ತೂಬಗೆರೆಯಲ್ಲಿ ಸಂಭ್ರಮದ ಕನಕದಾಸ ಜಯಂತಿ ಆಚರಣೆ

ದೊಡ್ಡಬಳ್ಳಾಪುರ(ನ.18): ತಾಲೂಕಿನ ತೂಬಗೆರೆಯ ಕುರುಬ ಸಮಾಜದ ವತಿಯಿಂದ  ದಾಸವರೇಣ್ಯ ಕನಕದಾಸ ಜಯಂತಿಯನ್ನು  ಆಚರಿಸಲಾಯಿತು.

ಗ್ರಾಮದ ಬಸ್ ನಿಲ್ದಾಣದಲ್ಲಿ ಪುಷ್ಪಾಲಂಕಾರಗೊಂಡಿದ್ದ ವೇದಿಕೆಯಲ್ಲಿ ಕನಕದಾಸರ ಭಾವಚಿತ್ರವಿಟ್ಟು ಪುಷ್ಪಾರ್ಚನೆ, ಅನ್ನದಾನ ಮಾಡುವುದರ ಮೂಲಕ ಮಹನೀಯರ ಜಯಂತಿಯನ್ನು ಆಚರಿಸಿದರು.

ತೂಬಗೆರೆ ಹಿತರಕ್ಷಣಾ ಸಮಿತಿ ಅಧ್ಯಕ್ಷರಾದ ರವಿಸಿದ್ದಪ್ಪ ಮಾತನಾಡಿ, ಕನಕದಾಸರ ಹುಟ್ಟು, ಬಾಲ್ಯದ ಜೀವನ ಅವರ ಸಾಧನೆಗಳನ್ನು ತಿಳಿಸಿಕೊಟ್ಟರು.

ಕನಕದಾಸರು ಕೀರ್ತನಕಾರರಾಗಿ, ತತ್ವಜ್ಞಾನಿಯಾಗಿ, ಸಂತರಾಗಿ, ದಾರ್ಶನಿಕರಾಗಿ ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಗೆ ಕನಕದಾಸರು ನೀಡಿದ ಕೊಡುಗೆ ಅನನ್ಯವಾಗಿದೆ. ಉಡುಪಿ ಶ್ರೀ ಕೃಷ್ಣನ ಪರಮ ಭಕ್ತರಾದ ಕನಕದಾಸರು, ತಮ್ಮ ಭಕ್ತಿಯಿಂದ ಶ್ರೀ ಕೃಷ್ಣನನ್ನು ಒಲಿಸಿಕೊಂಡಿದ್ದು ಇತಿಹಾಸ. ದಾಸರ ಬದುಕಿನ ಹೆಜ್ಜೆ ಗುರುತುಗಳೇ ನಮಗೆ ಮಾರ್ಗದರ್ಶನವಾಗಿದ್ದು, ಅವರ ವಿಚಾರಧಾರೆಗಳು ನಮ್ಮ ಬದುಕಿಗೆ ದಾರಿದೀಪ ಎಂದರು.

ಕನಕದಾಸರು, ಕರ್ನಾಟಕದಲ್ಲಿ 15-16ನೇ ಶತಮಾನದಲ್ಲಿ ಜನಪ್ರಿಯವಾಗಿದ್ದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರಾಗಿದ್ದಾರು. ತನ್ನ ಕೃತಿಗಳ ಮೂಲಕ  ಧಾರ್ಮಿಕ ಆಚರಣೆಗಳಲ್ಲಿದ್ದ ಜಾತಿ ಪದ್ಧತಿಯನ್ನು ಅವರು ತಿರಸ್ಕರಿಸಿದ್ದರು. ನಳಚರಿತ್ರೆ, ಹರಿಭಕ್ತಿಸಾರ, ನೃಸಿಂಹಸ್ತವ, ರಾಮಧಾನ್ಯಚರಿತ್ರೆ ಮತ್ತು ಮೋಹನತರಂಗಿಣಿ ಅವರ ಕೆಲವು ಪ್ರಸಿದ್ಧ ಕೃತಿಗಳು. ಎಂದರು.

ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅರವಿಂದ, ಕೆಪಿಸಿಸಿ ಸದಸ್ಯರಾದ ಮುನಿರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುನಿಲಕ್ಷ್ಮಮ್ಮ, ಸದಸ್ಯರುಗಳಾದ ಮುನಿಕೃಷ್ಣಪ್ಪ, ನಾಗೇಶ್, ಗಂಗಾಧರ ಕುರುಬ ಸಮಾಜದ ಮುಖಂಡರಾದ ದೇವೇಂದ್ರ ಸ್ವಾಮಿ, ಕಿಟ್ಟಿ, ಕೇಬಲ್ ಮಂಜು, ಸುನೀಲ್, ಯುವ ಮುಖಂಡ ಉದಯ ಆರಾಧ್ಯ. ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟೇಶ್  ಊರಿನ ಮುಖಂಡರುಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

14 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

15 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

16 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

16 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

23 hours ago