ್ಲಿ ಮಂತ್ರಾಕ್ಷತೆಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಂತ್ರಾಕ್ಷತೆ ಹಾಗೂ ಶ್ರೀರಾಮಚಂದ್ರನ ಭಾವಚಿತ್ರವನ್ನು ಸಾರೋಟದಲ್ಲಿ ಇರಿಸಿ ಮೆರವಣಿಗೆ ಆರಂಭಿಸಲಾಯಿತು. ರಾಮನ ಮಂತ್ರಾಕ್ಷತೆಗೆ ಸಾರ್ವಜನಿಕರು ಹೂವು ಚೆಲ್ಲಿದರು. ಕೇಸರಿ ಶಾಲುಗಳು ರ್ಯಾಲಿಯಲ್ಲಿ ಗಮನ ಸೆಳೆದವು. ಮೆರವಣಿಗೆ ದೊಡ್ಡಬಳ್ಳಾಪುರ ದಿಂದ ಕಂಟನಕುಂಟೆ, ತಿರಮಗೊಂಡನಹಳ್ಳಿ, ಹಾಡೋನಹಳ್ಳಿ ಮುಖಾಂತರ ಸಾಗಿ ತೂಬಗೆರೆ ಪ್ರಮುಖ ರಸ್ತೆಗಳಲ್ಲಿ ಸಾಗಿ ನಂತರ ಮುಕ್ತಾಯಗೊಂಡಿತು.
ಈ ಮೆರವಣಿಗೆ ಕಾರ್ಯಕ್ರಮದಲ್ಲಿ ವಕೀಲ, ಬಿಜಪಿ ಮುಖಂಡ ಪ್ರತಾಪ್ ಭಾಗವಹಿಸಿ ಮಾತನಾಡಿದ ಅವರು, ಜನವರಿಯಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರದ ಲೋಕಾರ್ಪಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಲ್ಲಿ ಪೂಜಿಸಲ್ಪಟ್ಟ ಮಂತ್ರಾಕ್ಷತೆಯನ್ನು ಮನೆಮನೆಗೆ ವಿತರಿಸುವ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ಇಂದಿನಿಂದ ದೇಶದ ಪ್ರತಿ ಮನೆ ಮನೆಗೂ ಮಂತ್ರಾಕ್ಷತೆಯನ್ನು ತಲುಪಿಸುವಂತ ಕಾರ್ಯ ಮಾಡಲಾಗುವುದು. ದೇಶದ ಜನತೆಗೆ ಭಗವಂತನ ಆಶೀರ್ವಾದ ತಲುಪಬೇಕು. ಈ ನಿಟ್ಟಿನಲ್ಲಿ ನಾವು ನಮ್ಮ ಕಾರ್ಯಕರ್ತರು ಅವಿರತವಾಗಿ ಶ್ರಮಿಸುತ್ತೇವೆ ಎಂದರು.
ನಂತರ ತೂಬಗೆರೆ ಬಿಜೆಪಿ ಮುಖಂಡ ಕೃಷ್ಣಪ್ಪ ಮಾತನಾಡಿ, ಶ್ರೀರಾಮನ ಜನ್ಮಸ್ಥಳದಲ್ಲಿ ಮಂದಿರ ನಿರ್ಮಾಣ ಕೋಟ್ಯಂತರ ಭಾರತೀಯ ರ ಕನಸಾಗಿತ್ತು. ಅದು ಈಗ ನನಸಾಗುತ್ತಿದೆ. ಈ ಮೂಲಕ ಭಾರತ ಮತ್ತೆ ವಿಶ್ವಗುರು ಆಗುವ ಭರವಸೆ ಮೂಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನಾಡಿನ ಸಮಸ್ತ ರಾಮಭಕ್ತರಿಂದ ಮಂದಿರ ನಿರ್ಮಾಣವಾಗುತ್ತಿದೆ.ಧರ್ಮಾತೀತವಾಗಿ, ಪಕ್ಷಾತೀತವಾಗಿ, ಜ್ಯಾತ್ಯಾತೀತವಾಗಿ ಎಲ್ಲರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ದೇಶದ ಏಕತೆ ಸಾರುವ ಒಂದು ಶುಭ ಸಂದರ್ಭ ಇದಾಗಿದೆ. ಅಯೋಧ್ಯೆಯಿಂದ ಬಂದಿರುವ ಮಂತ್ರಾಕ್ಷತೆ ಎಲ್ಲ ಮನೆ, ಮನ ತುಂಬಲಿ ಎಂದು ಹಾರೈಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…