ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಬೆಂಬಲಿತ ಅಭ್ಯರ್ಥಿಗಳು 12 ಸ್ಥಾನಗಳ ಪೈಕಿ 9 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಆಡಳಿತದ ಚುಕ್ಕಾಣಿ ಹಿಡಿದಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 3 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ.

ತೇರಿನಬೀದಿಯ ಸಮುದಾಯ ಭವನದಲ್ಲಿ ಭಾನುವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮತದಾನ ನಡೆಯಿತು. ಆರಂಭದಿಂದಲೇ ಮತದಾರರು ಉತ್ಸಾಹದಿಂದ ಆಗಮಿಸಿ ಮತ ಚಲಾಯಿಸಿದರು. ಮಹಿಳೆಯರು, ಹಿರಿಯ ನಾಗರಿಕರು ಹಾಗೂ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು, ಚುನಾವಣೆ ಶಾಂತಿಯುತ ಹಾಗೂ ವ್ಯವಸ್ಥಿತವಾಗಿ ನಡೆಯಿತು.

ಮತದಾನ ಮುಕ್ತಾಯವಾದ ತಕ್ಷಣ ಚುನಾವಣಾಧಿಕಾರಿಗಳು ಮತ ಎಣಿಕೆ ಕಾರ್ಯ ಆರಂಭಿಸಿದರು. ಎಣಿಕೆ ಪೂರ್ಣಗೊಂಡ ಬಳಿಕ ಅಧಿಕೃತ ಫಲಿತಾಂಶ ಪ್ರಕಟಿಸಲಾಯಿತು. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಬಿಜೆಪಿ–ಜೆಡಿಎಸ್ ಮೈತ್ರಿಯ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಪರಸ್ಪರ ಅಭಿನಂದನೆ ಸಲ್ಲಿಸುವ ಮೂಲಕ ವಿಜಯೋತ್ಸವ ಆಚರಿಸಿದರು.

ಬಿಜೆಪಿ ಮುಖಂಡ ಪ್ರತಾಪ್ ಮಾತನಾಡಿ, “ಎನ್‌ಡಿಎ ಮೈತ್ರಿಕೂಟದ ಸಂಘಟಿತ ಕಾರ್ಯವೈಖರಿ, ಕಾರ್ಯಕರ್ತರ ಪರಿಶ್ರಮ ಹಾಗೂ ರೈತರು ಮತ್ತು ಷೇರುದಾರರು ವ್ಯಕ್ತಪಡಿಸಿದ ವಿಶ್ವಾಸಕ್ಕೆ ಸಂದ ಜಯ ಇದಾಗಿದೆ. ಸಂಘದ ಅಭಿವೃದ್ಧಿ, ಪಾರದರ್ಶಕ ಆಡಳಿತ ಹಾಗೂ ರೈತರ ಹಿತಾಸಕ್ತಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ನೂತನ ಆಡಳಿತ ಮಂಡಳಿ ಕಾರ್ಯನಿರ್ವಹಿಸಲಿದೆ,” ಎಂದು ಹೇಳಿದರು.

ಜೆಡಿಎಸ್ ಮುಖಂಡ ನಾಗರಾಜು ಮಾತನಾಡಿ, “ಸಹಕಾರ ಕ್ಷೇತ್ರದ ಅಭಿವೃದ್ಧಿ ಹಾಗೂ ರೈತರ ಕಲ್ಯಾಣಕ್ಕೆ ಮತದಾರರು ಬೆಂಬಲ ವ್ಯಕ್ತಪಡಿಸಿದ್ದಾರೆ. ಷೇರುದಾರರ ನಿರೀಕ್ಷೆಗೆ ತಕ್ಕಂತೆ ಸಂಘವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಲಾಗುವುದು,” ಎಂದರು.

ಚುನಾವಣೆ ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಯಲು ಸಹಕರಿಸಿದ ಮತದಾರರು, ಚುನಾವಣಾ ಸಿಬ್ಬಂದಿ ಮತ್ತು ಪೊಲೀಸ್ ಇಲಾಖೆಗೆ ಸಂಘದ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ಸದಸ್ಯ ಪುರೋಷೋತ್ತಮ್, ಬಿಜೆಪಿ ಹೋಬಳಿ ಅಧ್ಯಕ್ಷ ಕೃಷ್ಣಪ್ಪ, ಬಿಜೆಪಿ ಮುಖಂಡರಾದ ಧನುಂಜಯ ಮತ್ತು ವಾಸು, ಜೆಡಿಎಸ್ ಮುಖಂಡರಾದ ಕನಕದಾಸ, ಉದಯ ಆರಾಧ್ಯ, ಕೃಷ್ಣಚಾರಿ ಸೇರಿದಂತೆ ಮೈತ್ರಿಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ನೂತನವಾಗಿ ಆಯ್ಕೆಯಾದ ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ನನ್ನ ತಂದೆಯವರಾದ ಶ್ರೀ ಅಶ್ವತ್ಥನಾರಾಯಣ ಗೌಡ ಅವರು ಅಭೂತಪೂರ್ವ ಜಯ ಸಾಧಿಸಿರುವುದು ನಮಗೆ ಅತ್ಯಂತ ಸಂತಸದ ಕ್ಷಣವಾಗಿದೆ.

ಈ ಗೆಲುವಿಗೆ ಆಶೀರ್ವದಿಸಿ, ಬೆಂಬಲ ನೀಡಿ, ಸಹಕರಿಸಿದ ನನ್ನ ನೆಚ್ಚಿನ ಶಾಸಕರಾದ ಧೀರಜ್ ಮುನಿರಾಜ್ ಅಣ್ಣ ಅವರಿಗೆ, ರೈತ ಬಾಂಧವರಿಗೆ, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಹಾಗೂ ಮುಖಂಡರಿಗೆ, ಪಕ್ಷದ ಕಾರ್ಯಕರ್ತರಿಗೆ, ಸ್ನೇಹಿತರಿಗೆ, ಹಿತೈಷಿಗಳಿಗೆ ಮತ್ತು ನೇರ-ಪರೋಕ್ಷವಾಗಿ ಸಹಕರಿಸಿದ ಪ್ರತಿಯೊಬ್ಬರಿಗೂ ನನ್ನ ಹೃತ್ಪೂರ್ವಕ ಹಾಗೂ ಅನಂತ ಧನ್ಯವಾದಗಳು.

ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ಮತ್ತು ಬೆಂಬಲಕ್ಕೆ ಸದಾ ಚಿರಋಣಿಯಾಗಿರುತ್ತೇನೆ ಎಂದು ಶಾಸಕ ಧೀರಜ್ ಮುನಿರಾಜ್ ಅವರ ಆಪ್ತ ಸಹಾಯಕ ಶಿವು ಹೇಳಿದರು…

ಆಯ್ಕೆಯಾದ ನಿರ್ದೇಶಕರು:

ಸಾಮಾನ್ಯ ಕ್ಷೇತ್ರದಿಂದ: ಅಶ್ವತ್ಥನಾರಾಯಣ್ ಎನ್., ರಾಜಕುಮಾರ್, ಅರವಿಂದ್ ಎನ್., ಸತ್ಯನಾರಾಯಣಸ್ವಾಮಿ ಹಾಗೂ ಸತೀಶ್ ಎಂ.

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲು ಕ್ಷೇತ್ರದಿಂದ: ಗಂಗರಾಜು ಎನ್.ಸಿ.

ಪರಿಶಿಷ್ಟ ಪಂಗಡ (ಎಸ್‌ಟಿ) ಮೀಸಲು ಕ್ಷೇತ್ರದಿಂದ: ನಾರಾಯಣಪ್ಪ.

ಹಿಂದುಳಿದ ವರ್ಗ (ಪ್ರವರ್ಗ–ಅ) ಕ್ಷೇತ್ರದಿಂದ: ಟಿ.ಜಿ. ವಾಸುದೇವ.

ಹಿಂದುಳಿದ ವರ್ಗ (ಪ್ರವರ್ಗ–ಬ) ಕ್ಷೇತ್ರದಿಂದ: ಸುಬ್ರಮಣಿ.

ಮಹಿಳಾ ಮೀಸಲು ಕ್ಷೇತ್ರದಿಂದ: ವಿನೋದಮ್ಮ ಹಾಗೂ ಆನಂದಮ್ಮ.

ಸಾಲಗಾರರಲ್ಲದ ಕ್ಷೇತ್ರದಿಂದ: ಟಿ.ಆರ್. ವೆಂಕಟಲಕ್ಷ್ಮಿ.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

16 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

21 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago