ಅಯೋಧ್ಯಾ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಅಯೋಧ್ಯೆಯಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆಯ ಭವ್ಯ ಮೆರವಣಿಗೆ ಹೋಬಳಿಯಾದ್ಯಾಂತ ಭಾನುವಾರ ವಿಜೃಂಭಣೆಯಿಂದ ಜರುಗಿತು. ಮಂತ್ರಾಕ್ಷತೆ ಹೊತ್ತ ರಾಮಭಕ್ತರು ರಾಮನಾಮ ಭಜನೆ ಮಾಡುವ ಮೂಲಕ ಭಕ್ತಿ ಮೆರೆದರು.
ತೂಬಗೆರೆ ಶ್ರೀ ಲಕ್ಷ್ಮಿವೆಂಕಟೇಶ್ವರ ದೇವಾಲಯದಲ್ಲಿ ಮಂತ್ರಾಕ್ಷತೆಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಂತ್ರಾಕ್ಷತೆ ಹಾಗೂ ಶ್ರೀರಾಮಚಂದ್ರನ ಭಾವಚಿತ್ರವನ್ನು ಸಾರೋಟದಲ್ಲಿ ಇರಿಸಿ ಮೆರವಣಿಗೆ ಆರಂಭಿಸಲಾಯಿತು. ರಾಮನ ಮಂತ್ರಾಕ್ಷತೆಗೆ ಸಾರ್ವಜನಿಕರು ಹೂವು ಚೆಲ್ಲಿದರು. ಕೇಸರಿ ಶಾಲುಗಳು ರ್ಯಾಲಿಯಲ್ಲಿ ಗಮನ ಸೆಳೆದವು. ಮೆರವಣಿಗೆ ದೊಡ್ಡಬಳ್ಳಾಪುರ ದಿಂದ ಕಂಟನಕುಂಟೆ, ತಿರಮಗೊಂಡನಹಳ್ಳಿ, ಹಾಡೋನಹಳ್ಳಿ ಮುಖಾಂತರ ಸಾಗಿ ತೂಬಗೆರೆ ಪ್ರಮುಖ ರಸ್ತೆಗಳಲ್ಲಿ ಸಾಗಿ ನಂತರ ಮುಕ್ತಾಯಗೊಂಡಿತು.
ಈ ಮೆರವಣಿಗೆ ಕಾರ್ಯಕ್ರಮದಲ್ಲಿ ವಕೀಲ, ಬಿಜಪಿ ಮುಖಂಡ ಪ್ರತಾಪ್ ಭಾಗವಹಿಸಿ ಮಾತನಾಡಿದ ಅವರು, ಜನವರಿಯಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರದ ಲೋಕಾರ್ಪಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಲ್ಲಿ ಪೂಜಿಸಲ್ಪಟ್ಟ ಮಂತ್ರಾಕ್ಷತೆಯನ್ನು ಮನೆಮನೆಗೆ ವಿತರಿಸುವ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ಇಂದಿನಿಂದ ದೇಶದ ಪ್ರತಿ ಮನೆ ಮನೆಗೂ ಮಂತ್ರಾಕ್ಷತೆಯನ್ನು ತಲುಪಿಸುವಂತ ಕಾರ್ಯ ಮಾಡಲಾಗುವುದು. ದೇಶದ ಜನತೆಗೆ ಭಗವಂತನ ಆಶೀರ್ವಾದ ತಲುಪಬೇಕು. ಈ ನಿಟ್ಟಿನಲ್ಲಿ ನಾವು ನಮ್ಮ ಕಾರ್ಯಕರ್ತರು ಅವಿರತವಾಗಿ ಶ್ರಮಿಸುತ್ತೇವೆ ಎಂದರು.
ನಂತರ ತೂಬಗೆರೆ ಬಿಜೆಪಿ ಮುಖಂಡ ಕೃಷ್ಣಪ್ಪ ಮಾತನಾಡಿ, ಶ್ರೀರಾಮನ ಜನ್ಮಸ್ಥಳದಲ್ಲಿ ಮಂದಿರ ನಿರ್ಮಾಣ ಕೋಟ್ಯಂತರ ಭಾರತೀಯ ರ ಕನಸಾಗಿತ್ತು. ಅದು ಈಗ ನನಸಾಗುತ್ತಿದೆ. ಈ ಮೂಲಕ ಭಾರತ ಮತ್ತೆ ವಿಶ್ವಗುರು ಆಗುವ ಭರವಸೆ ಮೂಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನಾಡಿನ ಸಮಸ್ತ ರಾಮಭಕ್ತರಿಂದ ಮಂದಿರ ನಿರ್ಮಾಣವಾಗುತ್ತಿದೆ.ಧರ್ಮಾತೀತವಾಗಿ, ಪಕ್ಷಾತೀತವಾಗಿ, ಜ್ಯಾತ್ಯಾತೀತವಾಗಿ ಎಲ್ಲರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ದೇಶದ ಏಕತೆ ಸಾರುವ ಒಂದು ಶುಭ ಸಂದರ್ಭ ಇದಾಗಿದೆ. ಅಯೋಧ್ಯೆಯಿಂದ ಬಂದಿರುವ ಮಂತ್ರಾಕ್ಷತೆ ಎಲ್ಲ ಮನೆ, ಮನ ತುಂಬಲಿ ಎಂದು ಹಾರೈಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…