ದೊಡ್ಡಬಳ್ಳಾಪುರ: ಇಲ್ಲಿನ ತೂಬಗೆರೆ ಹಲಸು ತನ್ನ ಬಣ್ಣ ವಾಸನೆ ಮತ್ತು ರುಚಿಯಿಂದ ವಿಶೇಷವಾಗಿದ್ದು, ಈಗ ಈ ಭಾಗದ ಎಂಟು ತಳಿಗಳಿಗೆ ರಾಷ್ಟ್ರಮಟ್ಟದಲ್ಲಿ ಪೇಟೆಂಟ್ ಪಡೆದಿವೆ. ಈ ನಿಟ್ಟಿನಲ್ಲಿ ತೂಬಗೆರೆ ಹಲಸು ಬೆಳೆಗಾರರ ಸಂಘ, ಜಿಲ್ಲಾ ತೋಟಗಾರಿಕೆ ಇಲಾಖೆ ಮತ್ತು ಭಾ.ಕೃ.ಅ.ಪ – ಕೃಷಿ ವಿಜ್ಞಾನ ಕೇಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಇವರುಗಳ ಸಹಯೋಗದೊಂದಿಗೆ “ಹಕ್ಕು ಸ್ವಾಮ್ಯ ಪ್ರಮಾಣಪತ್ರ ವಿತರಣೆ ಮತ್ತು ಕೃಷಿ – ವಿಜ್ಞಾನಿಗಳೊಂದಿಗೆ” ಸಂವಾದ ಕಾರ್ಯಕ್ರಮ ಜರುಗಿತು.
ಕೇಂದ್ರ ತೋಟಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿ ಬರುವ ‘ಸಸ್ಯ ಪ್ರಭೇದಗಳು ಮತ್ತು ರೈತರ ಹಕ್ಕುಗಳ ಸಂರಕ್ಷಣಾ ಪ್ರಾಧಿಕಾರ’ (ಪಿಪಿವಿಫ್ಆರ್ಎ) ದಿಂದ ತೂಬಗೆರೆ ಸುತ್ತಮುತ್ತಲಿನ ಎಂಟು ಹಲಸು ತಳಿಗಳಿಗೆ, ಹಲಸಿನ ಹಣ್ಣಿನಲ್ಲೇ ಉತ್ಕೃಷ್ಟ ಎಂದು ಗುರುತಿಸಿರುವ ಹಕ್ಕು ಸ್ವಾಮ್ಯ (ಪೇಟೆಂಟ್) ಪ್ರಮಾಣ ಪತ್ರವನ್ನು ವಿಶ್ರಾಂತ ಕುಲಪತಿ ನಾರಾಯಣಗೌಡ ವಿತರಿಸಿದರು.
ರೈತರಿಗಾಗಿ ‘ಹಲಸಿನ ಸಾಗುವಳಿ ಮತ್ತು ಮಾರುಕಟ್ಟೆ’ ಹಲಸಿನ ಮೌಲ್ಯವರ್ಧಿತ ಪದಾರ್ಥಗಳು ಮತ್ತು ಹಲಸು ಹಚ್ಚುವ ಯಂತ್ರದ ಕುರಿತು ಜಿಕೆವಿಕೆ ವಿಜ್ಞಾನಿ ಡಾ ಶಾಮಲ ಮಾಹಿತಿ ನೀಡಿದರು.
ತೂಬಗೆರೆ ಹಲಸು ಬೆಳೆಗಾರರ ಸಂಘದ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ತೂಬಗೆರೆ ಸೇರಿದಂತೆ ತಾಲೂಕಿನಲ್ಲಿ 1 ಸಾವಿರ ಟನ್ ಹಲಸು ವಹಿವಾಟು ಆಗಿದೆ. ಯಾವುದೇ ರಸ್ತೆ ಪಕ್ಕ ನೋಡಿದರೂ ಹಲಸು ಕಾಣುತ್ತದೆ. ಬೆಂಗಳೂರು ಅಥವಾ ದೇವನಹಳ್ಳಿ ವಿಮಾನ ನಿಲ್ದಾಣ ಸಮೀಪ ಎಲ್ಲಾಸೌಲಭ್ಯ ಒಳಗೊಂಡಂತೆ ಹಲಸು ಮಾರುಕಟ್ಟೆ ವ್ಯವಸ್ಥೆ ಮಾಡಿದರೆ ಅನುಕೂಲವಾಗಲಿದೆ ಎಂದರು.
ಪಿಪಿಎಫ್ಆರ್ಎ ಪೇಟೆಂಟ್ ಪಡೆದ ಹಲಸು ಬೆಳೆಗಾರ ಕೃಷ್ಣಪ್ಪ ಮಾತಾನಾಡಿ, ನಮ್ಮ ಹೊಲದ ಹಲಸಿನ ಹಣ್ಣಿಗೆ ರಾಷ್ಟ್ರ ಮಟ್ಟದ ಮಾನ್ಯತೆ ನೀಡಿರುವುದು ಸಂತಸ ತಂದಿದೆ. ಮುಂದಿನ 18 ವರ್ಷ ಈ ಹಣ್ಣಿನ ತಳಿಯನ್ನು ಬೇರೆ ಯಾರೂ ಬೆಳೆಸಲು ಅವಕಾಶ ಸಿಗುವುದಿಲ್ಲ. ಹಣ್ಣಿನ ಮಾಲೀಕರು ಅನುಮತಿ ನೀಡಿದವರು ಮಾತ್ರ ಸಸಿಗಳನ್ನು ಬೆಳೆಸಿ, ಮಾರಾಟ ಮಾಡಲು ಅವಕಾಶವಿದೆ ಎಂದರು.
ಹಲಸಿನ ಹಣ್ಣಿನಿಂದ ತಯಾರಿಸಿದ ಹಪ್ಪಳ, ಚಿಪ್ಸ್ ನಂತಹ ಉತ್ಪನ್ನಗಳ ಪ್ರದರ್ಶನ ಸಹ ನಡೆಯಿತು.
ಕಾರ್ಯಕ್ರಮದಲ್ಲಿ ಜಿಕೆವಿಕೆ ವಿಜ್ಞಾನಿಗಳಾದ ಡಾ.ಹನುಮಂತರಾಯ, ಡಾ. ಬಾಬು ರೈ, ಡಾ. ಸವಿತಾ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅರವಿಂದ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುನಿಲಕ್ಷ್ಮಮ್ಮ ರಾಮಕೃಷ್ಣ, ಸದಸ್ಯ ಕೃಷ್ಣಪ್ಪ (ಕಿಟ್ಟಿ).ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜು ಅಪ್ಪಯ್ಯಣ್ಣ, ತೆಂಗು ನಾರು ಮಂಡಳಿ ಅಧ್ಯಕ್ಷ ವೆಂಕಟೇಶ್ ಬಾಬು, ತೂಬಗೆರೆ ಹಲಸು ಬೆಳೆಗಾರರ ಸಂಘದ ಅಧ್ಯಕ್ಷ ಸುರೇಶ್, ವಕೀಲ ಪ್ರತಾಪ್, ಮುಖಂಡರಾದ ವೆಂಕಟೇಶ್, ಕನಕದಾಸ, ರವಿಸಿದ್ದಪ್ಪ, ಉದಯ ಆರಾಧ್ಯ, ವಾಸು, ರಂಗಪ್ಪ, ಶ್ರೀಧರ ಮತ್ತಿತರರು ಉಪಸ್ಥಿತರಿದ್ದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…