ತೂಬಗೆರೆ ಗ್ರಾಮದಲ್ಲಿ ಒಂದೇ ರಾತ್ರಿ ಸರಣಿ ಕಳ್ಳತನ: ಶನಿಮಹಾತ್ಮ ದೇವಾಲಯ ಹಾಗೂ ಖಾಸಗಿ ಶಾಲೆಯಲ್ಲಿ ಕಳ್ಳತನ

ತಾಲೂಕಿನ ತೂಬಗೆರೆಯಲ್ಲಿರುವ ಶನಿಮಹಾತ್ಮ ದೇವಾಲಯದಲ್ಲಿ ರಾತ್ರೋರಾತ್ರಿ ಹುಂಡಿ ಕದ್ದೊಯ್ದ ಕಳ್ಳರು. ಇದರ ಜೊತೆಗೆ ದೇವಸ್ಥಾನ ಪಕ್ಕದಲ್ಲೇ ಇರುವ ಖಾಸಗಿ ಶಾಲೆಯಲ್ಲೂ ಸಹ ಕಳ್ಳತನ ನಡೆದಿದೆ.

ರಾತ್ರಿ ಯಾರೂ ಇಲ್ಲದ ಸಮಯದಲ್ಲಿ ದೇವಾಲಯದ ಬಾಗಿಲಿನ ಬೀಗ ಹೊಡೆದು ಭಕ್ತರು ಹಾಕಿರುವ ಕಾಣಿಕೆ ಹಣಕ್ಕಾಗಿ ಆಸೆಪಟ್ಟು ಹುಂಡಿಯನ್ನು ಎಸ್ಕೇಪ್ ಮಾಡಿರುವ ಕಳ್ಳರು.

ಅದೇರೀತಿ ಎಸ್ ಎಲ್ ಆರ್ ಎಸ್ ಶಾಲೆಯ ಪ್ರಾಂಶುಪಾಲರ ಕೊಠಡಿ ಮತ್ತು ಕಚೇರಿಗೆ ಕಳ್ಳರು ನುಗ್ಗಿದ್ದಾರೆ. ಕೊಠಡಿಯಲ್ಲಿದ್ದ ಕಪಾಟುಗಳನ್ನು ದೋಚಿದ ಕಳ್ಳರು ಕಡತಗಳನ್ನು ಎಸೆದಿದ್ದಾರೆ. ಉಪ ಪ್ರಾಂಶುಪಾಲರ ಕೊಠಡಿಯಿಂದ ಸುಮಾರು 15 ಸಾವಿರ ರೂ. ಹಾಗೂ ಮತ್ತೊಂದು ಕೊಠಡಿಯಲ್ಲಿದ್ದ ಸುಮಾರು 6 ಸಾವಿರ ರೂ. ಸೇರಿದಂತೆ ಸಿಸಿಟಿವಿ ಕ್ಯಾಮೆರಾ ರೆಕಾರ್ಡಿಂಗ್‌ಗಳನ್ನು ಸಂಗ್ರಹಿಸಿಟ್ಟಿದ್ದ ಡಿವಿಆರ್ ಬಾಕ್ಸ್‌ನೊಂದಿಗೆ ಪರಾರಿಯಾಗಿದ್ದಾರೆ.

ಇತ್ತೀಚೆಗೆ ತೂಬಗೆರೆ ಹೋಬಳಿಯ ಸುತ್ತಾಮುತ್ತ ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿವೆ. ದೂರಿನ‌ ಮೇರೆಗೆ ಗ್ರಾಮಾಂತರ ಠಾಣಾ ಪೊಲೀಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

14 minutes ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

4 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

5 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

12 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

23 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago