12ನೇ ಶತಮಾನದಲ್ಲಿ ಬಿಜ್ಜಳ ರಾಜನ ಆಸ್ಥಾನದ ಪ್ರಧಾನಮಂತ್ರಿಯಾಗಿದ್ದ ಜಗಜ್ಯೋತಿ ಬಸವೇಶ್ವರರು ಸಮಾನತೆ, ಸಹೋದರತೆ, ಮತ್ತು ಶಾಂತಿಯನ್ನು ಆಧ್ಯಾತ್ಮಿಕ ಪ್ರಜಾಪ್ರಭುತ್ವ ಮೂಲಕ ಅನುಷ್ಠಾನಗೊಳಿಸಲು ಮುಂದಾದರು ಎಂದು ಗ್ರಾಮದ ಮುಖಂಡ ಉದಯ್ ಆರಾಧ್ಯ ತಿಳಿಸಿದರು.
ತಾಲೂಕಿನ ತೂಬಗೆರೆ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಬಸವ ಜಯಂತಿ ಪ್ರಯುಕ್ತ ತೂಬಗೆರೆ ಹೋಬಳಿ ಕೇಂದ್ರದಲ್ಲಿ ಬಸವಮೂರ್ತಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಪ್ರಸಾದ ವಿನಿಯೋಗ ಮಾಡುವುದರ ಮೂಲಕ ಮಹನೀಯರ ಜಯಂತಿಯನ್ನು ಆಚರಿಸಿದರು. ಈ ವೇಳೆ ಮಾತನಾಡಿದ ಅವರು, ಬ್ರಾಹ್ಮಣ್ಯ – ವೈದಿಕ ಪರಂಪರೆಗೆ ಸೇರಿದ ಅನಿಷ್ಟಗಳ ವಿರುದ್ಧ ಹೋರಾಡಿ ಶೋಷಿತ ವ್ಯಕ್ತಿಗಳ ಸುಧಾರಣೆಗೆ ನಿಂತ ಮಹಾ ಮಾನವತಾವಾದಿ ಎಂದರು.
ಬಸವಣ್ಣನವರ ವಿಚಾರಧಾರೆಗಳನ್ನು ವಿಶ್ವಕ್ಕೆ ಪರಿಚಯಿಸಲು ಕರ್ನಾಟಕದ ಗಾಂಧಿಯಂದೇ ಪ್ರಸಿದ್ಧರಾಗಿರುವ ಹರ್ಡೇಕರ್ ಮಂಜಪ್ಪನವರು 1913ರಲ್ಲಿ ಮೊಟ್ಟ ಮೊದಲ ಬಾರಿಗೆ ಬಸವ ಜಯಂತಿ ಆಚರಣೆ ಜಾರಿಗೆ ತಂದರು. ಇದರ ಜೊತೆಗೆ ರೈತಾಪಿ ಜನರು ತಮ್ಮ ಮನೆಯ ಹಸುಗಳು ಎತ್ತುಗಳನ್ನು ಪೂಜಿಸುವುದು ಸಾಕೆತ್ತುಗಳಿಗೆ ವಿಶೇಷ ಭಕ್ಷಗಳನ್ನು ನೀಡುವುದು ಅತ್ಯಂತ ವಿಶೇಷವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಮಹಾನಂದ ಆರಾಧ್ಯ, ಬೇಕರಿ ಬಸವರಾಜ್, ವೀರಭದ್ರಾರಾಧ್ಯ, ಸೋಮಣ್ಣ, ರೇಣುಕಾರಾಧ್ಯ, ಲೋಕೇಶ್, ಗ್ರಾಮದ ಹಿರಿಯರಾದ ವೆಂಕಟೇಶಪ್ಪ, ನಾರಾಯಣಪ್ಪ, ರವಿ ಮುಂತಾದವರಿದ್ದರು.
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…