ಅಯೋಧ್ಯಾ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಅಯೋಧ್ಯೆಯಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆಯ ಭವ್ಯ ಮೆರವಣಿಗೆ ಹೋಬಳಿಯಾದ್ಯಾಂತ ಭಾನುವಾರ ವಿಜೃಂಭಣೆಯಿಂದ ಜರುಗಿತು. ಮಂತ್ರಾಕ್ಷತೆ ಹೊತ್ತ ರಾಮಭಕ್ತರು ರಾಮನಾಮ ಭಜನೆ ಮಾಡುವ ಮೂಲಕ ಭಕ್ತಿ ಮೆರೆದರು.
ತೂಬಗೆರೆ ಶ್ರೀ ಲಕ್ಷ್ಮಿವೆಂಕಟೇಶ್ವರ ದೇವಾಲಯದಲ್ಲಿ ಮಂತ್ರಾಕ್ಷತೆಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಂತ್ರಾಕ್ಷತೆ ಹಾಗೂ ಶ್ರೀರಾಮಚಂದ್ರನ ಭಾವಚಿತ್ರವನ್ನು ಸಾರೋಟದಲ್ಲಿ ಇರಿಸಿ ಮೆರವಣಿಗೆ ಆರಂಭಿಸಲಾಯಿತು. ರಾಮನ ಮಂತ್ರಾಕ್ಷತೆಗೆ ಸಾರ್ವಜನಿಕರು ಹೂವು ಚೆಲ್ಲಿದರು. ಕೇಸರಿ ಶಾಲುಗಳು ರ್ಯಾಲಿಯಲ್ಲಿ ಗಮನ ಸೆಳೆದವು. ಮೆರವಣಿಗೆ ದೊಡ್ಡಬಳ್ಳಾಪುರ ದಿಂದ ಕಂಟನಕುಂಟೆ, ತಿರಮಗೊಂಡನಹಳ್ಳಿ, ಹಾಡೋನಹಳ್ಳಿ ಮುಖಾಂತರ ಸಾಗಿ ತೂಬಗೆರೆ ಪ್ರಮುಖ ರಸ್ತೆಗಳಲ್ಲಿ ಸಾಗಿ ನಂತರ ಮುಕ್ತಾಯಗೊಂಡಿತು.
ಈ ಮೆರವಣಿಗೆ ಕಾರ್ಯಕ್ರಮದಲ್ಲಿ ವಕೀಲ, ಬಿಜಪಿ ಮುಖಂಡ ಪ್ರತಾಪ್ ಭಾಗವಹಿಸಿ ಮಾತನಾಡಿದ ಅವರು, ಜನವರಿಯಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರದ ಲೋಕಾರ್ಪಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಲ್ಲಿ ಪೂಜಿಸಲ್ಪಟ್ಟ ಮಂತ್ರಾಕ್ಷತೆಯನ್ನು ಮನೆಮನೆಗೆ ವಿತರಿಸುವ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ಇಂದಿನಿಂದ ದೇಶದ ಪ್ರತಿ ಮನೆ ಮನೆಗೂ ಮಂತ್ರಾಕ್ಷತೆಯನ್ನು ತಲುಪಿಸುವಂತ ಕಾರ್ಯ ಮಾಡಲಾಗುವುದು. ದೇಶದ ಜನತೆಗೆ ಭಗವಂತನ ಆಶೀರ್ವಾದ ತಲುಪಬೇಕು. ಈ ನಿಟ್ಟಿನಲ್ಲಿ ನಾವು ನಮ್ಮ ಕಾರ್ಯಕರ್ತರು ಅವಿರತವಾಗಿ ಶ್ರಮಿಸುತ್ತೇವೆ ಎಂದರು.
ನಂತರ ತೂಬಗೆರೆ ಬಿಜೆಪಿ ಮುಖಂಡ ಕೃಷ್ಣಪ್ಪ ಮಾತನಾಡಿ, ಶ್ರೀರಾಮನ ಜನ್ಮಸ್ಥಳದಲ್ಲಿ ಮಂದಿರ ನಿರ್ಮಾಣ ಕೋಟ್ಯಂತರ ಭಾರತೀಯ ರ ಕನಸಾಗಿತ್ತು. ಅದು ಈಗ ನನಸಾಗುತ್ತಿದೆ. ಈ ಮೂಲಕ ಭಾರತ ಮತ್ತೆ ವಿಶ್ವಗುರು ಆಗುವ ಭರವಸೆ ಮೂಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನಾಡಿನ ಸಮಸ್ತ ರಾಮಭಕ್ತರಿಂದ ಮಂದಿರ ನಿರ್ಮಾಣವಾಗುತ್ತಿದೆ.ಧರ್ಮಾತೀತವಾಗಿ, ಪಕ್ಷಾತೀತವಾಗಿ, ಜ್ಯಾತ್ಯಾತೀತವಾಗಿ ಎಲ್ಲರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ದೇಶದ ಏಕತೆ ಸಾರುವ ಒಂದು ಶುಭ ಸಂದರ್ಭ ಇದಾಗಿದೆ. ಅಯೋಧ್ಯೆಯಿಂದ ಬಂದಿರುವ ಮಂತ್ರಾಕ್ಷತೆ ಎಲ್ಲ ಮನೆ, ಮನ ತುಂಬಲಿ ಎಂದು ಹಾರೈಸಿದರು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…