ತೂಬಗೆರೆಯಲ್ಲಿ ಸಂಭ್ರಮದ ಕನಕದಾಸ ಜಯಂತಿ ಆಚರಣೆ

ದೊಡ್ಡಬಳ್ಳಾಪುರ(ನ.18): ತಾಲೂಕಿನ ತೂಬಗೆರೆಯ ಕುರುಬ ಸಮಾಜದ ವತಿಯಿಂದ  ದಾಸವರೇಣ್ಯ ಕನಕದಾಸ ಜಯಂತಿಯನ್ನು  ಆಚರಿಸಲಾಯಿತು.

ಗ್ರಾಮದ ಬಸ್ ನಿಲ್ದಾಣದಲ್ಲಿ ಪುಷ್ಪಾಲಂಕಾರಗೊಂಡಿದ್ದ ವೇದಿಕೆಯಲ್ಲಿ ಕನಕದಾಸರ ಭಾವಚಿತ್ರವಿಟ್ಟು ಪುಷ್ಪಾರ್ಚನೆ, ಅನ್ನದಾನ ಮಾಡುವುದರ ಮೂಲಕ ಮಹನೀಯರ ಜಯಂತಿಯನ್ನು ಆಚರಿಸಿದರು.

ತೂಬಗೆರೆ ಹಿತರಕ್ಷಣಾ ಸಮಿತಿ ಅಧ್ಯಕ್ಷರಾದ ರವಿಸಿದ್ದಪ್ಪ ಮಾತನಾಡಿ, ಕನಕದಾಸರ ಹುಟ್ಟು, ಬಾಲ್ಯದ ಜೀವನ ಅವರ ಸಾಧನೆಗಳನ್ನು ತಿಳಿಸಿಕೊಟ್ಟರು.

ಕನಕದಾಸರು ಕೀರ್ತನಕಾರರಾಗಿ, ತತ್ವಜ್ಞಾನಿಯಾಗಿ, ಸಂತರಾಗಿ, ದಾರ್ಶನಿಕರಾಗಿ ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಗೆ ಕನಕದಾಸರು ನೀಡಿದ ಕೊಡುಗೆ ಅನನ್ಯವಾಗಿದೆ. ಉಡುಪಿ ಶ್ರೀ ಕೃಷ್ಣನ ಪರಮ ಭಕ್ತರಾದ ಕನಕದಾಸರು, ತಮ್ಮ ಭಕ್ತಿಯಿಂದ ಶ್ರೀ ಕೃಷ್ಣನನ್ನು ಒಲಿಸಿಕೊಂಡಿದ್ದು ಇತಿಹಾಸ. ದಾಸರ ಬದುಕಿನ ಹೆಜ್ಜೆ ಗುರುತುಗಳೇ ನಮಗೆ ಮಾರ್ಗದರ್ಶನವಾಗಿದ್ದು, ಅವರ ವಿಚಾರಧಾರೆಗಳು ನಮ್ಮ ಬದುಕಿಗೆ ದಾರಿದೀಪ ಎಂದರು.

ಕನಕದಾಸರು, ಕರ್ನಾಟಕದಲ್ಲಿ 15-16ನೇ ಶತಮಾನದಲ್ಲಿ ಜನಪ್ರಿಯವಾಗಿದ್ದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರಾಗಿದ್ದಾರು. ತನ್ನ ಕೃತಿಗಳ ಮೂಲಕ  ಧಾರ್ಮಿಕ ಆಚರಣೆಗಳಲ್ಲಿದ್ದ ಜಾತಿ ಪದ್ಧತಿಯನ್ನು ಅವರು ತಿರಸ್ಕರಿಸಿದ್ದರು. ನಳಚರಿತ್ರೆ, ಹರಿಭಕ್ತಿಸಾರ, ನೃಸಿಂಹಸ್ತವ, ರಾಮಧಾನ್ಯಚರಿತ್ರೆ ಮತ್ತು ಮೋಹನತರಂಗಿಣಿ ಅವರ ಕೆಲವು ಪ್ರಸಿದ್ಧ ಕೃತಿಗಳು. ಎಂದರು.

ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅರವಿಂದ, ಕೆಪಿಸಿಸಿ ಸದಸ್ಯರಾದ ಮುನಿರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುನಿಲಕ್ಷ್ಮಮ್ಮ, ಸದಸ್ಯರುಗಳಾದ ಮುನಿಕೃಷ್ಣಪ್ಪ, ನಾಗೇಶ್, ಗಂಗಾಧರ ಕುರುಬ ಸಮಾಜದ ಮುಖಂಡರಾದ ದೇವೇಂದ್ರ ಸ್ವಾಮಿ, ಕಿಟ್ಟಿ, ಕೇಬಲ್ ಮಂಜು, ಸುನೀಲ್, ಯುವ ಮುಖಂಡ ಉದಯ ಆರಾಧ್ಯ. ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟೇಶ್  ಊರಿನ ಮುಖಂಡರುಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

Ramesh Babu

Journalist

Recent Posts

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

7 hours ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

8 hours ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

13 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

22 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 day ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 day ago