12ನೇ ಶತಮಾನದಲ್ಲಿ ಬಿಜ್ಜಳ ರಾಜನ ಆಸ್ಥಾನದ ಪ್ರಧಾನಮಂತ್ರಿಯಾಗಿದ್ದ ಜಗಜ್ಯೋತಿ ಬಸವೇಶ್ವರರು ಸಮಾನತೆ, ಸಹೋದರತೆ, ಮತ್ತು ಶಾಂತಿಯನ್ನು ಆಧ್ಯಾತ್ಮಿಕ ಪ್ರಜಾಪ್ರಭುತ್ವ ಮೂಲಕ ಅನುಷ್ಠಾನಗೊಳಿಸಲು ಮುಂದಾದರು ಎಂದು ಗ್ರಾಮದ ಮುಖಂಡ ಉದಯ್ ಆರಾಧ್ಯ ತಿಳಿಸಿದರು.
ತಾಲೂಕಿನ ತೂಬಗೆರೆ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಬಸವ ಜಯಂತಿ ಪ್ರಯುಕ್ತ ತೂಬಗೆರೆ ಹೋಬಳಿ ಕೇಂದ್ರದಲ್ಲಿ ಬಸವಮೂರ್ತಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಪ್ರಸಾದ ವಿನಿಯೋಗ ಮಾಡುವುದರ ಮೂಲಕ ಮಹನೀಯರ ಜಯಂತಿಯನ್ನು ಆಚರಿಸಿದರು. ಈ ವೇಳೆ ಮಾತನಾಡಿದ ಅವರು, ಬ್ರಾಹ್ಮಣ್ಯ – ವೈದಿಕ ಪರಂಪರೆಗೆ ಸೇರಿದ ಅನಿಷ್ಟಗಳ ವಿರುದ್ಧ ಹೋರಾಡಿ ಶೋಷಿತ ವ್ಯಕ್ತಿಗಳ ಸುಧಾರಣೆಗೆ ನಿಂತ ಮಹಾ ಮಾನವತಾವಾದಿ ಎಂದರು.
ಬಸವಣ್ಣನವರ ವಿಚಾರಧಾರೆಗಳನ್ನು ವಿಶ್ವಕ್ಕೆ ಪರಿಚಯಿಸಲು ಕರ್ನಾಟಕದ ಗಾಂಧಿಯಂದೇ ಪ್ರಸಿದ್ಧರಾಗಿರುವ ಹರ್ಡೇಕರ್ ಮಂಜಪ್ಪನವರು 1913ರಲ್ಲಿ ಮೊಟ್ಟ ಮೊದಲ ಬಾರಿಗೆ ಬಸವ ಜಯಂತಿ ಆಚರಣೆ ಜಾರಿಗೆ ತಂದರು. ಇದರ ಜೊತೆಗೆ ರೈತಾಪಿ ಜನರು ತಮ್ಮ ಮನೆಯ ಹಸುಗಳು ಎತ್ತುಗಳನ್ನು ಪೂಜಿಸುವುದು ಸಾಕೆತ್ತುಗಳಿಗೆ ವಿಶೇಷ ಭಕ್ಷಗಳನ್ನು ನೀಡುವುದು ಅತ್ಯಂತ ವಿಶೇಷವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಮಹಾನಂದ ಆರಾಧ್ಯ, ಬೇಕರಿ ಬಸವರಾಜ್, ವೀರಭದ್ರಾರಾಧ್ಯ, ಸೋಮಣ್ಣ, ರೇಣುಕಾರಾಧ್ಯ, ಲೋಕೇಶ್, ಗ್ರಾಮದ ಹಿರಿಯರಾದ ವೆಂಕಟೇಶಪ್ಪ, ನಾರಾಯಣಪ್ಪ, ರವಿ ಮುಂತಾದವರಿದ್ದರು.
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…