ತೂಬಗೆರೆಯಿಂದ ಹೆಬ್ಬಾಳಕ್ಕೆ ಬಿಎಂಟಿಸಿ ಬಸ್ ಸಂಚಾರ: ಗ್ರಾಮಸ್ಥರಲ್ಲಿ ಹರ್ಷೋದ್ಗಾರ

ನಿರಂತರ ಪ್ರಯತ್ನದ ಫಲವಾಗಿ ತೂಬಗೆರೆಯಿಂದ ಹೆಬ್ಬಾಳಕ್ಕೆ ಸಂಚರಿಸಲು ಬಿಎಂಟಿಸಿ ಬಸ್ ಭಾಗ್ಯ ಲಭಿಸಿದೆ. ಈಗ ಜನರ ಮುಖದಲ್ಲಿ ಸಂತೋಷದ ಭಾವನೆ ಕಾಣುತ್ತಿದೆ. ಬಸ್ಸಿನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರೂ ಸರ್ಕಾರಿ ಬಸ್ ಎಂಬುವ ಭಾವನೆ ಮರೆತು ತಮ್ಮ ಸ್ವಂತ ವಾಹನದಂತೆ ಭಾವಿಸಿ ಸ್ವಚ್ಛತೆ ಕಾಪಾಡುವಲ್ಲಿ ಮುಂದಾಗಬೇಕಿದೆ ಎಂದು ಕೆಪಿಸಿಸಿ ಸದಸ್ಯ ಎಸ್.ಆರ್.ಮುನಿರಾಜು ತಿಳಿಸಿದರು.

ಬಸ್ ತನ್ನ ಮೊದಲ ಪ್ರಯಾಣ ಪ್ರಾರಂಭಿಸುವ ಮುನ್ನ ಊರಿನ‌ ಗ್ರಾಮಸ್ಥರು, ಮುಖಂಡರ ಜೊತೆಗೂಡಿ ಬಹಳ ಅದ್ದೂರಿಯಾಗಿ ತಮಟೆ, ನಾದದೊಂದಿಗೆ ಬಸ್ ನ್ನ ಊರಿಗೆ ಸ್ವಾಗತಿಸಿ, ನಂತರ ಗ್ರಾಮದ ಪ್ರಸಿದ್ಧ ದೇವಾಲಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಗುಡಿಯ ಮುಂದೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಗ್ರಾಮಕ್ಕೆ ಬಿಎಂಟಿಸಿ ಬಸ್ಸಿನ ಅವಶ್ಯಕತೆ ತುಂಬಾ ಇದ್ದು, ನಮ್ಮೆಲ್ಲಾ ಗ್ರಾಮಸ್ಥರು, ಮುಖಂಡರ ಸತತ ಪ್ರಯತ್ನದಿಂದಾಗಿ ಇಂದು ಗ್ರಾಮದಿಂದ ಹೆಬ್ಬಾಳದ ಮಾರ್ಗವಾಗಿ ಚಲಿಸುವ ಬಿಎಂಟಿಸಿ ವಾಹನ ಲಭಿಸಿದೆ ಎಂದರು.

ಸ್ಥಳೀಯ ಮುಖಂಡರಾದ ಅರವಿಂದ್ ಮಾತನಾಡಿ, ಬಹಳ ವರ್ಷಗಳಿಂದ ತೂಬಗೆರೆ ಗ್ರಾಮಸ್ಥರ ಬಹು ಬೇಡಿಕೆ ಇಂದು ಈಡೇರಿದೆ. ಸ್ಥಳೀಯವಾಗಿ ಬಸ್ ವಾಹನದ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಅನಾನುಕೂಲವಾಗಿತ್ತು. ಶಾಲಾ ವಿದ್ಯಾರ್ಥಿಗಳು ಶಾಲೆಗೆ ತೆರಳಲು ಮುಂಜಾನೆ 7ಕ್ಕೆ ಬಸ್ ವ್ಯವಸ್ಥೆ ಇಲ್ಲದ ಕಾರಣ ಆಟೋಗಳ ಮೇಲೆ ಅವಲಂಬಿತರಾಗಿದ್ದರು. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರಾದ ಕೆ.ಎಚ್.ಮುನಿಯಪ್ಪ ರವರ ಬಳಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಲಾಗಿತ್ತು. ಈ ಹಿನ್ನೆಲೆ ಬಿಎಂಟಿಸಿ ಬಸ್ ಭಾಗ್ಯ ಲಭಿಸಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ತೂಬಗೆರೆ ಪಂಚಾಯಿತಿ ಅಧ್ಯಕ್ಷರಾದ ನಂಜಮ್ಮ ಬಿ ನರಸಿಂಹಮೂರ್ತಿ, ಪಂಚಾಯಿತಿ ಮಾಜಿ ಸದಸ್ಯರಾದ ವೆಂಕಟೇಶ್ ಟಿ ವಿ,  ಕಿಟ್ಟಿ , ಮಾಜಿ ಯೋಧರಾದ ರಾಘವೇಂದ್ರ, ಅನಂತ್ ರಾಜಗೋಪಾಲ, ಮುನಿಕೃಷ್ಣಪ್ಪ ಸೇರಿದಂತೆ ತೂಬಗೆರೆ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು

Ramesh Babu

Journalist

Recent Posts

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

2 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

4 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

5 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

6 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

14 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

23 hours ago