ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ ಮುರಿದಿರುವುದು ಬೆಳಕಿಗೆ ಬಂದಿದ್ದು, ಒಳನುಗ್ಗಿದ ದುಷ್ಕರ್ಮಿಗಳು ಹುಂಡಿ ಹಾಗೂ ದೇವಿಯ ತಾಲಿ ಆಭರಣವನ್ನು ಕದ್ದೊಯ್ದಿರುವುದು ತಿಳಿದುಬಂದಿದೆ.

ಜನವಸತಿ ಪ್ರದೇಶದಲ್ಲೇ ಇರುವ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಮಾಹಿತಿ ತಿಳಿದ ಕೂಡಲೇ ಸಂಬಂಧಿತ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚೆಗೆ ಗ್ರಾಮದಲ್ಲಿ ಅಪರಿಚಿತ ವಲಸೆ ಕಾರ್ಮಿಕರ ಸಂಚಾರ ಹೆಚ್ಚಾಗಿರುವುದು ಹಾಗೂ ಅನುಮಾನಾಸ್ಪದ ವ್ಯಕ್ತಿಗಳ ಹಾವಳಿ ಕಂಡುಬರುತ್ತಿರುವುದರಿಂದ ಗ್ರಾಮಸ್ಥರಲ್ಲಿ ಭದ್ರತೆ ಕುರಿತ ಆತಂಕ ಮತ್ತಷ್ಟು ಹೆಚ್ಚಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಪ್ರಕರಣ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಇತ್ತೀಚೆಗೆ ಇಂತಹ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆ ಗ್ರಾಮಾಂತರ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಬಲಪಡಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಯುವಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ…

18 hours ago

ಪೊಲೀಸ್: ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ……

ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…

20 hours ago

ಕಸ್ತೂರಿ ರಂಗನ್ ವರದಿ; ‘ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ’- ಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ  ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…

1 day ago

ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ರೈತ ಸಂಘ ಆಗ್ರಹ

ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…

1 day ago

ಶಿಷ್ಟಾಚಾರ ವಿವಾದಕ್ಕೆ ಮತ್ತಷ್ಟು ಕಾವು: ಶಾಸಕರಿಗೆ ಕಾನೂನು, ಶಿಷ್ಟಾಚಾರದ ಅರಿವಿಲ್ಲ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…

1 day ago

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

1 day ago