ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ತೂಬಗೆರೆಯ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಇಂದು ಭಕ್ತಿಪೂರ್ಣವಾಗಿ ಬ್ರಹ್ಮರಥೋತ್ಸವ ನಡೆಯಿತು.
ಬ್ರಹ್ಮರಥೋತ್ಸವದ ಅಂಗವಾಗಿ ದೇಗುಲವನ್ನು ಆಕರ್ಷಕವಾಗಿ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು, ಭಕ್ತರಿಗೆ ಅಗತ್ಯ ಸೌಲಭ್ಯಗಳ ವ್ಯವಸ್ಥೆ ಮಾಡಲಾಗಿತ್ತು..
ಇಂದು ಬೆಳಿಗ್ಗೆ 11.30ರಿಂದ 11.47 ಗಂಟೆಯೊಳಗೆ ಅಭಿಜಿತ್ ಲಗ್ನದಲ್ಲಿ ಭಗವಂತನ ಅನುಗ್ರಹದಿಂದ ಬ್ರಹ್ಮರಥೋತ್ಸವ ನೆರವೇರಿತು.
ಇಂದು ಮುಂಜಾನೆಯಿಂದಲೇ ಅನ್ನಸಂತರ್ಪಣೆ ವ್ಯವಸ್ಥೆ ಕಲ್ಪಿಸಲಾಗಿದ್ದು, ವಿವಿಧ ಸಂಘಟನೆಗಳ ವತಿಯಿಂದ ಪಾನಕ ಮತ್ತು ಮಜ್ಜಿಗೆ ವಿತರಣೆ ನಡೆಯಿತು.
ಇದೇ ವೇಳೆ, ಚಂದ್ರಗ್ರಹಣ ಇರುವ ಹಿನ್ನೆಲೆಯಲ್ಲಿ ದೇವಾಲಯವನ್ನು ಮಧ್ಯಾಹ್ನ 1.00 ಗಂಟೆಗೆ ಮುಚ್ಚಲಾಗುತ್ತದೆ. ಗ್ರಹಣ ದೋಷ ನಿವಾರಣೆ ಬಳಿಕ ದೇವಸ್ಥಾನದಲ್ಲಿ ಶುದ್ಧೀಕರಣ ಕಾರ್ಯ ನೆರವೇರಿಸಿ, ಸಂಜೆ 7.30ರಿಂದ ಭಕ್ತರಿಗೆ ಮತ್ತೆ ದರ್ಶನ ವ್ಯವಸ್ಥೆ ಮಾಡಲಾಗುತ್ತದೆ.
ರಾತ್ರಿ 8.00 ಗಂಟೆಗೆ ವರ್ಣರಂಜಿತ ಬಾಣಬಿರುಸುಗಳ ಪ್ರದರ್ಶನದೊಂದಿಗೆ ಸ್ವಾಮಿಗೆ ಸೂರ್ಯಮಂಡಲೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ನಿರುದ್ಯೋಗ ಯುವಕ/ಯುವತಿಯರಿಗೆ ಉಚಿತವಾಗಿ ಲಘು/ಭಾರಿ ವಾಹನ ಚಾಲನಾ ತರಬೇತಿ ಹಾಗೂ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಂದಾಯ ಸೇವೆಗಳ ಗ್ಯಾರಂಟಿ ಸಮರ್ಪಣಾ ಸಮಾವೇಶದ ಕಾರ್ಯಕ್ರಮವನ್ನು ಮಾರ್ಚ್ 04 ರಂದು ಹೊಸಕೋಟೆ ನಗರದಲ್ಲಿರುವ ಶ್ರೀ…
ಇಂದು ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿಗೆ ಬೆಳಗ್ಗೆ 07:30ಕ್ಕೆ ಅಭಿಷೇಕ ಪ್ರಾರಂಭವಾಗಿ 08:30ಕ್ಕೆ ಮಹಾಮಂಗಳಾರತಿ ನೆರವೇರಸಲಾಯಿತು.…
ದೊಡ್ಡಬಳ್ಳಾಪುರ ಮತ್ತು ಚಂದಾಪುರಕ್ಕೆ ಶೀಘ್ರವಾಗಿ ಟ್ರಾಫಿಲ್ ಪೊಲೀಸ್ ಸ್ಟೇಷನ್ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ…
ಬೆಂಗಳೂರಿನ ಅಂಜನಾಪುರದಲ್ಲಿರುವ ಸೋಫಾ ಮ್ಯಾನುಫ್ಯಾಕ್ಚರಿಂಗ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 5 ಕೋಟಿ ರೂ. ಬೆಲೆ ಬಾಳುವ ಕಚ್ಚಾ…
ದೊಡ್ಡಬಳ್ಳಾಪುರ: ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ನಗರದ ಕೋಟೆ ರಸ್ತೆಯಲ್ಲಿನ ಶಿಯಾ ಮುಸ್ಲಿಂ ಸಮುದಾಯದ…