ತೂಬಗೆರೆ ಗ್ರಾಮದಲ್ಲಿ ಬಸವ ಜಯಂತಿ ಅದ್ಧೂರಿ ಆಚರಣೆ

12ನೇ ಶತಮಾನದಲ್ಲಿ ಬಿಜ್ಜಳ ರಾಜನ ಆಸ್ಥಾನದ ಪ್ರಧಾನಮಂತ್ರಿಯಾಗಿದ್ದ ಜಗಜ್ಯೋತಿ ಬಸವೇಶ್ವರರು ಸಮಾನತೆ, ಸಹೋದರತೆ, ಮತ್ತು ಶಾಂತಿಯನ್ನು ಆಧ್ಯಾತ್ಮಿಕ ಪ್ರಜಾಪ್ರಭುತ್ವ ಮೂಲಕ ಅನುಷ್ಠಾನಗೊಳಿಸಲು ಮುಂದಾದರು ಎಂದು ಗ್ರಾಮದ ಮುಖಂಡ ಉದಯ್ ಆರಾಧ್ಯ ತಿಳಿಸಿದರು.

ತಾಲೂಕಿನ ತೂಬಗೆರೆ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಬಸವ ಜಯಂತಿ ಪ್ರಯುಕ್ತ ತೂಬಗೆರೆ ಹೋಬಳಿ ಕೇಂದ್ರದಲ್ಲಿ ಬಸವಮೂರ್ತಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಪ್ರಸಾದ ವಿನಿಯೋಗ ಮಾಡುವುದರ ಮೂಲಕ ಮಹನೀಯರ ಜಯಂತಿಯನ್ನು ಆಚರಿಸಿದರು. ಈ ವೇಳೆ ಮಾತನಾಡಿದ ಅವರು, ಬ್ರಾಹ್ಮಣ್ಯ – ವೈದಿಕ ಪರಂಪರೆಗೆ ಸೇರಿದ ಅನಿಷ್ಟಗಳ ವಿರುದ್ಧ ಹೋರಾಡಿ ಶೋಷಿತ ವ್ಯಕ್ತಿಗಳ ಸುಧಾರಣೆಗೆ ನಿಂತ ಮಹಾ ಮಾನವತಾವಾದಿ ಎಂದರು.

ಬಸವಣ್ಣನವರ ವಿಚಾರಧಾರೆಗಳನ್ನು ವಿಶ್ವಕ್ಕೆ ಪರಿಚಯಿಸಲು ಕರ್ನಾಟಕದ ಗಾಂಧಿಯಂದೇ ಪ್ರಸಿದ್ಧರಾಗಿರುವ ಹರ್ಡೇಕರ್ ಮಂಜಪ್ಪನವರು 1913ರಲ್ಲಿ ಮೊಟ್ಟ ಮೊದಲ ಬಾರಿಗೆ ಬಸವ ಜಯಂತಿ ಆಚರಣೆ ಜಾರಿಗೆ ತಂದರು. ಇದರ ಜೊತೆಗೆ ರೈತಾಪಿ ಜನರು ತಮ್ಮ ಮನೆಯ ಹಸುಗಳು ಎತ್ತುಗಳನ್ನು ಪೂಜಿಸುವುದು ಸಾಕೆತ್ತುಗಳಿಗೆ ವಿಶೇಷ ಭಕ್ಷಗಳನ್ನು ನೀಡುವುದು ಅತ್ಯಂತ ವಿಶೇಷವಾಗಿದೆ ಎಂದರು.

ನೂರಾರು ಭಕ್ತರು ಗ್ರಾಮದ ಬಸವೇಶ್ವರ ದೇವಾಲಯದಲ್ಲಿ ಬಸವ ಮೂರ್ತಿಗೆ ವಿಶೇಷ ಅಲಂಕಾರದೊಂದಿಗೆ ಪೂಜಿಸಿ ಭಕ್ತಿಭಾವ ಮೆರೆದರು. ಆಗಮಿಸಿದ ಎಲ್ಲ ಭಕ್ತಾದಿಗಳಿಗೆ ಪಾನಕ ಕೋಸಂಬರಿ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಮಹಾನಂದ ಆರಾಧ್ಯ, ಬೇಕರಿ ಬಸವರಾಜ್, ವೀರಭದ್ರಾರಾಧ್ಯ, ಸೋಮಣ್ಣ, ರೇಣುಕಾರಾಧ್ಯ, ಲೋಕೇಶ್, ಗ್ರಾಮದ ಹಿರಿಯರಾದ ವೆಂಕಟೇಶಪ್ಪ, ನಾರಾಯಣಪ್ಪ, ರವಿ ಮುಂತಾದವರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

9 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

17 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

17 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago