ತೂಬಗೆರೆಯಲ್ಲಿ ಸಂಭ್ರಮದ ಕನಕದಾಸ ಜಯಂತಿ ಆಚರಣೆ

ದೊಡ್ಡಬಳ್ಳಾಪುರ(ನ.18): ತಾಲೂಕಿನ ತೂಬಗೆರೆಯ ಕುರುಬ ಸಮಾಜದ ವತಿಯಿಂದ  ದಾಸವರೇಣ್ಯ ಕನಕದಾಸ ಜಯಂತಿಯನ್ನು  ಆಚರಿಸಲಾಯಿತು.

ಗ್ರಾಮದ ಬಸ್ ನಿಲ್ದಾಣದಲ್ಲಿ ಪುಷ್ಪಾಲಂಕಾರಗೊಂಡಿದ್ದ ವೇದಿಕೆಯಲ್ಲಿ ಕನಕದಾಸರ ಭಾವಚಿತ್ರವಿಟ್ಟು ಪುಷ್ಪಾರ್ಚನೆ, ಅನ್ನದಾನ ಮಾಡುವುದರ ಮೂಲಕ ಮಹನೀಯರ ಜಯಂತಿಯನ್ನು ಆಚರಿಸಿದರು.

ತೂಬಗೆರೆ ಹಿತರಕ್ಷಣಾ ಸಮಿತಿ ಅಧ್ಯಕ್ಷರಾದ ರವಿಸಿದ್ದಪ್ಪ ಮಾತನಾಡಿ, ಕನಕದಾಸರ ಹುಟ್ಟು, ಬಾಲ್ಯದ ಜೀವನ ಅವರ ಸಾಧನೆಗಳನ್ನು ತಿಳಿಸಿಕೊಟ್ಟರು.

ಕನಕದಾಸರು ಕೀರ್ತನಕಾರರಾಗಿ, ತತ್ವಜ್ಞಾನಿಯಾಗಿ, ಸಂತರಾಗಿ, ದಾರ್ಶನಿಕರಾಗಿ ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಗೆ ಕನಕದಾಸರು ನೀಡಿದ ಕೊಡುಗೆ ಅನನ್ಯವಾಗಿದೆ. ಉಡುಪಿ ಶ್ರೀ ಕೃಷ್ಣನ ಪರಮ ಭಕ್ತರಾದ ಕನಕದಾಸರು, ತಮ್ಮ ಭಕ್ತಿಯಿಂದ ಶ್ರೀ ಕೃಷ್ಣನನ್ನು ಒಲಿಸಿಕೊಂಡಿದ್ದು ಇತಿಹಾಸ. ದಾಸರ ಬದುಕಿನ ಹೆಜ್ಜೆ ಗುರುತುಗಳೇ ನಮಗೆ ಮಾರ್ಗದರ್ಶನವಾಗಿದ್ದು, ಅವರ ವಿಚಾರಧಾರೆಗಳು ನಮ್ಮ ಬದುಕಿಗೆ ದಾರಿದೀಪ ಎಂದರು.

ಕನಕದಾಸರು, ಕರ್ನಾಟಕದಲ್ಲಿ 15-16ನೇ ಶತಮಾನದಲ್ಲಿ ಜನಪ್ರಿಯವಾಗಿದ್ದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರಾಗಿದ್ದಾರು. ತನ್ನ ಕೃತಿಗಳ ಮೂಲಕ  ಧಾರ್ಮಿಕ ಆಚರಣೆಗಳಲ್ಲಿದ್ದ ಜಾತಿ ಪದ್ಧತಿಯನ್ನು ಅವರು ತಿರಸ್ಕರಿಸಿದ್ದರು. ನಳಚರಿತ್ರೆ, ಹರಿಭಕ್ತಿಸಾರ, ನೃಸಿಂಹಸ್ತವ, ರಾಮಧಾನ್ಯಚರಿತ್ರೆ ಮತ್ತು ಮೋಹನತರಂಗಿಣಿ ಅವರ ಕೆಲವು ಪ್ರಸಿದ್ಧ ಕೃತಿಗಳು. ಎಂದರು.

ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅರವಿಂದ, ಕೆಪಿಸಿಸಿ ಸದಸ್ಯರಾದ ಮುನಿರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುನಿಲಕ್ಷ್ಮಮ್ಮ, ಸದಸ್ಯರುಗಳಾದ ಮುನಿಕೃಷ್ಣಪ್ಪ, ನಾಗೇಶ್, ಗಂಗಾಧರ ಕುರುಬ ಸಮಾಜದ ಮುಖಂಡರಾದ ದೇವೇಂದ್ರ ಸ್ವಾಮಿ, ಕಿಟ್ಟಿ, ಕೇಬಲ್ ಮಂಜು, ಸುನೀಲ್, ಯುವ ಮುಖಂಡ ಉದಯ ಆರಾಧ್ಯ. ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟೇಶ್  ಊರಿನ ಮುಖಂಡರುಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

2 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

15 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

17 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

17 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

18 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

22 hours ago