ತೂಬಗೆರೆಯಿಂದ ಹೆಬ್ಬಾಳಕ್ಕೆ ಬಿಎಂಟಿಸಿ ಬಸ್ ಸಂಚಾರ: ಗ್ರಾಮಸ್ಥರಲ್ಲಿ ಹರ್ಷೋದ್ಗಾರ

ನಿರಂತರ ಪ್ರಯತ್ನದ ಫಲವಾಗಿ ತೂಬಗೆರೆಯಿಂದ ಹೆಬ್ಬಾಳಕ್ಕೆ ಸಂಚರಿಸಲು ಬಿಎಂಟಿಸಿ ಬಸ್ ಭಾಗ್ಯ ಲಭಿಸಿದೆ. ಈಗ ಜನರ ಮುಖದಲ್ಲಿ ಸಂತೋಷದ ಭಾವನೆ ಕಾಣುತ್ತಿದೆ. ಬಸ್ಸಿನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರೂ ಸರ್ಕಾರಿ ಬಸ್ ಎಂಬುವ ಭಾವನೆ ಮರೆತು ತಮ್ಮ ಸ್ವಂತ ವಾಹನದಂತೆ ಭಾವಿಸಿ ಸ್ವಚ್ಛತೆ ಕಾಪಾಡುವಲ್ಲಿ ಮುಂದಾಗಬೇಕಿದೆ ಎಂದು ಕೆಪಿಸಿಸಿ ಸದಸ್ಯ ಎಸ್.ಆರ್.ಮುನಿರಾಜು ತಿಳಿಸಿದರು.

ಬಸ್ ತನ್ನ ಮೊದಲ ಪ್ರಯಾಣ ಪ್ರಾರಂಭಿಸುವ ಮುನ್ನ ಊರಿನ‌ ಗ್ರಾಮಸ್ಥರು, ಮುಖಂಡರ ಜೊತೆಗೂಡಿ ಬಹಳ ಅದ್ದೂರಿಯಾಗಿ ತಮಟೆ, ನಾದದೊಂದಿಗೆ ಬಸ್ ನ್ನ ಊರಿಗೆ ಸ್ವಾಗತಿಸಿ, ನಂತರ ಗ್ರಾಮದ ಪ್ರಸಿದ್ಧ ದೇವಾಲಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಗುಡಿಯ ಮುಂದೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಗ್ರಾಮಕ್ಕೆ ಬಿಎಂಟಿಸಿ ಬಸ್ಸಿನ ಅವಶ್ಯಕತೆ ತುಂಬಾ ಇದ್ದು, ನಮ್ಮೆಲ್ಲಾ ಗ್ರಾಮಸ್ಥರು, ಮುಖಂಡರ ಸತತ ಪ್ರಯತ್ನದಿಂದಾಗಿ ಇಂದು ಗ್ರಾಮದಿಂದ ಹೆಬ್ಬಾಳದ ಮಾರ್ಗವಾಗಿ ಚಲಿಸುವ ಬಿಎಂಟಿಸಿ ವಾಹನ ಲಭಿಸಿದೆ ಎಂದರು.

ಸ್ಥಳೀಯ ಮುಖಂಡರಾದ ಅರವಿಂದ್ ಮಾತನಾಡಿ, ಬಹಳ ವರ್ಷಗಳಿಂದ ತೂಬಗೆರೆ ಗ್ರಾಮಸ್ಥರ ಬಹು ಬೇಡಿಕೆ ಇಂದು ಈಡೇರಿದೆ. ಸ್ಥಳೀಯವಾಗಿ ಬಸ್ ವಾಹನದ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಅನಾನುಕೂಲವಾಗಿತ್ತು. ಶಾಲಾ ವಿದ್ಯಾರ್ಥಿಗಳು ಶಾಲೆಗೆ ತೆರಳಲು ಮುಂಜಾನೆ 7ಕ್ಕೆ ಬಸ್ ವ್ಯವಸ್ಥೆ ಇಲ್ಲದ ಕಾರಣ ಆಟೋಗಳ ಮೇಲೆ ಅವಲಂಬಿತರಾಗಿದ್ದರು. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರಾದ ಕೆ.ಎಚ್.ಮುನಿಯಪ್ಪ ರವರ ಬಳಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಲಾಗಿತ್ತು. ಈ ಹಿನ್ನೆಲೆ ಬಿಎಂಟಿಸಿ ಬಸ್ ಭಾಗ್ಯ ಲಭಿಸಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ತೂಬಗೆರೆ ಪಂಚಾಯಿತಿ ಅಧ್ಯಕ್ಷರಾದ ನಂಜಮ್ಮ ಬಿ ನರಸಿಂಹಮೂರ್ತಿ, ಪಂಚಾಯಿತಿ ಮಾಜಿ ಸದಸ್ಯರಾದ ವೆಂಕಟೇಶ್ ಟಿ ವಿ,  ಕಿಟ್ಟಿ , ಮಾಜಿ ಯೋಧರಾದ ರಾಘವೇಂದ್ರ, ಅನಂತ್ ರಾಜಗೋಪಾಲ, ಮುನಿಕೃಷ್ಣಪ್ಪ ಸೇರಿದಂತೆ ತೂಬಗೆರೆ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

6 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

7 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

7 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

14 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

15 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

18 hours ago