ತೂಬಗೆರೆಯಿಂದ ಹೆಬ್ಬಾಳಕ್ಕೆ ಬಿಎಂಟಿಸಿ ಬಸ್ ಸಂಚಾರ: ಗ್ರಾಮಸ್ಥರಲ್ಲಿ ಹರ್ಷೋದ್ಗಾರ

ನಿರಂತರ ಪ್ರಯತ್ನದ ಫಲವಾಗಿ ತೂಬಗೆರೆಯಿಂದ ಹೆಬ್ಬಾಳಕ್ಕೆ ಸಂಚರಿಸಲು ಬಿಎಂಟಿಸಿ ಬಸ್ ಭಾಗ್ಯ ಲಭಿಸಿದೆ. ಈಗ ಜನರ ಮುಖದಲ್ಲಿ ಸಂತೋಷದ ಭಾವನೆ ಕಾಣುತ್ತಿದೆ. ಬಸ್ಸಿನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರೂ ಸರ್ಕಾರಿ ಬಸ್ ಎಂಬುವ ಭಾವನೆ ಮರೆತು ತಮ್ಮ ಸ್ವಂತ ವಾಹನದಂತೆ ಭಾವಿಸಿ ಸ್ವಚ್ಛತೆ ಕಾಪಾಡುವಲ್ಲಿ ಮುಂದಾಗಬೇಕಿದೆ ಎಂದು ಕೆಪಿಸಿಸಿ ಸದಸ್ಯ ಎಸ್.ಆರ್.ಮುನಿರಾಜು ತಿಳಿಸಿದರು.

ಬಸ್ ತನ್ನ ಮೊದಲ ಪ್ರಯಾಣ ಪ್ರಾರಂಭಿಸುವ ಮುನ್ನ ಊರಿನ‌ ಗ್ರಾಮಸ್ಥರು, ಮುಖಂಡರ ಜೊತೆಗೂಡಿ ಬಹಳ ಅದ್ದೂರಿಯಾಗಿ ತಮಟೆ, ನಾದದೊಂದಿಗೆ ಬಸ್ ನ್ನ ಊರಿಗೆ ಸ್ವಾಗತಿಸಿ, ನಂತರ ಗ್ರಾಮದ ಪ್ರಸಿದ್ಧ ದೇವಾಲಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಗುಡಿಯ ಮುಂದೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಗ್ರಾಮಕ್ಕೆ ಬಿಎಂಟಿಸಿ ಬಸ್ಸಿನ ಅವಶ್ಯಕತೆ ತುಂಬಾ ಇದ್ದು, ನಮ್ಮೆಲ್ಲಾ ಗ್ರಾಮಸ್ಥರು, ಮುಖಂಡರ ಸತತ ಪ್ರಯತ್ನದಿಂದಾಗಿ ಇಂದು ಗ್ರಾಮದಿಂದ ಹೆಬ್ಬಾಳದ ಮಾರ್ಗವಾಗಿ ಚಲಿಸುವ ಬಿಎಂಟಿಸಿ ವಾಹನ ಲಭಿಸಿದೆ ಎಂದರು.

ಸ್ಥಳೀಯ ಮುಖಂಡರಾದ ಅರವಿಂದ್ ಮಾತನಾಡಿ, ಬಹಳ ವರ್ಷಗಳಿಂದ ತೂಬಗೆರೆ ಗ್ರಾಮಸ್ಥರ ಬಹು ಬೇಡಿಕೆ ಇಂದು ಈಡೇರಿದೆ. ಸ್ಥಳೀಯವಾಗಿ ಬಸ್ ವಾಹನದ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಅನಾನುಕೂಲವಾಗಿತ್ತು. ಶಾಲಾ ವಿದ್ಯಾರ್ಥಿಗಳು ಶಾಲೆಗೆ ತೆರಳಲು ಮುಂಜಾನೆ 7ಕ್ಕೆ ಬಸ್ ವ್ಯವಸ್ಥೆ ಇಲ್ಲದ ಕಾರಣ ಆಟೋಗಳ ಮೇಲೆ ಅವಲಂಬಿತರಾಗಿದ್ದರು. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರಾದ ಕೆ.ಎಚ್.ಮುನಿಯಪ್ಪ ರವರ ಬಳಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಲಾಗಿತ್ತು. ಈ ಹಿನ್ನೆಲೆ ಬಿಎಂಟಿಸಿ ಬಸ್ ಭಾಗ್ಯ ಲಭಿಸಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ತೂಬಗೆರೆ ಪಂಚಾಯಿತಿ ಅಧ್ಯಕ್ಷರಾದ ನಂಜಮ್ಮ ಬಿ ನರಸಿಂಹಮೂರ್ತಿ, ಪಂಚಾಯಿತಿ ಮಾಜಿ ಸದಸ್ಯರಾದ ವೆಂಕಟೇಶ್ ಟಿ ವಿ,  ಕಿಟ್ಟಿ , ಮಾಜಿ ಯೋಧರಾದ ರಾಘವೇಂದ್ರ, ಅನಂತ್ ರಾಜಗೋಪಾಲ, ಮುನಿಕೃಷ್ಣಪ್ಪ ಸೇರಿದಂತೆ ತೂಬಗೆರೆ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

12 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

19 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

22 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

22 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago