ತೂಬಗೆರೆ ಗ್ರಾಮದಲ್ಲಿ ಒಂದೇ ರಾತ್ರಿ ಸರಣಿ ಕಳ್ಳತನ: ಶನಿಮಹಾತ್ಮ ದೇವಾಲಯ ಹಾಗೂ ಖಾಸಗಿ ಶಾಲೆಯಲ್ಲಿ ಕಳ್ಳತನ

ತಾಲೂಕಿನ ತೂಬಗೆರೆಯಲ್ಲಿರುವ ಶನಿಮಹಾತ್ಮ ದೇವಾಲಯದಲ್ಲಿ ರಾತ್ರೋರಾತ್ರಿ ಹುಂಡಿ ಕದ್ದೊಯ್ದ ಕಳ್ಳರು. ಇದರ ಜೊತೆಗೆ ದೇವಸ್ಥಾನ ಪಕ್ಕದಲ್ಲೇ ಇರುವ ಖಾಸಗಿ ಶಾಲೆಯಲ್ಲೂ ಸಹ ಕಳ್ಳತನ ನಡೆದಿದೆ.

ರಾತ್ರಿ ಯಾರೂ ಇಲ್ಲದ ಸಮಯದಲ್ಲಿ ದೇವಾಲಯದ ಬಾಗಿಲಿನ ಬೀಗ ಹೊಡೆದು ಭಕ್ತರು ಹಾಕಿರುವ ಕಾಣಿಕೆ ಹಣಕ್ಕಾಗಿ ಆಸೆಪಟ್ಟು ಹುಂಡಿಯನ್ನು ಎಸ್ಕೇಪ್ ಮಾಡಿರುವ ಕಳ್ಳರು.

ಅದೇರೀತಿ ಎಸ್ ಎಲ್ ಆರ್ ಎಸ್ ಶಾಲೆಯ ಪ್ರಾಂಶುಪಾಲರ ಕೊಠಡಿ ಮತ್ತು ಕಚೇರಿಗೆ ಕಳ್ಳರು ನುಗ್ಗಿದ್ದಾರೆ. ಕೊಠಡಿಯಲ್ಲಿದ್ದ ಕಪಾಟುಗಳನ್ನು ದೋಚಿದ ಕಳ್ಳರು ಕಡತಗಳನ್ನು ಎಸೆದಿದ್ದಾರೆ. ಉಪ ಪ್ರಾಂಶುಪಾಲರ ಕೊಠಡಿಯಿಂದ ಸುಮಾರು 15 ಸಾವಿರ ರೂ. ಹಾಗೂ ಮತ್ತೊಂದು ಕೊಠಡಿಯಲ್ಲಿದ್ದ ಸುಮಾರು 6 ಸಾವಿರ ರೂ. ಸೇರಿದಂತೆ ಸಿಸಿಟಿವಿ ಕ್ಯಾಮೆರಾ ರೆಕಾರ್ಡಿಂಗ್‌ಗಳನ್ನು ಸಂಗ್ರಹಿಸಿಟ್ಟಿದ್ದ ಡಿವಿಆರ್ ಬಾಕ್ಸ್‌ನೊಂದಿಗೆ ಪರಾರಿಯಾಗಿದ್ದಾರೆ.

ಇತ್ತೀಚೆಗೆ ತೂಬಗೆರೆ ಹೋಬಳಿಯ ಸುತ್ತಾಮುತ್ತ ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿವೆ. ದೂರಿನ‌ ಮೇರೆಗೆ ಗ್ರಾಮಾಂತರ ಠಾಣಾ ಪೊಲೀಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

45 minutes ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

16 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

23 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago