ತೂಬಗೆರೆಯಲ್ಲಿ ಸಂಭ್ರಮದ ಕನಕದಾಸ ಜಯಂತಿ ಆಚರಣೆ

ದೊಡ್ಡಬಳ್ಳಾಪುರ(ನ.18): ತಾಲೂಕಿನ ತೂಬಗೆರೆಯ ಕುರುಬ ಸಮಾಜದ ವತಿಯಿಂದ  ದಾಸವರೇಣ್ಯ ಕನಕದಾಸ ಜಯಂತಿಯನ್ನು  ಆಚರಿಸಲಾಯಿತು.

ಗ್ರಾಮದ ಬಸ್ ನಿಲ್ದಾಣದಲ್ಲಿ ಪುಷ್ಪಾಲಂಕಾರಗೊಂಡಿದ್ದ ವೇದಿಕೆಯಲ್ಲಿ ಕನಕದಾಸರ ಭಾವಚಿತ್ರವಿಟ್ಟು ಪುಷ್ಪಾರ್ಚನೆ, ಅನ್ನದಾನ ಮಾಡುವುದರ ಮೂಲಕ ಮಹನೀಯರ ಜಯಂತಿಯನ್ನು ಆಚರಿಸಿದರು.

ತೂಬಗೆರೆ ಹಿತರಕ್ಷಣಾ ಸಮಿತಿ ಅಧ್ಯಕ್ಷರಾದ ರವಿಸಿದ್ದಪ್ಪ ಮಾತನಾಡಿ, ಕನಕದಾಸರ ಹುಟ್ಟು, ಬಾಲ್ಯದ ಜೀವನ ಅವರ ಸಾಧನೆಗಳನ್ನು ತಿಳಿಸಿಕೊಟ್ಟರು.

ಕನಕದಾಸರು ಕೀರ್ತನಕಾರರಾಗಿ, ತತ್ವಜ್ಞಾನಿಯಾಗಿ, ಸಂತರಾಗಿ, ದಾರ್ಶನಿಕರಾಗಿ ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಗೆ ಕನಕದಾಸರು ನೀಡಿದ ಕೊಡುಗೆ ಅನನ್ಯವಾಗಿದೆ. ಉಡುಪಿ ಶ್ರೀ ಕೃಷ್ಣನ ಪರಮ ಭಕ್ತರಾದ ಕನಕದಾಸರು, ತಮ್ಮ ಭಕ್ತಿಯಿಂದ ಶ್ರೀ ಕೃಷ್ಣನನ್ನು ಒಲಿಸಿಕೊಂಡಿದ್ದು ಇತಿಹಾಸ. ದಾಸರ ಬದುಕಿನ ಹೆಜ್ಜೆ ಗುರುತುಗಳೇ ನಮಗೆ ಮಾರ್ಗದರ್ಶನವಾಗಿದ್ದು, ಅವರ ವಿಚಾರಧಾರೆಗಳು ನಮ್ಮ ಬದುಕಿಗೆ ದಾರಿದೀಪ ಎಂದರು.

ಕನಕದಾಸರು, ಕರ್ನಾಟಕದಲ್ಲಿ 15-16ನೇ ಶತಮಾನದಲ್ಲಿ ಜನಪ್ರಿಯವಾಗಿದ್ದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರಾಗಿದ್ದಾರು. ತನ್ನ ಕೃತಿಗಳ ಮೂಲಕ  ಧಾರ್ಮಿಕ ಆಚರಣೆಗಳಲ್ಲಿದ್ದ ಜಾತಿ ಪದ್ಧತಿಯನ್ನು ಅವರು ತಿರಸ್ಕರಿಸಿದ್ದರು. ನಳಚರಿತ್ರೆ, ಹರಿಭಕ್ತಿಸಾರ, ನೃಸಿಂಹಸ್ತವ, ರಾಮಧಾನ್ಯಚರಿತ್ರೆ ಮತ್ತು ಮೋಹನತರಂಗಿಣಿ ಅವರ ಕೆಲವು ಪ್ರಸಿದ್ಧ ಕೃತಿಗಳು. ಎಂದರು.

ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅರವಿಂದ, ಕೆಪಿಸಿಸಿ ಸದಸ್ಯರಾದ ಮುನಿರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುನಿಲಕ್ಷ್ಮಮ್ಮ, ಸದಸ್ಯರುಗಳಾದ ಮುನಿಕೃಷ್ಣಪ್ಪ, ನಾಗೇಶ್, ಗಂಗಾಧರ ಕುರುಬ ಸಮಾಜದ ಮುಖಂಡರಾದ ದೇವೇಂದ್ರ ಸ್ವಾಮಿ, ಕಿಟ್ಟಿ, ಕೇಬಲ್ ಮಂಜು, ಸುನೀಲ್, ಯುವ ಮುಖಂಡ ಉದಯ ಆರಾಧ್ಯ. ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟೇಶ್  ಊರಿನ ಮುಖಂಡರುಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

8 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

9 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago