ನಿರಂತರ ಪ್ರಯತ್ನದ ಫಲವಾಗಿ ತೂಬಗೆರೆಯಿಂದ ಹೆಬ್ಬಾಳಕ್ಕೆ ಸಂಚರಿಸಲು ಬಿಎಂಟಿಸಿ ಬಸ್ ಭಾಗ್ಯ ಲಭಿಸಿದೆ. ಈಗ ಜನರ ಮುಖದಲ್ಲಿ ಸಂತೋಷದ ಭಾವನೆ ಕಾಣುತ್ತಿದೆ. ಬಸ್ಸಿನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರೂ ಸರ್ಕಾರಿ ಬಸ್ ಎಂಬುವ ಭಾವನೆ ಮರೆತು ತಮ್ಮ ಸ್ವಂತ ವಾಹನದಂತೆ ಭಾವಿಸಿ ಸ್ವಚ್ಛತೆ ಕಾಪಾಡುವಲ್ಲಿ ಮುಂದಾಗಬೇಕಿದೆ ಎಂದು ಕೆಪಿಸಿಸಿ ಸದಸ್ಯ ಎಸ್.ಆರ್.ಮುನಿರಾಜು ತಿಳಿಸಿದರು.
ಬಸ್ ತನ್ನ ಮೊದಲ ಪ್ರಯಾಣ ಪ್ರಾರಂಭಿಸುವ ಮುನ್ನ ಊರಿನ ಗ್ರಾಮಸ್ಥರು, ಮುಖಂಡರ ಜೊತೆಗೂಡಿ ಬಹಳ ಅದ್ದೂರಿಯಾಗಿ ತಮಟೆ, ನಾದದೊಂದಿಗೆ ಬಸ್ ನ್ನ ಊರಿಗೆ ಸ್ವಾಗತಿಸಿ, ನಂತರ ಗ್ರಾಮದ ಪ್ರಸಿದ್ಧ ದೇವಾಲಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಗುಡಿಯ ಮುಂದೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಗ್ರಾಮಕ್ಕೆ ಬಿಎಂಟಿಸಿ ಬಸ್ಸಿನ ಅವಶ್ಯಕತೆ ತುಂಬಾ ಇದ್ದು, ನಮ್ಮೆಲ್ಲಾ ಗ್ರಾಮಸ್ಥರು, ಮುಖಂಡರ ಸತತ ಪ್ರಯತ್ನದಿಂದಾಗಿ ಇಂದು ಗ್ರಾಮದಿಂದ ಹೆಬ್ಬಾಳದ ಮಾರ್ಗವಾಗಿ ಚಲಿಸುವ ಬಿಎಂಟಿಸಿ ವಾಹನ ಲಭಿಸಿದೆ ಎಂದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ತೂಬಗೆರೆ ಪಂಚಾಯಿತಿ ಅಧ್ಯಕ್ಷರಾದ ನಂಜಮ್ಮ ಬಿ ನರಸಿಂಹಮೂರ್ತಿ, ಪಂಚಾಯಿತಿ ಮಾಜಿ ಸದಸ್ಯರಾದ ವೆಂಕಟೇಶ್ ಟಿ ವಿ, ಕಿಟ್ಟಿ , ಮಾಜಿ ಯೋಧರಾದ ರಾಘವೇಂದ್ರ, ಅನಂತ್ ರಾಜಗೋಪಾಲ, ಮುನಿಕೃಷ್ಣಪ್ಪ ಸೇರಿದಂತೆ ತೂಬಗೆರೆ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…