ತೂಬಗೆರೆಯ ಎಂಟು ಹಲಸು ತಳಿಗಳಿಗೆ ಪಿಪಿವಿಎಫ್‌ಆರ್‌ಎ ಪೇಟೆಂಟ್

ದೊಡ್ಡಬಳ್ಳಾಪುರ: ಇಲ್ಲಿನ ತೂಬಗೆರೆ ಹಲಸು ತನ್ನ ಬಣ್ಣ ವಾಸನೆ ಮತ್ತು ರುಚಿಯಿಂದ ವಿಶೇಷವಾಗಿದ್ದು, ಈಗ ಈ ಭಾಗದ ಎಂಟು ತಳಿಗಳಿಗೆ ರಾಷ್ಟ್ರಮಟ್ಟದಲ್ಲಿ ಪೇಟೆಂಟ್ ಪಡೆದಿವೆ. ಈ ನಿಟ್ಟಿನಲ್ಲಿ ತೂಬಗೆರೆ ಹಲಸು ಬೆಳೆಗಾರರ ಸಂಘ, ಜಿಲ್ಲಾ ತೋಟಗಾರಿಕೆ ಇಲಾಖೆ ಮತ್ತು  ಭಾ.ಕೃ.ಅ.ಪ – ಕೃಷಿ ವಿಜ್ಞಾನ ಕೇಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಇವರುಗಳ ಸಹಯೋಗದೊಂದಿಗೆ “ಹಕ್ಕು ಸ್ವಾಮ್ಯ ಪ್ರಮಾಣಪತ್ರ  ವಿತರಣೆ ಮತ್ತು ಕೃಷಿ – ವಿಜ್ಞಾನಿಗಳೊಂದಿಗೆ” ಸಂವಾದ ಕಾರ್ಯಕ್ರಮ ಜರುಗಿತು.

ಕೇಂದ್ರ ತೋಟಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿ ಬರುವ ‘ಸಸ್ಯ ಪ್ರಭೇದಗಳು ಮತ್ತು ರೈತರ ಹಕ್ಕುಗಳ ಸಂರಕ್ಷಣಾ ಪ್ರಾಧಿಕಾರ’ (ಪಿಪಿವಿಫ್‌ಆರ್‌ಎ) ದಿಂದ ತೂಬಗೆರೆ ಸುತ್ತಮುತ್ತಲಿನ ಎಂಟು ಹಲಸು ತಳಿಗಳಿಗೆ, ಹಲಸಿನ ಹಣ್ಣಿನಲ್ಲೇ ಉತ್ಕೃಷ್ಟ ಎಂದು ಗುರುತಿಸಿರುವ ಹಕ್ಕು ಸ್ವಾಮ್ಯ (ಪೇಟೆಂಟ್) ಪ್ರಮಾಣ ಪತ್ರವನ್ನು ವಿಶ್ರಾಂತ ಕುಲಪತಿ ನಾರಾಯಣಗೌಡ ವಿತರಿಸಿದರು.

ಈ ವೇಳೆ ಮಾತನಾಡಿದ ವಿಶ್ರಾಂತ ಕುಲಪತಿ ನಾರಾಯಣಗೌಡ, ಹಲಸಿನ ಹಣ್ಣಿನ ಬಗ್ಗೆ ಕೆಲವು ವರ್ಷಗಳಿಂದ ಸಂಶೋಧನೆಗಳು ನಡೆಯುತ್ತಿವೆ. ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯ ಹಲಸಿನ ಹಣ್ಣುಗಳಲ್ಲಿರುವ ಔಷಧೀಯ ಗುಣ, ಹಲಸಿನ ಹಣ್ಣಿನ ವಿವಿಧ ಉತ್ಪನ್ನಗಳನ್ನು ತಯಾರಿಸುವ ಸಂಬಂಧ ಸಂಶೋಧನೆ ಮಾಡುತ್ತಿದೆ. ಸ್ಥಳೀಯವಾಗಿ ಹಲಸಿನ ಹಣ್ಣು ಮೌಲ್ಯವರ್ಧನೆ, ಉತ್ಪನ್ನಗಳ ಕುರಿತ ಅರಿವು ಮೂಡಿಸುತ್ತಿದೆ. ಹಲಸಿನ ಹಣ್ಣಿನಲ್ಲಿ ವಿಟಮಿನ್ ಅಂಶಗಳು, ಖನಿಜಾಂಶಗಳು, ಕಾರ್ಬೋಹೈಡ್ರೇಟ್ ಅಂಶಗಳು, ಎಲೆಕ್ಟ್ರೋಲೈಟ್ ಅಂಶಗಳು, ಪೊಟಾಷ್ಯಿಯಂ ಹಾಗೂ ನಾರಿನಾಂಶಗಳು ಯಥೇಚ್ಛವಾಗಿ ಸಿಗುತ್ತವೆ. ಇದೊಂದು ಆರೋಗ್ಯಕಾರಿ ಹಣ್ಣು ಎನ್ನುವುದರಲ್ಲಿ ಎರಡು ಮಾತಿಲ್ಲ. ಆದ್ದರಿಂದ ಈಗ ಪೇಟೆಂಟ್ ಪಡೆದ ರೈತರು ತಮ್ಮ ತಳಿಗಳನ್ನು ಜವಾಬ್ದಾರಿಯಿಂದ ಸಂರಕ್ಷಿಸಬೇಕು ಎಂದರು.

