ದೇಶ ಹಾಗೂ ಜನರ ಒಳಿತಿಗಾಗಿ ಬಿಜೆಪಿ ಪಕ್ಷ ಕೆಲಸ ಮಾಡುತ್ತಿದೆ. ಬಿಜೆಪಿ ಕಾರ್ಯಕರ್ತರಾದ ನಾವು ಕೂಡ ಪ್ರಾಮಾಣಿಕತೆಯಿಂದ ದೇಶದ ಹಿತಕ್ಕಾಗಿ ದುಡಿಯುತ್ತೇವೆ ಎಂದು ಬಿಜೆಪಿ ಮುಖಂಡ ಪ್ರತಾಪ್ ತಿಳಿಸಿದರು.
ತಾಲ್ಲೂಕಿನ ತೂಬಗೆರೆ ಗ್ರಾಮದ ಸಮುದಾಯ ಭವನದಲ್ಲಿ ಬಿಜೆಪಿ ಹೋಬಳಿ ಘಟಕದ ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಿ ಮಾತನಾಡಿದ ಅವರು, ಇಡಿ ದೇಶಾದ್ಯಂತ ಬೂತ್ ಮಟ್ಟದಿಂದ ರಾಜ್ಯ ಮಟ್ಟದವರೆಗೆ ನಮ್ಮ ಪಕ್ಷದಿಂದ ರಕ್ತದಾನ ಶಿಬಿರ ಆಯೋಜನೆ ಮಾಡಿ ಯಶಸ್ವಿಯಾಗಿದೆ ಎಂದರು.
ನಂತರ ತೂಬಗೆರೆ ಗ್ರಾಮ ಪಂಚಾಯ್ತಿ ಸದಸ್ಯ ಕೃಷ್ಣಪ್ಪ ಮಾತನಾಡಿ, ದೇಶದ ಸೈನಿಕರನ್ನು ನೆನೆದು ಬಿಜೆಪಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜನೆ ಮಾಡಲಾಗಿದೆ. 250 ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದ್ದು ಈ ರಕ್ತವನ್ನು ಅವಶ್ಯಕತೆ ಇರುವ ರೋಗಿಗಳಿಗೆ ನೀಡಲಾಗುತ್ತದೆ. ಇನ್ನೂ ಮುಂದೆ ಜನರ ಹಿತದೃಷ್ಟಿಯಿಂದ ನಮ್ಮ ಪಕ್ಷದಿಂದ ಒಳ್ಳೆಯ ಕಾರ್ಯಕ್ರಮ ಮಾಡುತ್ತೆವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತೂಬಗೆರೆ ಗ್ರಾ.ಪಂ ಮಾಜಿ ಅಧ್ಯಕ್ಷ ಸುರೇಶ್ ಬಾಬು,ಸದಸ್ಯ ಮುನಿಕೃಷ್ಣಪ್ಪ, ಘಾಟಿ ಗ್ರಾಮಪಂಚಾಯ್ತಿ ಸದಸ್ಯ ವಾಸು,ಬಿಜೆಪಿ ಮುಖಂಡ ಗಂಗರಾಜು,ಯುವ ಮುಖಂಡರಾದ ಸಂತೋಷ್, ಹರ್ಷ,ಶರತ್,ಸುರೇಶ್ , ದಿನೇಶ್ ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.