ನಿರಂತರ ಪ್ರಯತ್ನದ ಫಲವಾಗಿ ತೂಬಗೆರೆಯಿಂದ ಹೆಬ್ಬಾಳಕ್ಕೆ ಸಂಚರಿಸಲು ಬಿಎಂಟಿಸಿ ಬಸ್ ಭಾಗ್ಯ ಲಭಿಸಿದೆ. ಈಗ ಜನರ ಮುಖದಲ್ಲಿ ಸಂತೋಷದ ಭಾವನೆ ಕಾಣುತ್ತಿದೆ. ಬಸ್ಸಿನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರೂ ಸರ್ಕಾರಿ ಬಸ್ ಎಂಬುವ ಭಾವನೆ ಮರೆತು ತಮ್ಮ ಸ್ವಂತ ವಾಹನದಂತೆ ಭಾವಿಸಿ ಸ್ವಚ್ಛತೆ ಕಾಪಾಡುವಲ್ಲಿ ಮುಂದಾಗಬೇಕಿದೆ ಎಂದು ಕೆಪಿಸಿಸಿ ಸದಸ್ಯ ಎಸ್.ಆರ್.ಮುನಿರಾಜು ತಿಳಿಸಿದರು.
ಬಸ್ ತನ್ನ ಮೊದಲ ಪ್ರಯಾಣ ಪ್ರಾರಂಭಿಸುವ ಮುನ್ನ ಊರಿನ ಗ್ರಾಮಸ್ಥರು, ಮುಖಂಡರ ಜೊತೆಗೂಡಿ ಬಹಳ ಅದ್ದೂರಿಯಾಗಿ ತಮಟೆ, ನಾದದೊಂದಿಗೆ ಬಸ್ ನ್ನ ಊರಿಗೆ ಸ್ವಾಗತಿಸಿ, ನಂತರ ಗ್ರಾಮದ ಪ್ರಸಿದ್ಧ ದೇವಾಲಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಗುಡಿಯ ಮುಂದೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಗ್ರಾಮಕ್ಕೆ ಬಿಎಂಟಿಸಿ ಬಸ್ಸಿನ ಅವಶ್ಯಕತೆ ತುಂಬಾ ಇದ್ದು, ನಮ್ಮೆಲ್ಲಾ ಗ್ರಾಮಸ್ಥರು, ಮುಖಂಡರ ಸತತ ಪ್ರಯತ್ನದಿಂದಾಗಿ ಇಂದು ಗ್ರಾಮದಿಂದ ಹೆಬ್ಬಾಳದ ಮಾರ್ಗವಾಗಿ ಚಲಿಸುವ ಬಿಎಂಟಿಸಿ ವಾಹನ ಲಭಿಸಿದೆ ಎಂದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ತೂಬಗೆರೆ ಪಂಚಾಯಿತಿ ಅಧ್ಯಕ್ಷರಾದ ನಂಜಮ್ಮ ಬಿ ನರಸಿಂಹಮೂರ್ತಿ, ಪಂಚಾಯಿತಿ ಮಾಜಿ ಸದಸ್ಯರಾದ ವೆಂಕಟೇಶ್ ಟಿ ವಿ, ಕಿಟ್ಟಿ , ಮಾಜಿ ಯೋಧರಾದ ರಾಘವೇಂದ್ರ, ಅನಂತ್ ರಾಜಗೋಪಾಲ, ಮುನಿಕೃಷ್ಣಪ್ಪ ಸೇರಿದಂತೆ ತೂಬಗೆರೆ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…