ರೈತರಿಗಾಗಿ ‘ಹಲಸಿನ ಸಾಗುವಳಿ ಮತ್ತು ಮಾರುಕಟ್ಟೆ’ ಹಲಸಿನ ಮೌಲ್ಯವರ್ಧಿತ ಪದಾರ್ಥಗಳು ಮತ್ತು ಹಲಸು ಹಚ್ಚುವ ಯಂತ್ರದ ಕುರಿತು ಜಿಕೆವಿಕೆ ವಿಜ್ಞಾನಿ ಡಾ ಶಾಮಲ ಮಾಹಿತಿ ನೀಡಿದರು.

ತೂಬಗೆರೆ ಹಲಸು ಬೆಳೆಗಾರರ ಸಂಘದ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ತೂಬಗೆರೆ ಸೇರಿದಂತೆ ತಾಲೂಕಿನಲ್ಲಿ 1 ಸಾವಿರ ಟನ್‌ ಹಲಸು ವಹಿವಾಟು ಆಗಿದೆ. ಯಾವುದೇ ರಸ್ತೆ ಪಕ್ಕ ನೋಡಿದರೂ ಹಲಸು ಕಾಣುತ್ತದೆ. ಬೆಂಗಳೂರು ಅಥವಾ ದೇವನಹಳ್ಳಿ ವಿಮಾನ ನಿಲ್ದಾಣ ಸಮೀಪ ಎಲ್ಲಾಸೌಲಭ್ಯ ಒಳಗೊಂಡಂತೆ ಹಲಸು ಮಾರುಕಟ್ಟೆ ವ್ಯವಸ್ಥೆ ಮಾಡಿದರೆ ಅನುಕೂಲವಾಗಲಿದೆ ಎಂದರು.

ಪಿಪಿಎಫ್‌ಆರ್‌ಎ ಪೇಟೆಂಟ್ ಪಡೆದ ಹಲಸು ಬೆಳೆಗಾರ ಕೃಷ್ಣಪ್ಪ ಮಾತಾನಾಡಿ, ನಮ್ಮ ಹೊಲದ ಹಲಸಿನ ಹಣ್ಣಿಗೆ ರಾಷ್ಟ್ರ ಮಟ್ಟದ ಮಾನ್ಯತೆ ನೀಡಿರುವುದು ಸಂತಸ ತಂದಿದೆ. ಮುಂದಿನ 18 ವರ್ಷ ಈ ಹಣ್ಣಿನ ತಳಿಯನ್ನು ಬೇರೆ ಯಾರೂ ಬೆಳೆಸಲು ಅವಕಾಶ ಸಿಗುವುದಿಲ್ಲ. ಹಣ್ಣಿನ ಮಾಲೀಕರು ಅನುಮತಿ ನೀಡಿದವರು ಮಾತ್ರ ಸಸಿಗಳನ್ನು ಬೆಳೆಸಿ, ಮಾರಾಟ ಮಾಡಲು ಅವಕಾಶವಿದೆ ಎಂದರು.

ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ದೊಡ್ಡಬಳ್ಳಾಪುರ ತಾಲೂಕಿನ ಮೆಳೆಕೋಟೆ ಕ್ರಾಸ್ ನಲ್ಲಿರುವ ಎಸ್.ಜೆ.ಸಿ.ಆರ್ ಶಾಲೆಯ ರಂಜಿತಾ ಎ.ಸಿ ರವರಿಗೆ ಸಂಘದಿಂದ ಪ್ರತಿಭಾ ಪುರಸ್ಕಾರ ಮಾಡಲಾಯಿತು.

ಹಲಸಿನ ಹಣ್ಣಿನಿಂದ ತಯಾರಿಸಿದ ಹಪ್ಪಳ, ಚಿಪ್ಸ್ ನಂತಹ ಉತ್ಪನ್ನಗಳ ಪ್ರದರ್ಶನ ಸಹ‌ ನಡೆಯಿತು.

ಕಾರ್ಯಕ್ರಮದಲ್ಲಿ ಜಿಕೆವಿಕೆ ವಿಜ್ಞಾನಿಗಳಾದ ಡಾ.ಹನುಮಂತರಾಯ, ಡಾ. ಬಾಬು ರೈ, ಡಾ. ಸವಿತಾ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅರವಿಂದ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುನಿಲಕ್ಷ್ಮಮ್ಮ ರಾಮಕೃಷ್ಣ,  ಸದಸ್ಯ ಕೃಷ್ಣಪ್ಪ (ಕಿಟ್ಟಿ).ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜು ಅಪ್ಪಯ್ಯಣ್ಣ, ತೆಂಗು ನಾರು ಮಂಡಳಿ ಅಧ್ಯಕ್ಷ ವೆಂಕಟೇಶ್ ಬಾಬು, ತೂಬಗೆರೆ ಹಲಸು ಬೆಳೆಗಾರರ ಸಂಘದ ಅಧ್ಯಕ್ಷ ಸುರೇಶ್, ವಕೀಲ ಪ್ರತಾಪ್, ಮುಖಂಡರಾದ ವೆಂಕಟೇಶ್, ಕನಕದಾಸ,  ರವಿಸಿದ್ದಪ್ಪ, ಉದಯ ಆರಾಧ್ಯ, ವಾಸು, ರಂಗಪ್ಪ, ಶ್ರೀಧರ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ- ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…

33 minutes ago

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

4 hours ago

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

14 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

18 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

1 day ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

1 day ago