ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ತೂಬಗೆರೆಯ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಇಂದು ಭಕ್ತಿಪೂರ್ಣವಾಗಿ ಬ್ರಹ್ಮರಥೋತ್ಸವ ನಡೆಯಿತು.
ಬ್ರಹ್ಮರಥೋತ್ಸವದ ಅಂಗವಾಗಿ ದೇಗುಲವನ್ನು ಆಕರ್ಷಕವಾಗಿ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು, ಭಕ್ತರಿಗೆ ಅಗತ್ಯ ಸೌಲಭ್ಯಗಳ ವ್ಯವಸ್ಥೆ ಮಾಡಲಾಗಿತ್ತು..
ಇಂದು ಬೆಳಿಗ್ಗೆ 11.30ರಿಂದ 11.47 ಗಂಟೆಯೊಳಗೆ ಅಭಿಜಿತ್ ಲಗ್ನದಲ್ಲಿ ಭಗವಂತನ ಅನುಗ್ರಹದಿಂದ ಬ್ರಹ್ಮರಥೋತ್ಸವ ನೆರವೇರಿತು.
ಇಂದು ಮುಂಜಾನೆಯಿಂದಲೇ ಅನ್ನಸಂತರ್ಪಣೆ ವ್ಯವಸ್ಥೆ ಕಲ್ಪಿಸಲಾಗಿದ್ದು, ವಿವಿಧ ಸಂಘಟನೆಗಳ ವತಿಯಿಂದ ಪಾನಕ ಮತ್ತು ಮಜ್ಜಿಗೆ ವಿತರಣೆ ನಡೆಯಿತು.
ಇದೇ ವೇಳೆ, ಚಂದ್ರಗ್ರಹಣ ಇರುವ ಹಿನ್ನೆಲೆಯಲ್ಲಿ ದೇವಾಲಯವನ್ನು ಮಧ್ಯಾಹ್ನ 1.00 ಗಂಟೆಗೆ ಮುಚ್ಚಲಾಗುತ್ತದೆ. ಗ್ರಹಣ ದೋಷ ನಿವಾರಣೆ ಬಳಿಕ ದೇವಸ್ಥಾನದಲ್ಲಿ ಶುದ್ಧೀಕರಣ ಕಾರ್ಯ ನೆರವೇರಿಸಿ, ಸಂಜೆ 7.30ರಿಂದ ಭಕ್ತರಿಗೆ ಮತ್ತೆ ದರ್ಶನ ವ್ಯವಸ್ಥೆ ಮಾಡಲಾಗುತ್ತದೆ.
ರಾತ್ರಿ 8.00 ಗಂಟೆಗೆ ವರ್ಣರಂಜಿತ ಬಾಣಬಿರುಸುಗಳ ಪ್ರದರ್ಶನದೊಂದಿಗೆ ಸ್ವಾಮಿಗೆ ಸೂರ್ಯಮಂಡಲೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…