ತೂಬಗೆರೆಯಿಂದ ಹೆಬ್ಬಾಳಕ್ಕೆ ಬಿಎಂಟಿಸಿ ಬಸ್ ಸಂಚಾರ: ಗ್ರಾಮಸ್ಥರಲ್ಲಿ ಹರ್ಷೋದ್ಗಾರ

ನಿರಂತರ ಪ್ರಯತ್ನದ ಫಲವಾಗಿ ತೂಬಗೆರೆಯಿಂದ ಹೆಬ್ಬಾಳಕ್ಕೆ ಸಂಚರಿಸಲು ಬಿಎಂಟಿಸಿ ಬಸ್ ಭಾಗ್ಯ ಲಭಿಸಿದೆ. ಈಗ ಜನರ ಮುಖದಲ್ಲಿ ಸಂತೋಷದ ಭಾವನೆ ಕಾಣುತ್ತಿದೆ. ಬಸ್ಸಿನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರೂ ಸರ್ಕಾರಿ ಬಸ್ ಎಂಬುವ ಭಾವನೆ ಮರೆತು ತಮ್ಮ ಸ್ವಂತ ವಾಹನದಂತೆ ಭಾವಿಸಿ ಸ್ವಚ್ಛತೆ ಕಾಪಾಡುವಲ್ಲಿ ಮುಂದಾಗಬೇಕಿದೆ ಎಂದು ಕೆಪಿಸಿಸಿ ಸದಸ್ಯ ಎಸ್.ಆರ್.ಮುನಿರಾಜು ತಿಳಿಸಿದರು.

ಬಸ್ ತನ್ನ ಮೊದಲ ಪ್ರಯಾಣ ಪ್ರಾರಂಭಿಸುವ ಮುನ್ನ ಊರಿನ‌ ಗ್ರಾಮಸ್ಥರು, ಮುಖಂಡರ ಜೊತೆಗೂಡಿ ಬಹಳ ಅದ್ದೂರಿಯಾಗಿ ತಮಟೆ, ನಾದದೊಂದಿಗೆ ಬಸ್ ನ್ನ ಊರಿಗೆ ಸ್ವಾಗತಿಸಿ, ನಂತರ ಗ್ರಾಮದ ಪ್ರಸಿದ್ಧ ದೇವಾಲಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಗುಡಿಯ ಮುಂದೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಗ್ರಾಮಕ್ಕೆ ಬಿಎಂಟಿಸಿ ಬಸ್ಸಿನ ಅವಶ್ಯಕತೆ ತುಂಬಾ ಇದ್ದು, ನಮ್ಮೆಲ್ಲಾ ಗ್ರಾಮಸ್ಥರು, ಮುಖಂಡರ ಸತತ ಪ್ರಯತ್ನದಿಂದಾಗಿ ಇಂದು ಗ್ರಾಮದಿಂದ ಹೆಬ್ಬಾಳದ ಮಾರ್ಗವಾಗಿ ಚಲಿಸುವ ಬಿಎಂಟಿಸಿ ವಾಹನ ಲಭಿಸಿದೆ ಎಂದರು.

ಸ್ಥಳೀಯ ಮುಖಂಡರಾದ ಅರವಿಂದ್ ಮಾತನಾಡಿ, ಬಹಳ ವರ್ಷಗಳಿಂದ ತೂಬಗೆರೆ ಗ್ರಾಮಸ್ಥರ ಬಹು ಬೇಡಿಕೆ ಇಂದು ಈಡೇರಿದೆ. ಸ್ಥಳೀಯವಾಗಿ ಬಸ್ ವಾಹನದ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಅನಾನುಕೂಲವಾಗಿತ್ತು. ಶಾಲಾ ವಿದ್ಯಾರ್ಥಿಗಳು ಶಾಲೆಗೆ ತೆರಳಲು ಮುಂಜಾನೆ 7ಕ್ಕೆ ಬಸ್ ವ್ಯವಸ್ಥೆ ಇಲ್ಲದ ಕಾರಣ ಆಟೋಗಳ ಮೇಲೆ ಅವಲಂಬಿತರಾಗಿದ್ದರು. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರಾದ ಕೆ.ಎಚ್.ಮುನಿಯಪ್ಪ ರವರ ಬಳಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಲಾಗಿತ್ತು. ಈ ಹಿನ್ನೆಲೆ ಬಿಎಂಟಿಸಿ ಬಸ್ ಭಾಗ್ಯ ಲಭಿಸಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ತೂಬಗೆರೆ ಪಂಚಾಯಿತಿ ಅಧ್ಯಕ್ಷರಾದ ನಂಜಮ್ಮ ಬಿ ನರಸಿಂಹಮೂರ್ತಿ, ಪಂಚಾಯಿತಿ ಮಾಜಿ ಸದಸ್ಯರಾದ ವೆಂಕಟೇಶ್ ಟಿ ವಿ,  ಕಿಟ್ಟಿ , ಮಾಜಿ ಯೋಧರಾದ ರಾಘವೇಂದ್ರ, ಅನಂತ್ ರಾಜಗೋಪಾಲ, ಮುನಿಕೃಷ್ಣಪ್ಪ ಸೇರಿದಂತೆ ತೂಬಗೆರೆ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

18 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago