ತೂಬಗೆರೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ: ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದ ಯುವಜನ

ದೇಶ ಹಾಗೂ ಜನರ ಒಳಿತಿಗಾಗಿ ಬಿಜೆಪಿ ಪಕ್ಷ ಕೆಲಸ ಮಾಡುತ್ತಿದೆ. ಬಿಜೆಪಿ ಕಾರ್ಯಕರ್ತರಾದ ನಾವು ಕೂಡ ಪ್ರಾಮಾಣಿಕತೆಯಿಂದ ದೇಶದ ಹಿತಕ್ಕಾಗಿ ದುಡಿಯುತ್ತೇವೆ ಎಂದು ಬಿಜೆಪಿ ಮುಖಂಡ ಪ್ರತಾಪ್ ತಿಳಿಸಿದರು.

ತಾಲ್ಲೂಕಿನ ತೂಬಗೆರೆ‌‌ ಗ್ರಾಮದ ಸಮುದಾಯ ಭವನದಲ್ಲಿ ಬಿಜೆಪಿ ಹೋಬಳಿ ಘಟಕದ ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಿ ಮಾತನಾಡಿದ ಅವರು, ಇಡಿ ದೇಶಾದ್ಯಂತ ಬೂತ್ ಮಟ್ಟದಿಂದ ರಾಜ್ಯ ಮಟ್ಟದವರೆಗೆ ನಮ್ಮ ಪಕ್ಷದಿಂದ ರಕ್ತದಾನ ಶಿಬಿರ ಆಯೋಜನೆ ಮಾಡಿ ಯಶಸ್ವಿಯಾಗಿದೆ ಎಂದರು.

ನಂತರ ತೂಬಗೆರೆ ಗ್ರಾಮ ಪಂಚಾಯ್ತಿ ಸದಸ್ಯ ಕೃಷ್ಣಪ್ಪ ಮಾತನಾಡಿ, ದೇಶದ ಸೈನಿಕರನ್ನು ನೆನೆದು ಬಿಜೆಪಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜನೆ ಮಾಡಲಾಗಿದೆ. 250 ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದ್ದು ಈ ರಕ್ತವನ್ನು ಅವಶ್ಯಕತೆ ಇರುವ ರೋಗಿಗಳಿಗೆ ನೀಡಲಾಗುತ್ತದೆ. ಇನ್ನೂ ಮುಂದೆ ಜನರ ಹಿತದೃಷ್ಟಿಯಿಂದ ನಮ್ಮ ಪಕ್ಷದಿಂದ ಒಳ್ಳೆಯ ಕಾರ್ಯಕ್ರಮ ಮಾಡುತ್ತೆವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತೂಬಗೆರೆ ಗ್ರಾ.ಪಂ ಮಾಜಿ ಅಧ್ಯಕ್ಷ ಸುರೇಶ್ ಬಾಬು,ಸದಸ್ಯ ಮುನಿಕೃಷ್ಣಪ್ಪ, ಘಾಟಿ ಗ್ರಾಮಪಂಚಾಯ್ತಿ ಸದಸ್ಯ ವಾಸು,ಬಿಜೆಪಿ ಮುಖಂಡ ಗಂಗರಾಜು,ಯುವ ಮುಖಂಡರಾದ ಸಂತೋಷ್, ಹರ್ಷ,ಶರತ್,ಸುರೇಶ್ , ದಿನೇಶ್ ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

10 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

14 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

14 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

17 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago