ಅಯೋಧ್ಯಾ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಅಯೋಧ್ಯೆಯಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆಯ ಭವ್ಯ ಮೆರವಣಿಗೆ ಹೋಬಳಿಯಾದ್ಯಾಂತ ಭಾನುವಾರ ವಿಜೃಂಭಣೆಯಿಂದ ಜರುಗಿತು. ಮಂತ್ರಾಕ್ಷತೆ ಹೊತ್ತ ರಾಮಭಕ್ತರು ರಾಮನಾಮ ಭಜನೆ ಮಾಡುವ ಮೂಲಕ ಭಕ್ತಿ ಮೆರೆದರು.
ತೂಬಗೆರೆ ಶ್ರೀ ಲಕ್ಷ್ಮಿವೆಂಕಟೇಶ್ವರ ದೇವಾಲಯದಲ್ಲಿ ಮಂತ್ರಾಕ್ಷತೆಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಂತ್ರಾಕ್ಷತೆ ಹಾಗೂ ಶ್ರೀರಾಮಚಂದ್ರನ ಭಾವಚಿತ್ರವನ್ನು ಸಾರೋಟದಲ್ಲಿ ಇರಿಸಿ ಮೆರವಣಿಗೆ ಆರಂಭಿಸಲಾಯಿತು. ರಾಮನ ಮಂತ್ರಾಕ್ಷತೆಗೆ ಸಾರ್ವಜನಿಕರು ಹೂವು ಚೆಲ್ಲಿದರು. ಕೇಸರಿ ಶಾಲುಗಳು ರ್ಯಾಲಿಯಲ್ಲಿ ಗಮನ ಸೆಳೆದವು. ಮೆರವಣಿಗೆ ದೊಡ್ಡಬಳ್ಳಾಪುರ ದಿಂದ ಕಂಟನಕುಂಟೆ, ತಿರಮಗೊಂಡನಹಳ್ಳಿ, ಹಾಡೋನಹಳ್ಳಿ ಮುಖಾಂತರ ಸಾಗಿ ತೂಬಗೆರೆ ಪ್ರಮುಖ ರಸ್ತೆಗಳಲ್ಲಿ ಸಾಗಿ ನಂತರ ಮುಕ್ತಾಯಗೊಂಡಿತು.
ಈ ಮೆರವಣಿಗೆ ಕಾರ್ಯಕ್ರಮದಲ್ಲಿ ವಕೀಲ, ಬಿಜಪಿ ಮುಖಂಡ ಪ್ರತಾಪ್ ಭಾಗವಹಿಸಿ ಮಾತನಾಡಿದ ಅವರು, ಜನವರಿಯಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರದ ಲೋಕಾರ್ಪಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಲ್ಲಿ ಪೂಜಿಸಲ್ಪಟ್ಟ ಮಂತ್ರಾಕ್ಷತೆಯನ್ನು ಮನೆಮನೆಗೆ ವಿತರಿಸುವ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ಇಂದಿನಿಂದ ದೇಶದ ಪ್ರತಿ ಮನೆ ಮನೆಗೂ ಮಂತ್ರಾಕ್ಷತೆಯನ್ನು ತಲುಪಿಸುವಂತ ಕಾರ್ಯ ಮಾಡಲಾಗುವುದು. ದೇಶದ ಜನತೆಗೆ ಭಗವಂತನ ಆಶೀರ್ವಾದ ತಲುಪಬೇಕು. ಈ ನಿಟ್ಟಿನಲ್ಲಿ ನಾವು ನಮ್ಮ ಕಾರ್ಯಕರ್ತರು ಅವಿರತವಾಗಿ ಶ್ರಮಿಸುತ್ತೇವೆ ಎಂದರು.
ನಂತರ ತೂಬಗೆರೆ ಬಿಜೆಪಿ ಮುಖಂಡ ಕೃಷ್ಣಪ್ಪ ಮಾತನಾಡಿ, ಶ್ರೀರಾಮನ ಜನ್ಮಸ್ಥಳದಲ್ಲಿ ಮಂದಿರ ನಿರ್ಮಾಣ ಕೋಟ್ಯಂತರ ಭಾರತೀಯ ರ ಕನಸಾಗಿತ್ತು. ಅದು ಈಗ ನನಸಾಗುತ್ತಿದೆ. ಈ ಮೂಲಕ ಭಾರತ ಮತ್ತೆ ವಿಶ್ವಗುರು ಆಗುವ ಭರವಸೆ ಮೂಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನಾಡಿನ ಸಮಸ್ತ ರಾಮಭಕ್ತರಿಂದ ಮಂದಿರ ನಿರ್ಮಾಣವಾಗುತ್ತಿದೆ.ಧರ್ಮಾತೀತವಾಗಿ, ಪಕ್ಷಾತೀತವಾಗಿ, ಜ್ಯಾತ್ಯಾತೀತವಾಗಿ ಎಲ್ಲರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ದೇಶದ ಏಕತೆ ಸಾರುವ ಒಂದು ಶುಭ ಸಂದರ್ಭ ಇದಾಗಿದೆ. ಅಯೋಧ್ಯೆಯಿಂದ ಬಂದಿರುವ ಮಂತ್ರಾಕ್ಷತೆ ಎಲ್ಲ ಮನೆ, ಮನ ತುಂಬಲಿ ಎಂದು ಹಾರೈಸಿದರು.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…