ತೂಬಗೆರೆಯಿಂದ ಹೆಬ್ಬಾಳಕ್ಕೆ ಬಿಎಂಟಿಸಿ ಬಸ್ ಸಂಚಾರ: ಗ್ರಾಮಸ್ಥರಲ್ಲಿ ಹರ್ಷೋದ್ಗಾರ

ನಿರಂತರ ಪ್ರಯತ್ನದ ಫಲವಾಗಿ ತೂಬಗೆರೆಯಿಂದ ಹೆಬ್ಬಾಳಕ್ಕೆ ಸಂಚರಿಸಲು ಬಿಎಂಟಿಸಿ ಬಸ್ ಭಾಗ್ಯ ಲಭಿಸಿದೆ. ಈಗ ಜನರ ಮುಖದಲ್ಲಿ ಸಂತೋಷದ ಭಾವನೆ ಕಾಣುತ್ತಿದೆ. ಬಸ್ಸಿನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರೂ ಸರ್ಕಾರಿ ಬಸ್ ಎಂಬುವ ಭಾವನೆ ಮರೆತು ತಮ್ಮ ಸ್ವಂತ ವಾಹನದಂತೆ ಭಾವಿಸಿ ಸ್ವಚ್ಛತೆ ಕಾಪಾಡುವಲ್ಲಿ ಮುಂದಾಗಬೇಕಿದೆ ಎಂದು ಕೆಪಿಸಿಸಿ ಸದಸ್ಯ ಎಸ್.ಆರ್.ಮುನಿರಾಜು ತಿಳಿಸಿದರು.

ಬಸ್ ತನ್ನ ಮೊದಲ ಪ್ರಯಾಣ ಪ್ರಾರಂಭಿಸುವ ಮುನ್ನ ಊರಿನ‌ ಗ್ರಾಮಸ್ಥರು, ಮುಖಂಡರ ಜೊತೆಗೂಡಿ ಬಹಳ ಅದ್ದೂರಿಯಾಗಿ ತಮಟೆ, ನಾದದೊಂದಿಗೆ ಬಸ್ ನ್ನ ಊರಿಗೆ ಸ್ವಾಗತಿಸಿ, ನಂತರ ಗ್ರಾಮದ ಪ್ರಸಿದ್ಧ ದೇವಾಲಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಗುಡಿಯ ಮುಂದೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಗ್ರಾಮಕ್ಕೆ ಬಿಎಂಟಿಸಿ ಬಸ್ಸಿನ ಅವಶ್ಯಕತೆ ತುಂಬಾ ಇದ್ದು, ನಮ್ಮೆಲ್ಲಾ ಗ್ರಾಮಸ್ಥರು, ಮುಖಂಡರ ಸತತ ಪ್ರಯತ್ನದಿಂದಾಗಿ ಇಂದು ಗ್ರಾಮದಿಂದ ಹೆಬ್ಬಾಳದ ಮಾರ್ಗವಾಗಿ ಚಲಿಸುವ ಬಿಎಂಟಿಸಿ ವಾಹನ ಲಭಿಸಿದೆ ಎಂದರು.

ಸ್ಥಳೀಯ ಮುಖಂಡರಾದ ಅರವಿಂದ್ ಮಾತನಾಡಿ, ಬಹಳ ವರ್ಷಗಳಿಂದ ತೂಬಗೆರೆ ಗ್ರಾಮಸ್ಥರ ಬಹು ಬೇಡಿಕೆ ಇಂದು ಈಡೇರಿದೆ. ಸ್ಥಳೀಯವಾಗಿ ಬಸ್ ವಾಹನದ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಅನಾನುಕೂಲವಾಗಿತ್ತು. ಶಾಲಾ ವಿದ್ಯಾರ್ಥಿಗಳು ಶಾಲೆಗೆ ತೆರಳಲು ಮುಂಜಾನೆ 7ಕ್ಕೆ ಬಸ್ ವ್ಯವಸ್ಥೆ ಇಲ್ಲದ ಕಾರಣ ಆಟೋಗಳ ಮೇಲೆ ಅವಲಂಬಿತರಾಗಿದ್ದರು. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರಾದ ಕೆ.ಎಚ್.ಮುನಿಯಪ್ಪ ರವರ ಬಳಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಲಾಗಿತ್ತು. ಈ ಹಿನ್ನೆಲೆ ಬಿಎಂಟಿಸಿ ಬಸ್ ಭಾಗ್ಯ ಲಭಿಸಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ತೂಬಗೆರೆ ಪಂಚಾಯಿತಿ ಅಧ್ಯಕ್ಷರಾದ ನಂಜಮ್ಮ ಬಿ ನರಸಿಂಹಮೂರ್ತಿ, ಪಂಚಾಯಿತಿ ಮಾಜಿ ಸದಸ್ಯರಾದ ವೆಂಕಟೇಶ್ ಟಿ ವಿ,  ಕಿಟ್ಟಿ , ಮಾಜಿ ಯೋಧರಾದ ರಾಘವೇಂದ್ರ, ಅನಂತ್ ರಾಜಗೋಪಾಲ, ಮುನಿಕೃಷ್ಣಪ್ಪ ಸೇರಿದಂತೆ ತೂಬಗೆರೆ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

5 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

13 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

14 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago