ತೂಬಗೆರೆಯಿಂದ ಹೆಬ್ಬಾಳಕ್ಕೆ ಬಿಎಂಟಿಸಿ ಬಸ್ ಸಂಚಾರ: ಗ್ರಾಮಸ್ಥರಲ್ಲಿ ಹರ್ಷೋದ್ಗಾರ

ನಿರಂತರ ಪ್ರಯತ್ನದ ಫಲವಾಗಿ ತೂಬಗೆರೆಯಿಂದ ಹೆಬ್ಬಾಳಕ್ಕೆ ಸಂಚರಿಸಲು ಬಿಎಂಟಿಸಿ ಬಸ್ ಭಾಗ್ಯ ಲಭಿಸಿದೆ. ಈಗ ಜನರ ಮುಖದಲ್ಲಿ ಸಂತೋಷದ ಭಾವನೆ ಕಾಣುತ್ತಿದೆ. ಬಸ್ಸಿನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರೂ ಸರ್ಕಾರಿ ಬಸ್ ಎಂಬುವ ಭಾವನೆ ಮರೆತು ತಮ್ಮ ಸ್ವಂತ ವಾಹನದಂತೆ ಭಾವಿಸಿ ಸ್ವಚ್ಛತೆ ಕಾಪಾಡುವಲ್ಲಿ ಮುಂದಾಗಬೇಕಿದೆ ಎಂದು ಕೆಪಿಸಿಸಿ ಸದಸ್ಯ ಎಸ್.ಆರ್.ಮುನಿರಾಜು ತಿಳಿಸಿದರು.

ಬಸ್ ತನ್ನ ಮೊದಲ ಪ್ರಯಾಣ ಪ್ರಾರಂಭಿಸುವ ಮುನ್ನ ಊರಿನ‌ ಗ್ರಾಮಸ್ಥರು, ಮುಖಂಡರ ಜೊತೆಗೂಡಿ ಬಹಳ ಅದ್ದೂರಿಯಾಗಿ ತಮಟೆ, ನಾದದೊಂದಿಗೆ ಬಸ್ ನ್ನ ಊರಿಗೆ ಸ್ವಾಗತಿಸಿ, ನಂತರ ಗ್ರಾಮದ ಪ್ರಸಿದ್ಧ ದೇವಾಲಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಗುಡಿಯ ಮುಂದೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಗ್ರಾಮಕ್ಕೆ ಬಿಎಂಟಿಸಿ ಬಸ್ಸಿನ ಅವಶ್ಯಕತೆ ತುಂಬಾ ಇದ್ದು, ನಮ್ಮೆಲ್ಲಾ ಗ್ರಾಮಸ್ಥರು, ಮುಖಂಡರ ಸತತ ಪ್ರಯತ್ನದಿಂದಾಗಿ ಇಂದು ಗ್ರಾಮದಿಂದ ಹೆಬ್ಬಾಳದ ಮಾರ್ಗವಾಗಿ ಚಲಿಸುವ ಬಿಎಂಟಿಸಿ ವಾಹನ ಲಭಿಸಿದೆ ಎಂದರು.

ಸ್ಥಳೀಯ ಮುಖಂಡರಾದ ಅರವಿಂದ್ ಮಾತನಾಡಿ, ಬಹಳ ವರ್ಷಗಳಿಂದ ತೂಬಗೆರೆ ಗ್ರಾಮಸ್ಥರ ಬಹು ಬೇಡಿಕೆ ಇಂದು ಈಡೇರಿದೆ. ಸ್ಥಳೀಯವಾಗಿ ಬಸ್ ವಾಹನದ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಅನಾನುಕೂಲವಾಗಿತ್ತು. ಶಾಲಾ ವಿದ್ಯಾರ್ಥಿಗಳು ಶಾಲೆಗೆ ತೆರಳಲು ಮುಂಜಾನೆ 7ಕ್ಕೆ ಬಸ್ ವ್ಯವಸ್ಥೆ ಇಲ್ಲದ ಕಾರಣ ಆಟೋಗಳ ಮೇಲೆ ಅವಲಂಬಿತರಾಗಿದ್ದರು. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರಾದ ಕೆ.ಎಚ್.ಮುನಿಯಪ್ಪ ರವರ ಬಳಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಲಾಗಿತ್ತು. ಈ ಹಿನ್ನೆಲೆ ಬಿಎಂಟಿಸಿ ಬಸ್ ಭಾಗ್ಯ ಲಭಿಸಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ತೂಬಗೆರೆ ಪಂಚಾಯಿತಿ ಅಧ್ಯಕ್ಷರಾದ ನಂಜಮ್ಮ ಬಿ ನರಸಿಂಹಮೂರ್ತಿ, ಪಂಚಾಯಿತಿ ಮಾಜಿ ಸದಸ್ಯರಾದ ವೆಂಕಟೇಶ್ ಟಿ ವಿ,  ಕಿಟ್ಟಿ , ಮಾಜಿ ಯೋಧರಾದ ರಾಘವೇಂದ್ರ, ಅನಂತ್ ರಾಜಗೋಪಾಲ, ಮುನಿಕೃಷ್ಣಪ್ಪ ಸೇರಿದಂತೆ ತೂಬಗೆರೆ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು

Ramesh Babu

Journalist

Recent Posts

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

10 hours ago

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

20 hours ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

20 hours ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

1 day ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

1 day ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

1 day ago