ನಿರಂತರ ಪ್ರಯತ್ನದ ಫಲವಾಗಿ ತೂಬಗೆರೆಯಿಂದ ಹೆಬ್ಬಾಳಕ್ಕೆ ಸಂಚರಿಸಲು ಬಿಎಂಟಿಸಿ ಬಸ್ ಭಾಗ್ಯ ಲಭಿಸಿದೆ. ಈಗ ಜನರ ಮುಖದಲ್ಲಿ ಸಂತೋಷದ ಭಾವನೆ ಕಾಣುತ್ತಿದೆ. ಬಸ್ಸಿನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರೂ ಸರ್ಕಾರಿ ಬಸ್ ಎಂಬುವ ಭಾವನೆ ಮರೆತು ತಮ್ಮ ಸ್ವಂತ ವಾಹನದಂತೆ ಭಾವಿಸಿ ಸ್ವಚ್ಛತೆ ಕಾಪಾಡುವಲ್ಲಿ ಮುಂದಾಗಬೇಕಿದೆ ಎಂದು ಕೆಪಿಸಿಸಿ ಸದಸ್ಯ ಎಸ್.ಆರ್.ಮುನಿರಾಜು ತಿಳಿಸಿದರು.
ಬಸ್ ತನ್ನ ಮೊದಲ ಪ್ರಯಾಣ ಪ್ರಾರಂಭಿಸುವ ಮುನ್ನ ಊರಿನ ಗ್ರಾಮಸ್ಥರು, ಮುಖಂಡರ ಜೊತೆಗೂಡಿ ಬಹಳ ಅದ್ದೂರಿಯಾಗಿ ತಮಟೆ, ನಾದದೊಂದಿಗೆ ಬಸ್ ನ್ನ ಊರಿಗೆ ಸ್ವಾಗತಿಸಿ, ನಂತರ ಗ್ರಾಮದ ಪ್ರಸಿದ್ಧ ದೇವಾಲಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಗುಡಿಯ ಮುಂದೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಗ್ರಾಮಕ್ಕೆ ಬಿಎಂಟಿಸಿ ಬಸ್ಸಿನ ಅವಶ್ಯಕತೆ ತುಂಬಾ ಇದ್ದು, ನಮ್ಮೆಲ್ಲಾ ಗ್ರಾಮಸ್ಥರು, ಮುಖಂಡರ ಸತತ ಪ್ರಯತ್ನದಿಂದಾಗಿ ಇಂದು ಗ್ರಾಮದಿಂದ ಹೆಬ್ಬಾಳದ ಮಾರ್ಗವಾಗಿ ಚಲಿಸುವ ಬಿಎಂಟಿಸಿ ವಾಹನ ಲಭಿಸಿದೆ ಎಂದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ತೂಬಗೆರೆ ಪಂಚಾಯಿತಿ ಅಧ್ಯಕ್ಷರಾದ ನಂಜಮ್ಮ ಬಿ ನರಸಿಂಹಮೂರ್ತಿ, ಪಂಚಾಯಿತಿ ಮಾಜಿ ಸದಸ್ಯರಾದ ವೆಂಕಟೇಶ್ ಟಿ ವಿ, ಕಿಟ್ಟಿ , ಮಾಜಿ ಯೋಧರಾದ ರಾಘವೇಂದ್ರ, ಅನಂತ್ ರಾಜಗೋಪಾಲ, ಮುನಿಕೃಷ್ಣಪ್ಪ ಸೇರಿದಂತೆ ತೂಬಗೆರೆ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…